Categories: Blog

ಆಯಿಷಾ ಸುಲ್ತಾನ್ ವಿರುದ್ಧದ ದೇಶದ್ರೋಹ ಪ್ರಕರಣ; ನಿರೀಕ್ಷಣಾ ಜಾಮೀನು ನೀಡಿದ ಕೇರಳ ಹೈಕೋರ್ಟ್

ಆಯಿಷಾ ಸುಲ್ತಾನ್ ವಿರುದ್ಧದ ದೇಶದ್ರೋಹ ಪ್ರಕರಣ; ನಿರೀಕ್ಷಣಾ ಜಾಮೀನು ನೀಡಿದ ಕೇರಳ ಹೈಕೋರ್ಟ್

ಕೊಚ್ಚಿ ; ಲಕ್ಷದ್ವೀಪದಲ್ಲಿ ಕೊರೋನಾ ಸೋಂಕು ಅಧಿಕವಾಗಲು ಕೇಂದ್ರ ಸರ್ಕಾರದ ಕೆಟ್ಟ ನೀತಿಗಳೇ ಕಾರಣ ಎಂದು ಹೇಳುವ ಭರದಲ್ಲಿ ಕೇಂದ್ರ ಸರ್ಕಾರ ಲಕ್ಷದ್ವೀಪದ ಮೇಲೆ ಜೈವಿಕ ಅಸ್ತ್ರ ಪ್ರಯೋಗಿಸಿದೆ ಎಂದು ಹೇಳುವ ಮೂಲಕ ದೇಶದ್ರೋಹ ಪ್ರಕರಣಕ್ಕೆ ಒಳಗಾಗಿದ್ದ ಚಿತ್ರ ನಿರ್ಮಾಪಕಿ ಆಯಿಷಾ ಸುಲ್ತಾನ್ ಅವರಿಗೆ ಕೇರಳ ಹೈಕೋರ್ಟ್​ ಇಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಅಂತಿಮ ಆದೇಶವನ್ನು ಕಾಯ್ದಿರಿಸಿದ್ದ ನ್ಯಾಯಾಲಯವು ಒಂದು ವಾರ ಬಂಧನದಿಂದ ರಕ್ಷಣೆ ನೀಡಿತ್ತು. ಆದರೆ, ಇಂದು ಒದೇ ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ ಕೊನೆಗೂ ನಿರೀಕ್ಷಣಾ ಜಾಮೀನು ನೀಡಿ ಬಂಧನದ ಭೀತಿಯಲ್ಲಿದ್ದ ಆಯಿಷಾ ಸುಲ್ತಾನ್ ಅವರಿಗೆ ರಕ್ಷಣೆ ನೀಡಿದೆ.
ಕಳೆದ ತಿಂಗಳು ಮಲಯಾಳಂ ಟಿವಿ ಚಾನೆಲ್‌ ಒಂದರಲ್ಲಿ ಕಾಣಿಸಿಕೊಂಡಿದ್ದ ಆಯಿಷಾ ಸುಲ್ತಾನ್, ಲಕ್ಷದ್ವೀಪದ ಆಡಳಿತಾಧಿಕಾರಿಯನ್ನು ಒಕ್ಕೂಟ ಸರ್ಕಾರವು ‘ಜೈವಿಕ ಅಸ್ತ್ರ’ ರೂಪದಲ್ಲಿ ಪ್ರಯೋಗಿಸಿದೆ ಎಂದು ಹೇಳಿದ್ದರು. ಇದರ ವಿರುದ್ದ ಲಕ್ಷದ್ವೀಪ ಬಿಜೆಪಿ ಅಧ್ಯಕ್ಷ ಸಿ. ಅಬ್ದುಲ್ ಖಾದರ್ ಹಾಜಿ ನೀಡಿದ ದೂರಿನ ಮೇರೆಗೆ ಜೂನ್ 10 ರಂದು ದ್ವೀಪದ ಪೊಲೀಸರು ಆಯಿಷಾ ಸುಲ್ತಾನ ವಿರುದ್ಧ ಪ್ರಕರಣ ದಾಖಲಿಸಿದ್ದರು.


