Categories: Blog

ಕಾಂಗ್ರೆಸ್ ವಿರುದ್ದ ಅಪಪ್ರಚಾರ ಲೇಖನ; ಚಕ್ರವರ್ತಿ ಸೂಲಿಬೆಲೆ ವಿರುದ್ದ ದೂರು ದಾಖಲು::


ಬೆಂಗಳೂರು::: ಕಾಂಗ್ರೆಸ್‌ ವಿರುದ್ದ ಅಪಪ್ರಚಾರ ಲೇಖನವನ್ನು ಬರೆದು, ಕಾಂಗ್ರೆಸ್‌ ಬಗ್ಗೆ ಜನರಲ್ಲಿ ದ್ವೇಷವನ್ನು ಬಿತ್ತುತ್ತಿದ್ದಾರೆ ಎಂದು ಆರೋಪಿಸಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಬೆಂಗಳೂರಿನ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್‌ ದೂರು ದಾಖಲಿಸಿದೆ.

ಚಕ್ರವರ್ತಿ ಸೂಲಿಬೆಲೆ ಜೂ. 7 ರಂದು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಲೇಖನವೊಂದನ್ನು ಹಂಚಿಕೊಂಡಿದ್ದರು. ’ಜನ ದಡ್ಡರಲ್ಲ: ಎಲ್ಲವನ್ನೂ ಗಮನಿಸುತ್ತಿದ್ದಾರೆ’ ಎಂದು ಶೀರ್ಷಿಕೆ ಅಡಿಯಲ್ಲಿ ಪ್ರಕಟವಾಗಿದ್ದ ಬರಹದಲ್ಲಿ, “ಮೋದಿಯನ್ನು ವಿರೋಧಿಸುವ ಭರದಲ್ಲಿ ಕಾಂಗ್ರೆಸ್ಸು ಆಕ್ಸಿಜೆನ್ ಜನರಿಗೆ ಸಿಗದಂತೆ ದಾಸ್ತಾನು ಮಾಡಿಕೊಂಡಿತು. ವ್ಯಾಕ್ಸಿನ್‌ಗಳನ್ನು ಜನರಿಗೆ ನೀಡದೇ ಕಸದಬುಟ್ಟಿಗೆಸೆಯಿತು. ಆಸ್ಪತ್ರೆಗಳಲ್ಲಿ ಬೆಡ್‌ಗಳನ್ನು ಬ್ಲಾಕ್ ಮಾಡಿಕೊಂಡು ಜನ ಸಾಯುವಂತೆ ನೋಡಿಕೊಂಡಿತು. ಕೊನೆಗೆ ಅಮಾಯಕರ ಸಾವನ್ನು ವೈಭವೀಕರಿಸಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಾನ ಹರಾಜು ಹಾಕಿತು. ರಾಷ್ಟ್ರೀಯ ಪಕ್ಷವೊಂದು ನಾಲ್ಕು ಕಾಸಿಗೆ ಈ ಹಂತಕ್ಕೆ ಇಳಿಯಬಹುದೆಂದು ಯಾರೂ ಊಹಿಸಿರಲಿಲ್ಲ” ಎಂದು ಬರೆದಿದ್ದಾರೆ.


ಹೀಗೆ ಸುಖಾ ಸುಮ್ಮನೆ ರಾಷ್ಟ್ರೀಯ ಪಕ್ಷವೊಂದರ ಬಗ್ಗೆ ಸುಳ್ಳು ಆರೋಪಗಳನ್ನು ಮಾಡುತ್ತಾ, ಪಕ್ಷದ ಬಗ್ಗೆ ಅಪ್ರಚಾರ ಮಾಡಲಾಗುತ್ತಿದೆ ಎಂದು ಹನುಮಂತನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ತೇಜೇಶ್ ಕುಮಾರ್ ದೂರು ನೀಡಿದ್ದಾರೆ.

