Headlines

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!?

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ  ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್‌ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…

Read More

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….

Read More

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ಹಲ್ಲೆಗೊಳಗಾಗಿದ್ದ ಅಮ್ಜದ್ ಚಿಕಿತ್ಸೆ ಫಲಿಸದೇ ಸಾವು | ಪೊಲೀಸರ ರಾ ಏಜೆಂಟ್ ಕೊಲೆಗೆ ಕಾರಣವೇನು..!!??

ಅಮ್ಜದ್ ಅಪರಾಧ ಲೋಕದ ನಡುವೆ ಬದುಕುತ್ತಿದ್ದ, ಆದರೆ ಕಾನೂನಿನ ಬದಿಯಲ್ಲಿದ್ದ. ಹೊರಗಿನ ಕಣ್ಣಿಗೆ ಇಸ್ಪೀಟು ದಂಧೆಗಾರ, ಪೊಲೀಸರ ದೃಷ್ಟಿಗೆ ರಾ ಏಜೆಂಟ್! ಇದೇ ಅಮ್ಜದ್‌ನ ನಿಜವಾದ ಚಿತ್ರ. ಶಿವಮೊಗ್ಗ ನಗರದ ಗಲಭೆ, ಕೊಲೆ, ಕ್ರೈಂ ಎಂಬ ಎಲ್ಲ ಕಥೆಗಳಲ್ಲಿ ಅಜ್ಞಾತವಾಗಿ ಭಾಗಿಯಾಗಿದ್ದ ಈ ವ್ಯಕ್ತಿ, ಇನ್ನು ಇಹಲೋಕದಲ್ಲಿಲ್ಲ. ಪೊಲೀಸರ ನಂಬಿಕೆಯ “ರಹಸ್ಯ ಹಸ್ತ” ಅಮ್ಜದ್ ಹೆಸರು ಕೇಳಿದರೆ ಕ್ರೈಂ ಲೋಕದವರು ನಡುಗುತ್ತಿದ್ದರು. ಆದರೆ ಪೊಲೀಸರ ಕಚೇರಿಯಲ್ಲಿ ಅವನು “ಅವಶ್ಯಕ ಮಾಹಿತಿ ಮೂಲ” ಆಗಿದ್ದ. ರಾಜ್ಯದ 500ಕ್ಕೂ ಹೆಚ್ಚು…

Read More

ಮದುವೆ ವಿವಾದ – ಇಬ್ಬರು ಯುವಕರಿಗೆ ಚೂರಿ ಇರಿತ

ಮದುವೆ ವಿವಾದ – ಇಬ್ಬರು ಯುವಕರಿಗೆ ಚೂರಿ ಇರಿತ ಶಿವಮೊಗ್ಗ ನಗರದಲ್ಲಿನ ಊರುಗಡೂರು ಬಡಾವಣೆಯಲ್ಲಿ ನಡೆದ ವೈಯಕ್ತಿಕ ಗಲಾಟೆ ಎರಡು ಕುಟುಂಬಗಳ ನಡುವೆ ಭೀಕರ ರೂಪ ಪಡೆದು, ಇಬ್ಬರು ಯುವಕರು ಮಾರಕಾಸ್ತ್ರದ ಇರಿತಕ್ಕೊಳಗಾಗಿರುವ ಘಟನೆ ನಡೆದಿದೆ. ಗಾಯಗೊಂಡ ಶಬ್ಬೀರ್ ಹಾಗೂ ಶಹಬಾಜ್ ಎಂಬವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಘಟನೆ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಮಾಧ್ಯಮಗಳಿಗೆ ವಾಟ್ಸಪ್ ಮೂಲಕ ಮಾಹಿತಿ ನೀಡಿ, “ಇದು ಸಂಪೂರ್ಣವಾಗಿ…

Read More

ಸಾಮಾಜಿಕ ಕಳಕಳಿ, ಕೊಡುಗೈದಾನಿ ಹಾಲಸ್ವಾಮಿಗೌಡರಿಗೆ ವೀರಶೈವ ಸಮಾಜಭಾಂದವರ ಭಾವಪೂರ್ಣ ಶ್ರದ್ದಾಂಜಲಿ

ಸಾಮಾಜಿಕ ಕಳಕಳಿ, ಕೊಡುಗೈದಾನಿ ಹಾಲಸ್ವಾಮಿಗೌಡರಿಗೆ ವೀರಶೈವ ಸಮಾಜಭಾಂದವರ ಭಾವಪೂರ್ಣ ಶ್ರದ್ದಾಂಜಲಿ ರಿಪ್ಪನ್‌ಪೇಟೆ;-ವ್ಯಕ್ತಿ ಜೀವಂತವಾಗಿದ್ದಾಗ ಮಾಡಿದ ಸಮಾಜಮುಖಿ  ಕಾರ್ಯಗಳ ಬಗ್ಗೆ ಜನ ಮಾತನಾಡುವುದಿಲ್ಲ. ಅದೇ ವ್ಯಕ್ತಿ ಮರಣ ಹೊಂದಿದಾಗ ಅವರು ಮಾಡಿದ ಸಾಮಾಜಿಕ ಸತ್ಕಾರ್ಯಗಳು ಮಾತನಾಡುವಂತೆ ಮಾಡುತ್ತವೆ ಎಂಬುದಕ್ಕೆ ಬೆಳಕೋಡು ಹಾಲಸ್ವಾಮಿಗೌಡರೇ ಸಾಕ್ಷಿಯಾಗಿದ್ದಾರೆಂದು ಶ್ರೀಶೈಲ ಜಗದ್ಗುರುಗಳು ಮತ್ತು ಆನಂದಪುರ ಮುರುಘಾರಾಜೇಂದ್ರ ಮಠದ ಜಗದ್ಗುರು ಹೇಳಿದರು. ಇತ್ತೀಚೇಗೆ ನಿಧನರಾದ ರಿಪ್ಪನ್‌ಪೇಟೆ ಸಮೀಪದ ಬೆಳಕೋಡು ಗ್ರಾಮದ ಹಾಲಸ್ವಾಮಿಗೌಡರಿಗೆ ವೀರಶೈವ ಸಮಾಜ ಭಾಂದವರು ಮತ್ತು ಕುಟುಂಬದವರು ಆಯೋಜಿಸಲಾದ ಭಾವಪೂರ್ಣ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ದೂರವಾಣಿಯಲ್ಲಿ…

Read More

ಫೇಸ್ಬುಕ್ ವೀಡಿಯೋ ವಿವಾದ – ರಿಪ್ಪನ್‌ಪೇಟೆ ಠಾಣೆಯಲ್ಲಿ ದಾಖಲಾಯ್ತು ಪ್ರತ್ಯೇಕ ಎರಡು ದರೋಡೆ ಪ್ರಕರಣ

ಫೇಸ್ಬುಕ್ ವೀಡಿಯೋ ವಿವಾದ -ರಿಪ್ಪನ್‌ಪೇಟೆ ಠಾಣೆಯಲ್ಲಿ ದಾಖಲಾಯ್ತು ಎರಡು ಪ್ರತ್ಯೇಕ ದರೋಡೆ ಪ್ರಕರಣ ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣವಾದ ಪೇಸ್ಬುಕ್ ನಲ್ಲಿ ಅಪ್ಲೋಡ್ ಮಾಡಿದ್ದ ಒಂದು ವೀಡಿಯೋಗೆ ಸಂಬಂಧಿಸಿದಂತೆ ಉಂಟಾದ ಗಲಾಟೆಯು ಎರಡು ಪ್ರತ್ಯೇಕ ದರೋಡೆ ಪ್ರಕರಣ ದಾಖಲಾಗುವ ಮೂಲಕ ಅಂತ್ಯಗೊಂಡಿರುವ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪ್ಪನ್‌ಪೇಟೆ ನಿವಾಸಿ ಶ್ವೇತಾ ಆಚಾರ್ಯ ಎಂಬುವವರು ನೀಡಿದ ದೂರಿನ ಮೇರೆಗೆ ನಾಲ್ವರ ವಿರುದ್ದ ಬಿಎನ್ ಎಸ್ 309(6) ಅಡಿಯಲ್ಲಿ ದರೋಡೆ ಪ್ರಕರಣ ದಾಖಲಾಗಿದ್ದು , ಇನ್ನೊಂದು…