ಆಯಿಷಾ ಸುಲ್ತಾನ ಅವರು ಟಿವಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, “ಕೊರೋನಾ ಪ್ರಕರಣ ಶೂನ್ಯ ಪ್ರಮಾಣದಲ್ಲಿದ್ದ ಪ್ರದೇಶದಲ್ಲಿ ದಿನಕ್ಕೆ ನೂರು ಪ್ರಕರಣಗಳು ವರದಿಯಾಗುತ್ತಿವೆ. ಒಕ್ಕೂಟ ಸರ್ಕಾರ ಹೊಸದಾಗಿ ನೇಮಕಮಾಡಿದ್ದ ಲಕ್ಷದ್ವೀಪದ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಅವರನ್ನು ಪ್ರಯೋಗಿಸಿದ್ದು ‘ಜೈವಿಕ ಅಸ್ತ್ರ’ ರೀತಿಯಲ್ಲಾಗಿದೆ. ನನಗೆ ಸ್ಪಷ್ಟವಾಗಿ ಹೇಳಲು ಸಾಧ್ಯ, ಒಕ್ಕೂಟ ಸರ್ಕಾರವು ಕೊರೊನಾವನ್ನು ಜೈವಿಕ ಅಸ್ತ್ರವಾಗಿ ಪ್ರಯೋಗಿಸಿದೆ” ಎಂದು ಹೇಳಿದ್ದರು.
ಆಯಿಷಾ ಸುಲ್ತಾನ ಅವರ ಹೇಳಿಕೆಯನ್ನು ವಿವಾದವನ್ನಾಗಿಸಿದ ಬಿಜೆಪಿ ಅವರ ವಿರುದ್ದ ದೇಶದ್ರೋಹದ ಆರೋಪ ಹೊರಿಸಿ ದೂರು ನೀಡಿತ್ತು. ಅದರ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 124ಎ (ದೇಶದ್ರೋಹ) ಮತ್ತು 153 ಬಿ (ದ್ವೇಷಪೂರಿತ ಭಾಷಣ) ಅಡಿಯಲ್ಲಿ ಲಕ್ಷದ್ವೀಪದ ಕವರತ್ತಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಆಯಿಷಾ ಸುಲ್ತಾನಾ ವಿರುದ್ದ ದೇಶದ್ರೋಹ ಎಫ್‌ಐಆರ್ ದಾಖಲಾಗುತ್ತಿದ್ದಂತೆ ಬಿಜೆಪಿಯ ಒಳಗೆ ಪ್ರತಿಭಟನೆ ಪ್ರಾರಂಭವಾಗಿ, ಹದಿನೈದು ನಾಯಕರು ಸೇರಿದಂತೆ ಹಲವು ಕಾರ್ಯಕರ್ತರು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದರು. “ಪ್ರಸ್ತುತ ಆಡಳಿತಾಧಿಕಾರಿ ಪ್ರಫುಲ್‌ ಪಟೇಲ್ ಅವರ ಕ್ರಮಗಳು ಜನ ವಿರೋಧಿ, ಪ್ರಜಾಪ್ರಭುತ್ವ ವಿರೋಧಿ ಮತ್ತು ಜನರಲ್ಲಿ ತೀವ್ರ ಸಂಕಟವನ್ನು ಉಂಟುಮಾಡುತ್ತವೆ” ಎಂದು ಬರೆದಿದ್ದ ರಾಜಿನಾಮೆ ಪತ್ರದಲ್ಲಿ, ಬಿಜೆಪಿಯ 12 ನಾಯಕರು ಸಹಿ ಮಾಡಿದ್ದರು.
ದ್ವೀಪಕ್ಕೆ ಹೊಸದಾಗಿ ನೇಮಕಗೊಂಡಿರುವ ಆಡಳಿತಾಧಿಕಾರಿ ಪ್ರಫುಲ್ ಪಟೇಲ್‌‌ ದ್ವೀಪದ ಸಂಸ್ಕೃತಿಯನ್ನು ಹಾಳುಗೆಡವುತ್ತಿದ್ದಾರೆ ಮತ್ತು ತಮ್ಮ ಹಾಗೂ ತಮ್ಮ ರಾಜಕೀಯ ಹಿತಾಸಕ್ತಿಗಾಗಿ ದ್ವೀಪದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ದ್ವೀಪವಾಸಿಗಳು ಆರೋಪಿಸುತ್ತಿದ್ದಾರೆ.ಅವರು ದ್ವೀಪದಲ್ಲಿ ಆಡಳಿತ ವಹಿಸಿಕೊಂಡ ನಂತರ ಮಾಡಿರುವ ಕೊರೊನಾ ಮಾರ್ಗಸೂಚಿಯ ಬದಲಾವಣೆ, ಮೀನುಗಾರರ ಗುಡಿಸಲು ತೆರವು, ಗೂಂಡಾ ಕಾಯ್ದೆ ಸೇರಿದಂತೆ ಜಾರಿ ಮತ್ತಿತರ ನಿರ್ಣಯಗಳ ವಿರುದ್ಧ ಕೇರಳ ಹೈಕೋರ್ಟ್‌ನಲ್ಲಿ ಇದುವರೆಗೂ 23 ಅರ್ಜಿಗಳು ಸಲ್ಲಿಕೆಯಾಗಿವೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

2 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

2 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

8 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago