Breaking
12 Jan 2026, Mon

12 ದೇವಸ್ಥಾನದಲ್ಲಿ ಹುಂಡಿ ಕಳುವು ಮಾಡಿದ್ದ ಅಂತರ್ ಜಿಲ್ಲಾ ಹುಂಡಿ‌ ಕಳ್ಳರ ಬಂಧನ :

ಶಿವಮೊಗ್ಗ: ಅಂತರ ಜಿಲ್ಲಾ ದೇವಾಲಯಗಳಲ್ಲಿ ಕಳವು ಮಾಡಿದ್ದ ಇಬ್ಬರು ಹುಂಡಿ ಕಳ್ಳರನ್ನು ಹೊಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ, ಹಾವೇರಿ ದಾವಣಗೆರೆ ಜಿಲ್ಲೆಯ ಒಟ್ಟು 12 ದೇವಾಲಯಗಳಲ್ಲಿ ಹುಂಡಿಗಳ ಕಳ್ಳತನ ಮಾಡಿರುವುದು ಬಯಲಿಗೆ ಬಂದಿದೆ. ದಾವಣಗೆರೆ ಜಿಲ್ಲೆ ಹೂನ್ನಾಳಿ ತಾಲೂಕು ಬುಳ್ಳಾಪುರ ಗ್ರಾಮದ ಚಿನ್ನು ಅಲಿಯಾಸ್ ಡಿ.ಜೆ (26) ಹಾಗೂ ಶಿವಮೊಗ್ಗ ತಾಲೂಕು ತರಗನಹಳ್ಳಿ ಗ್ರಾಮದ ಮಣಿಕಂಠ ಅಲಿಯಾಸ್ ಮಣಿ(26) ಬಂಧಿತ ಕಳ್ಳರು.

ಕಳೆದ ತಿಂಗಳು ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಜಂಬರಗಟ್ಟೆ ಗ್ರಾಮದ ಆಂಜನೇಯ ದೇವಾಲಯದ ಹುಂಡಿ ಕಳ್ಳತನ ಮಾಡಲಾಗಿತ್ತು. ಹುಂಡಿ ಕಳ್ಳತನದ ಆರೋಪಿಗಳನ್ನು ಪತ್ತೆಗೆ ಪೊಲೀಸರು ಜಾಲ ಬೀಸಿದ್ದರು. ಪೊಲೀಸ​ರು ತಕ್ಷಣ ಈ ಪ್ರಕರಣದಡಿ ಇಬ್ಬರು ಆರೋಪಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸ​ರು ವಿಚಾರಣೆ ನಡೆಸಿದ ಬಳಿಕ ಆರೋಪಿಗಳು ತಮ್ಮ ಹಿಂದಿನ ಎಲ್ಲ ಕೃತ್ಯಗಳನ್ನು ಬಾಯ್ಬಿಟ್ಟಿದ್ದಾರೆ. 

ವಿವಿಧ ಜಿಲ್ಲೆಯ 12 ದೇವಾಲಯಗಳಲ್ಲಿ ಹುಂಡಿ ಕಳ್ಳತನ: 

ಬಂಧಿತರು ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿ 3, ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿ 1, ಹಾವೇರಿಯ ರಟ್ಟೆಹಳ್ಳಿ – 3, ದಾವಣಗೆರೆ ಹೊನ್ನಾಳಿ-1, ಚನ್ನಗಿರಿಯಲ್ಲಿ 1, ಸಂತೆಬೆನ್ನೂರು-1 ಹೀಗೆ ಒಟ್ಟು 12 ದೇವಾಲಯದ ಹುಂಡಿ ಕಳ್ಳತನ ಮಾಡಿದ್ದಾರೆ. ಅಲ್ಲದೇ ಕಳ್ಳತನಕ್ಕೆ ತರಿಕೆರೆ ಪೊಲೀಸ್ ಠಾಣೆಯಲ್ಲಿದ್ದ 1 ಬೈಕ್ ಕಳ್ಳತನ ಸಹ ಮಾಡಿದ್ದಾರೆ. ಹುಂಡಿ ಹಾಗೂ ಬೈಕ್ ಕಳ್ಳತನ ಸೇರಿ‌ ಒಟ್ಟು 72 ಸಾವಿರ ರೂ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದೇವಾಲಯದ ಹುಂಡಿ ಕಳ್ಳತನದ ಪ್ರಕರಣ ಭೇದಿಸುವ ತಂಡದಲ್ಲಿ ಹೊಳೆಹೊನ್ನೂರು ಪೊಲೀಸ್ ಠಾಣೆಯ ಸರ್ಕಲ್‌ ಇನ್ಸ್​​ಪೆಕ್ಟರ್ ಆರ್.ಎಲ್.ಲಕ್ಷ್ಮಿಪತಿ, ಪಿಎಸ್‌ಐಗಳಾದ ಸುರೇಶ್, ರಮೇಶ್ ಸಿಬ್ಬಂದಿ ಲಿಂಗೇಗೌಡ, ಮಂಜುನಾಥ, ವಿಶ್ವನಾಥ, ಚಂದ್ರಶೇಖರ್, ಮೊಹಬೂಬ್ ಹಾಗೂ ಸುದರ್ಶನ ಭಾಗವಹಿಸಿದ್ದರು. 

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *