ರಿಪ್ಪನ್ ಪೇಟೆ: ಕೆಂಚನಾಲ ರೈಲ್ವೆ ನಿಲ್ದಾಣದಲ್ಲಿ ಮೈಸೂರು-ಬೆಂಗಳೂರು- ಶಿವಮೊಗ್ಗ- ತಾಳಗುಪ್ಪ ಪ್ಯಾಸೆಂಜರ್ ರೈಲು ನಿಲ್ದಾಣಕ್ಕೆ ಆಗ್ರಹಿಸಿ ಮಾನ್ಯ ಸಂಸದರಾದ ಬಿ ವೈ ರಾಘವೇಂದ್ರ ಹಾಗೂ ಶಾಸಕ ಮತ್ತು MSIL ಅಧ್ಯಕ್ಷರಾದ ಶ್ರೀ ಹರತಾಳು ಹಾಲಪ್ಪ ನವರಿಗೆ ಮಾಜಿ ಶಾಸಕರಾದ ಬಿ ಸ್ವಾಮಿರಾವ್ ಮತ್ತು ತಾಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ರವರ ನೇತೃತ್ವದಲ್ಲಿ ಸಾರ್ವಜನಿಕರೊಂದಿಗೆ ಮನವಿ ಪತ್ರ ಸಲ್ಲಿಸಿದರು.
ಈ ಕುರಿತು ರಿಪ್ಪನ್ ಪೇಟೆ ಸಭಾಭವನದಲ್ಲಿ ಪತ್ರೀಕಾಗೋಷ್ಟಿ ನಡೆಸಿ ಮಾತನಾಡಿದ ಮಾಜಿ ಶಾಸಕರಾದ ಬಿ ಸ್ವಾಮಿರಾವ್ ರವರು ಇತಿಹಾಸ ಪ್ರಸಿದ್ಧ ಮಾರಿಕಾಂಬಾ ಜಾತ್ರೋತ್ಸವ ವರ್ಷಕ್ಕೆ ಎರಡು ಬಾರಿ ಕೆಂಚನಾಲ ಗ್ರಾಮದಲ್ಲಿ ನಡೆಯುತ್ತಿದ್ದು ಅಲ್ಲದೇ ರಾಜ ಮಹಾರಾಜರ ಕಾಲದಲ್ಲೂ ಕೂಡ ಇಲ್ಲಿ ರೈಲು ನಿಲುಗಡೆ ಇದ್ದು ಈ ಭಾಗದ ಜನ ರೈಲು ಸಂಚಾರದ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ.ರೈಲು ನಿಲುಗಡೆ ಇಲ್ಲದೇ ಇರುವುದರಿಂದ ಈ ಭಾಗದ ವಿಧ್ಯಾರ್ಥಿಗಳು, ಸಾರ್ವಜನಿಕರು ಎಂಟು ಕಿಮೀ ನಡೆದು ಬಂದು ಬಸ್ ಸಂಪರ್ಕ ಪಡೆದುಕೊಳ್ಳಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.ಕೆಂಚನಾಲದಲ್ಲಿ ರೈಲು ನಿಲುಗಡೆಯಿಂದ ಸುತ್ತಮುತ್ತಲಿನ ನೂರಾರು ಕಂದಾಯ ಗ್ರಾಮಗಳಿಗೆ ಸಹಕಾರಿಯಾಗಲಿದೆ ಎಂದರು.
ವೀರೇಶ್ ಆಲುವಳ್ಳಿ ಮಾತನಾಡಿ ಕೆಂಚನಾಲ ಗ್ರಾಮಪಂಚಾಯಿತಿಯ ಕೆದಲುಗುಡ್ಡೆ ಬಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಐಟಿಐ ಕಾಲೇಜು ಹಾಗೂ ಮೆಸ್ಕಾಂ 110 ಕೆವಿ ಸಾಮರ್ಥ್ಯದ ಉಪವಿದ್ಯುತ್ ಸ್ಥಾವರವಿದ್ದು ಇಲ್ಲಿಗೆ ನಿತ್ಯ ನೂರಾರು ವಿಧ್ಯಾರ್ಥಿಗಳು ಹಾಗೂ ಮೆಸ್ಕಾಂ ಸಿಬ್ಬಂಧಿಗಳು ಒಡಾಡುತಿದ್ದು ರೈಲು ನಿಲುಗಡೆ ಮಾಡುವುದರಿಂದ ಎಲ್ಲಾರಿಗು ಅನೂಕೂಲವಾಗಲಿದೆ ಎಂದರು.
ಕೆಂಚನಾಲದಲ್ಲಿ ಜುಲೈ 11 ರ ಒಳಗೆ ರೈಲು ನಿಲುಗಡೆ ಮಾಡದಿದ್ದರೆ ಜುಲೈ 12ರ ನಂತರ ಕೆಂಚನಾಳ ರೈಲ್ವೆ ನಿಲ್ದಾಣದಲ್ಲಿ ಪಕ್ಷಾತೀತವಾಗಿ ಉಗ್ರವಾದ ಹೋರಾಟ ನಡೆಸಲಾಗುವುದು ಎಂದು ಈ ಸಂದರ್ಭದಲ್ಲಿ ಅವರು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ಮುಖಂಡ ಆರ್ ಎನ್ ಮಂಜುನಾಥ್ ಜುಲೈ 11ರ ಒಳಗೆ ಕೆಂಚನಾಲ ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆಗೊಳಿಸದಿದ್ದರೆ ಉಗ್ರವಾದ ಹೋರಾಟ ನಡೆಸಿ ಈ ವಿಚಾರದಲ್ಲಿ ಜೈಲಿಗೂ ಸಹ ಹೋಗಲು ಸಿದ್ಧರಿರುವುದಾಗಿ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಜೆಡಿಎಸ್ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಆರ್ ಎ ಚಾಬುಸಾಬ್, ಎಪಿಎಂಸಿ ಸದಸ್ಯರಾದ ಕಲ್ಯಾಣಪ್ಪ ಗೌಡ, ಕೆಂಚನಾಲ ಗ್ರಾಮ ಪಂಚಾಯಿತಿ ಸದಸ್ಯರಾದ ಪರಮೇಶ್ವರ ಹೊನ್ನಕೊಪ್ಪ ,ಬಿಜೆಪಿ ಮುಖಂಡ ನಾಗಾರ್ಜುನ ಸ್ವಾಮಿ, ಮಾರಿಕಾಂಬ ದೇವಿ ಸಮಿತಿಯ ನಿರ್ದೇಶಕ ಕೆ ಎಂ ಬಸವರಾಜ್ ಮಹೇಶ್ ಮಾಣಿಕೆರೆ ಇನ್ನಿತರರಿದ್ದರು.
ವರದಿ: ರಾಮನಾಥ್ ರಿಪ್ಪನ್ ಪೇಟೆ
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್