Read More

ಗೊಡೌನ್ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಅಡಿಕೆ ಕಳ್ಳತನ

ಗೊಡೌನ್ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಅಡಿಕೆ ಕಳ್ಳತನ ಶಿವಮೊಗ್ಗ: ನಗರದ ಆರ್.ಎಂ.ಎಲ್. ನಗರ ಪ್ರದೇಶದಲ್ಲಿ ಕಳ್ಳರು ಬೀಗ ಒಡೆದು ಗೋದಾಮಿನಿಂದ ಅಡಿಕೆ ಕಳ್ಳತನ ಮಾಡಿದ ಘಟನೆ ನಡೆದಿದೆ. ಉದ್ಯಮಿಯೊಬ್ಬರಿಗೆ ಸೇರಿದ ಈ ಗೋದಾಮಿನಿಂದ ಸುಮಾರು 8 ಲಕ್ಷ ರೂಪಾಯಿ ಮೌಲ್ಯದ 20 ಚೀಲ ಅಡಿಕೆ ನಾಪತ್ತೆಯಾಗಿವೆ. ದೂರುದಾರರು ತಮ್ಮ ಮಳಿಗೆಯಲ್ಲಿ ಇರಿಸಲು ಸ್ಥಳಾವಕಾಶವಿಲ್ಲದೆ, ಕಳೆದ ಸೆಪ್ಟೆಂಬರ್ 21ರಂದು ಅನುಪಿನಕಟ್ಟೆ ಸಮೀಪದ ಶೀಟಿನ ಗೋದಾಮಿನಲ್ಲಿ ಅಡಿಕೆಯನ್ನು ಇಟ್ಟಿದ್ದರು. ಮಾರಾಟಕ್ಕೆ ಸಿದ್ಧಪಡಿಸಿದ್ದ ಈ ಅಡಿಕೆಯನ್ನು ನೋಡಿಕೊಳ್ಳಲು ಪರಿಚಯಸ್ಥರೊಬ್ಬರಿಗೆ…

Read More

ಶಿವಮೊಗ್ಗ ಜಿಲ್ಲೆಯ ಹಲವು ಸಬ್ ಇನ್ಸ್ ಪೆಕ್ಟರ್ ಗಳು ವರ್ಗಾವಣೆ

Many sub-inspectors in Shivamogga district transferred ಶಿವಮೊಗ್ಗ : ಪೂರ್ವ ವಲಯ ವ್ಯಾಪ್ತಿಯ ೩೫ ಸಬ್‌ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ, ಪೊಲೀಸ್ ಮಹಾನಿರೀಕ್ಷಕ ಬಿ.ಆರ್. ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ. ಈ ವರ್ಗಾವಣೆಯ ಮೂಲಕ ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಪಿಎಸ್‌ಐಗಳಿಗೆ ಹೊಸ ನಿಯೋಜನೆ ದೊರೆತಿದೆ. ಟಿ.ಎಂ. ನಾಗರಾಜು : ಸಾಗರ ಟೌನ್‌ನಿಂದ ಹಾವೇರಿ ಟೌನ್ ಪೊಲೀಸ್ ಠಾಣೆಗೆ ಆರ್.ಹೆಚ್. ಸಂಗೊಳ್ಳಿ : ಭದ್ರಾವತಿ ಹೊಸಮನೆ ಶಿವಾಜಿ ಸರ್ಕಲ್‌ನಿಂದ ಭದ್ರಾವತಿ ಟ್ರಾಫಿಕ್ ಠಾಣೆಗೆ ಅಕ್ಬರ್…

Read More

ರಿಪ್ಪನ್‌ಪೇಟೆ – ದಸರಾ ಕುಸ್ತಿ ಪಂದ್ಯಾವಳಿ | ಸಿರಿ , ಪರಶುರಾಮ್ ಅದ್ಬುತ ಆಟಕ್ಕೆ ಪ್ರೇಕ್ಷಕರು ಫಿದಾ

ರಿಪ್ಪನ್‌ಪೇಟೆ;-ಇತ್ತೀಚಿನ ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕುಸ್ತಿ ವಿನಾಶದತ್ತ ಸಾಗುತ್ತಿದೆ.ಕುಸ್ತಿ ಅಭ್ಯಾಸದಿಂದ ದೇಹದಲ್ಲಿನ ಸ್ನಾಯುಗಳು ಸದೃಡವಾಗುವ ಮೂಲಕ ದೈಹಿಕ ಸಾಮರ್ಥ್ಯವನ್ನು  ವೃದ್ದಿಯಾಗುವುದರೊಂದಿಗೆ ಅರೋಗ್ಯವಂತರನ್ನಾಗಿಸುತ್ತದೆ ಎಂದು ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಎನ್.ಸತೀಶ್ ಹೇಳಿದರು. ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟçಸೇನಾ ಸಮಿತಿಯ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ  ವಿಜಯ ದಶಮಿಯ ಅಂಗವಾಗಿ ಏರ್ಪಡಿಸಲಾಗಿದ್ದ  ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಮಾತನಾಡಿದರು. ಕುಕ್ಕಳಲೇ ಮುಗುಟಿಕೊಪ್ಪ ಸಿರಿ ಮತ್ತು ರಾಣೆಬೆನ್ನೂರು ಮಾರುತಿ,ಹಾಗೂ ಕೆರೆಹಳ್ಳಿ ಪರಶುರಾಮ ಮತ್ತು ಹನುಮಂತ ಇವರ ಕುಸ್ತಿ  ಪ್ರದರ್ಶನ …

Read More

ರಿಪ್ಪನ್‌ಪೇಟೆ; ಶರನ್ನವರಾತ್ರಿ ಸಂಭ್ರಮಾಚರಣೆಯೊಂದಿಗೆ ಸಂಪನ್ನ

ರಿಪ್ಪನ್‌ಪೇಟೆ; ಶರನ್ನವರಾತ್ರಿ ಸಂಭ್ರಮಾಚರಣೆಯೊಂದಿಗೆ ಸಂಪನ್ನ ರಿಪ್ಪನ್‌ಪೇಟೆ;-ಇತಿಹಾಸ ಪ್ರಸಿದ್ದ ಶ್ರೀ ಸಿದ್ದಿವಿನಾಯಕ ಸ್ವಾಮಿ ಮತ್ತು ಜಗನ್ಮಾತೆ ಆನ್ನಪೂರ್ಣೇಶವರಿ ಅಮ್ಮನವರ ದೇವಸ್ಥಾನದಲ್ಲಿ ಶರನ್ನವರಾತ್ರಿ ವಿಶೇಷ ಪೂಜಾ ಕಾರ್ಯಕ್ರಮ ಮತ್ತು ಆಯುಧ ಪೂಜೆ ಹಾಗೂ ವಿಜಯದಶಮಿಯ  ಪ್ರಯುಕ್ತ ಲೋಕಕಲ್ಯಾಣಾರ್ಥವಾಗಿ  `ಚಂಡಿಕಾ ಹೋಮ’ಇನ್ನಿತರ ಪೂಜಾ ಕೈಂಕರ್ಯಗಳು ಸಂಭ್ರಮಾಚರಣೆಯೊಂದಿಗೆ ಸಂಪನ್ನಗೊಂಡಿತು. ದೇವಸ್ಥಾನದ ಪ್ರಧಾನ ಅರ್ಚಕ ಗುರುರಾಜ ಭಟ್ ಇವರ ನೇತೃತ್ವದಲ್ಲಿ ನಿತ್ಯ ಅಮ್ಮನವರ ಸನ್ನಿಧಾನದಲ್ಲಿ ಚಂಡಿಕಾ ಪಾರಾಯಣ ಮತ್ತು ವಿಶೇಷ ಪೂಜಾ ಕಾರ್ಯಗಳು ನಡೆದು ವಿಜಯ ದಶಮಿಯಂದು ಲೋಕಕಲ್ಯಾಣಾರ್ಥವಾಗಿ “ಚಂಡಿಕಾ ಹೋಮ’’ ನಂತರ ತೀರ್ಥಪ್ರಸಾದ…

Read More

ಅ.6 ರಿಂದ ಅರಸಾಳು, ಕುಂಸಿಯಲ್ಲಿ ಇಂಟರ್ಸಿಟಿ ರೈಲು‌ ನಿಲುಗಡೆ

ಅ.6 ರಿಂದ ಅರಸಾಳು, ಕುಂಸಿಯಲ್ಲಿ ಇಂಟರ್ಸಿಟಿ ರೈಲು‌ ನಿಲುಗಡೆ ಶಿವಮೊಗ್ಗ :  ಕುಂಸಿ ಮತ್ತು ಅರಸಾಳು ರೈಲ್ವೆ ನಿಲ್ದಾಣಗಳಲ್ಲಿ ಬೆಂಗಳೂರು – ತಾಳಗುಪ್ಪ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ: 20651 / 20652) ನಿಲುಗಡೆಗೆ ಸೌಲಭ್ಯ ಒದಗಿಸಲು ತಾತ್ಕಾಲಿಕವಾಗಿ ಆದೇಶ ಹೊರಡಿಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ತಿಳಿಸಿದ್ದಾರೆ. ಈ ನಿಲುಗಡೆ ಸೌಲಭ್ಯವನ್ನು 2025ರ ಅಕ್ಟೋಬರ್ 6 ರಿಂದ 2026ರ ಜನವರಿ 5 ರವರೆಗೆ ಪ್ರಾಯೋಗಿಕ ಆಧಾರದ ಮೇಲೆ ಜಾರಿಗೊಳಿಸಿ ರೈಲ್ವೆ ಇಲಾಖೆಯು ಆದೇಶ ನೀಡಿದೆ….

Read More

ಬೈಕ್ ನಲ್ಲಿ ಹೋಗುತಿದ್ದವರ ಮೇಲೆ ಚೂರಿ ಇರಿತ – ಐವರ ಬಂಧನ

ಬೈಕ್ ನಲ್ಲಿ ಹೋಗುತಿದ್ದವರ ಮೇಲೆ ಚೂರಿ ಇರಿತ – ಐವರ ಬಂಧನ ಶಿವಮೊಗ್ಗ: ನಿನ್ನೆ ಸಂಜೆ ನಗರದಲ್ಲಿ ಸ್ಕ್ರ್ಯಾಪ್ ವ್ಯಾಪಾರಿ ಅಮ್ಜಾದ್ ಸೇರಿದಂತೆ ಇಬ್ಬರ ಮೇಲೆ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ದೊಡ್ಡಪೇಟೆ ಪೊಲೀಸರು ಇಂದು ಐದು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಮಿಥುನ್ ಕುಮಾರ್ ಜಿ.ಕೆ. ಅವರು ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿನಿನ್ನೆ ಸಂಜೆ ಸುಮಾರು 7:30ರ ಸುಮಾರಿಗೆ ಅಮ್ಜದ್ ಎಂಬುವವರ ಮೇಲೆ ಬೈಕ್‌ನಲ್ಲಿ ಬಂದ…

Read More