ರಿಪ್ಪನ್ ಪೇಟೆ:: ಭಾರತೀಯ ಜನತಾಪಕ್ಷದ ವಿಧಾನ ಪರಿಷತ್ ಸದಸ್ಯರಾದ ಹೆಚ್ ವಿಶ್ವನಾಥ್ ರವರು ಭದ್ರಾ ಮೇಲ್ದಂಡೆ ಯೋಜನೆಯಲ್ಲಿ 20000 ಸಾವಿರ ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ.ಬೆಂಕಿಯಿಲ್ಲದೇ ಹೊಗೆಯಾಡಲು ಸಾಧ್ಯವಿಲ್ಲ ಈ ದಿಸೆಯಲ್ಲಿ ಮಾನ್ಯ ರಾಜ್ಯಪಾಲರು ಕೂಡಲೇ ಸರಕಾರದಿಂದ ವರದಿ ತರಿಸಿ ಮಾನ್ಯ ಪ್ರಧಾನ ಮಂತ್ರಿಗಳಿಗೆ ತನಿಖೆ ನಡೆಸಲು ಸೂಕ್ತ ಶಿಪಾರಸ್ಸು ಮಾಡಬೇಕು ಎಂದೂ ರಾಜ್ಯ ಜೆಡಿಎಸ್ ಮುಖಂಡ ಆರ್ ಎ ಚಾಬುಸಾಬ್ ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ.
ಸ್ವತಃ ಆಡಳಿತ ಪಕ್ಷದ ಶಾಸಕರಿಂದಲೇ ಫೋನ್ ಕದ್ದಾಲಿಕೆಯ ಆರೋಪ ಕೇಳಿ ಬಂದಿದೆ.ರಮೇಶ್ ಜಾರಕಿಹೊಳಿ ಪ್ರಕರಣಗಳಲ್ಲಿಯು ಕೂಡ ಯುವತಿಯ ಪರ ವಕೀಲರ ಫೋನ್ ಕದ್ದಾಲಿಕೆಯ ಆರೋಪ ಕೇಳಿ ಬಂದಿದ್ದರೂ ಸರಕಾರ ಜಾಣ ಕುರುಡುತನ ಪ್ರದರ್ಶಿಸುತ್ತಿದೆ.
ಜನ ತೈಲ ಬೆಲೆ,ಆಹಾರ ಸಾಮಾಗ್ರಿಗಳ ಬೆಲೆ ಗಗನಕ್ಕೇರಿದೆ ಸುಮಾರು 25 ಲಕ್ಷದಷ್ಟು ಜನ ಉದ್ಯೋಗ ಕಳೆದುಕೊಂಡಿದ್ದರೂ ಇದ್ಯಾವುದರ ಅರೀವೆ ಇಲ್ಲದೇ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ.
ಈ ಕೂಡಲೇ ರಾಜ್ಯಪಾಲರು ಮಧ್ಯಪ್ರವೇಶಿಸಿ ಸರಕಾರದ ವಿರುದ್ದ ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಪತ್ರೀಕಾಗೋಷ್ಟಿಯಲ್ಲಿ ಒತ್ತಾಯಿಸಿದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್