’ಚಕ್ರವರ್ತಿ ಸೂಲಿಬೆಲೆ ಸುಳ್ಳು ಹೇಳುತ್ತಿರುವುದು ಇದು ಮೊದಲನೇ ಬಾರಿಯಲ್ಲ. 7 ವರ್ಷಗಳಿಂದ ಸುಳ್ಳು ಹೇಳಿಕೊಂಡು ಬರುತ್ತಿದ್ದಾರೆ. ಚಿನ್ನದ ರಸ್ತೆಯಿಂದ ಹಿಡಿದು ಮೋದಿಯವರು ಲ್ಯಾಪ್‌ಟಾಪ್ ಮುಂದೆ ಕುಳಿತು ಕೊರೊನಾ ಮಾಹಿತಿ ಪಡೆಯುತ್ತಿದ್ದಾರೆ. ಡಾಲರ್‌ ಬೆಲೆ, ಪೆಟ್ರೋಲೆ ಬೆಲೆ, ಬುಲೆಟ್ ಟ್ರೈನ್‌ನಗಳ ಬಗ್ಗೆ ಸುಳ್ಳಿನ ಸರಮಾಲೆಗಳನ್ನು ಪೋಣಿಸುತ್ತಲೇ ಇದ್ದಾರೆ. ಪರೋಕ್ಷವಾಗಿ ಬಿಜೆಪಿಗೆ ಅನುಕೂಲ ಮಾಡುತ್ತಿದ್ದು, ಕಾಂಗ್ರೆಸ್ ಬಗ್ಗೆ ಅಪಪ್ರಚಾರ ಮಾಡುತ್ತಲೆ ಇದ್ದಾರೆ. ಹೀಗೆ ಜೂನ್ 7 ರಂದು ತಮ್ಮ ಫೇಸ್‌ಬುಕ್‌ನಲ್ಲಿ ಕಾಂಗ್ರೆಸ್ ಬಗ್ಗೆ ತುಂಬಾ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಜೊತೆಗೆ ವಿಜಯವಾಣಿಯಲ್ಲಿ ನಮ್ಮ ರೈತರು ಮತ್ತು ಮುಸಲ್ಮಾನ ಬಂಧುಗಳ ಬಗ್ಗೆಯೂ ಕೆಟ್ಟದಾಗಿ ಬರೆದಿದ್ದಾರೆ. ಹಾಗಾಗಿ ಈ ಆರೋಪಗಳಿಗೆ ಸಾಕ್ಷಿ, ದಾಖಲಾತಿ ನೀಡುವಂತೆ ಕೇಳಿದ್ದೇವೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುವಂತೆ ಮತ್ತು ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದೇವೆ. ನಾವು ಇಲ್ಲಿಗೆ ಇದನ್ನು ಬಿಡುವುದಿಲ್ಲ. ಕಾನೂನು ಕ್ರಮ ಜರುಗಿಸುವವರೆಗು ಹೋರಾಟ ಮುಂದುವರೆಸುತ್ತೇವೆ” ಎಂದು ತೇಜೇಶ್ ಕುಮಾರ್‌ ತಿಳಿಸಿದ್ದಾರೆ.

’ಇರುವ ಸತ್ಯವನ್ನು ಬರೆಯಲಿ. ತಪ್ಪುನ್ನು ತೋರಿಸಿದರೇ ತಪ್ಪು ತಿದ್ದಿಕೊಳ್ಳುತ್ತೇವೆ. ಆದರೆ ನಡೆಯದೇ ಇರುವ ವಿಷಯದ ಬಗ್ಗೆ, ತಮ್ಮ ಹೊಟ್ಟೆ ತುಂಬಿಸಿಕೊಳ್ಳಲು ರಾಷ್ಟ್ರೀಯ ಪಕ್ಷದ ಬಗ್ಗೆ ಸುಳ್ಳು ಹೇಳುವುದು, ಅಪಪ್ರಚಾರ ಮಾಡುವುದು ಎಷ್ಟು ಸರಿ? ಇಷ್ಟು ದಿನ ನಾವು ಇದನ್ನು ಸುಮ್ಮನೆ ಕಡೆಗಣಿಸಿದ್ದೇವೆ. ಆದರೆ, ಈಗಲೂ ಇಂತಹದ್ದೇ ಸುಳ್ಳುಗಳನ್ನು ಹೇಳುತ್ತಿದ್ದಾರೆ. ಹೀಗಾಗಿ ನಾವು ಇದನ್ನು ಸುಮ್ಮನೆ ಬಿಡುವುದಿಲ್ಲ’ ಎಂದು ತೇಜೇಶ್ ಕುಮಾರ್‌ ಹೇಳಿದ್ದಾರೆ.

“ಬೆಡ್ ಬ್ಲಾಕಿಂಗ್ ದಂಧೆ ಬಗ್ಗೆ ಕೂಡ ಕಾಂಗ್ರೆಸ್‌ ಅನ್ನು ಅನುಮಾನಿಸಿದ್ದರು. ಆದರೆ, ಕೊನೆಗೆ ಯಾರು ಸಿಕ್ಕಿಹಾಕಿಕೊಂಡಿದ್ದು, ಯಾರು ಯಾರು ಅದರಲ್ಲಿ ನಂಟು ಹೊಂದಿದ್ದರು ಎಂಬುದು ಎಲ್ಲರಿಗೂ ಗೊತ್ತಾಯಿತು. ಚಕ್ರವರ್ತಿ ಸೂಲಿಬೆಲೆಯವರು ಸುಳ್ಳಿನ ಸರಮಾಲೆಯಲ್ಲಿ ಜನರಿಗೆ ಮಂಕು ಬೂದಿ ಎರಚುತ್ತಿದ್ದಾರೆ. ಹಾಗಾಗಿ ಜನರಿಗೆ ಈ ಸುಳ್ಳುಗಳ ಬಗ್ಗೆ ಅರಿವು ಮೂಡಬೇಕು. ಅವರ ವಿರುದ್ಧ ಬರೀ ದೂರು ನೀಡಿ ಸುಮ್ಮನಾಗುವುದಿಲ್ಲ. ಜನರಿಗೆ ಈ ಬಗ್ಗೆ ತಿಳಿಸುವ ಪ್ರಯತ್ನ ಮಾಡುತ್ತೇವೆ” ಎಂದು ತೇಜೇಶ್ ಕುಮಾರ್‌ ತಿಳಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

4 hours ago

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…

8 hours ago

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…

8 hours ago

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ – ಬಿ ವೈ ವಿಜಯೇಂದ್ರ ಆಕ್ರೋಶ

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…

9 hours ago

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…

16 hours ago

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…

17 hours ago