Categories: Blog

ಬಾರ್ ಅಂಡ್ ರೆಸ್ಟೋರೆಂಟ್ ಸ್ಥಳಾಂತರ ವಿರೋದಿಸಿ ರಿಪ್ಪನ್ ಪೇಟೆ ಸಾರ್ವಜನಿಕರ ವೇದಿಕೆಯಿಂದ ಪ್ರತಿಭಟನೆ: ಶಾಸಕರಾದ ಹರತಾಳು ಹಾಲಪ್ಪರ ಮಧ್ಯಸ್ಥಿಕೆಯಿಂದ ಪರಿಹಾರ

ರಿಪ್ಪನ್ ಪೇಟೆ:: ಇಲ್ಲಿನ ಗ್ರಾ.ಪಂ ವ್ಯಾಪ್ತಿಯಲ್ಲಿ ಪಟ್ಟಣದಿಂದ ಹೊರಗಿದ್ದ ಬಾರ್ ಗಳನ್ನು ಏಕಾಏಕಿ ವಿನಾಯಕ ವೃತ್ತದ ಬಸ್ ನಿಲ್ದಾಣದ ಪಕ್ಕದ ಅಂಗಡಿಯಲ್ಲಿ ತೆರೆದಿದ್ದು ಹಾಗೂ ತೀರ್ಥಹಳ್ಳಿ ರಸ್ತೆಯಲ್ಲಿ ಮತ್ತೊಂದು ಬಾರ್ ಅನ್ನು ತೆರೆಯಲು ಕಾಮಗಾರಿ ನೆಡೆಸುತ್ತಿದ್ದು. ಇದರಿಂದ ಸಾರ್ವಜನಿಕರಿಗೆ, ಶಾಲಾ-ಕಾಲೇಜು ಮಕ್ಕಳಿಗೆ ತೊಂದರೆಯಾಗುತ್ತದೆ ಎಂದು ರಿಪ್ಪನ್ ಪೇಟೆ ಸಾರ್ವಜನಿಕರ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು.

ಈ ಸಂಧರ್ಭದಲ್ಲಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಶಾಸಕರಾದ ಹರತಾಳು ಹಾಲಪ್ಪ ನವರು ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಅಬಕಾರಿ ಜಿಲ್ಲಾಧಿಕಾರಿ ಮತ್ತು ತಾಲೂಕು ಅಬಕಾರಿ ಇನ್ಸ್ ಪೆಕ್ಟರ್ ಜೊತೆ ಮಾಹಿತಿ ಕೇಳಿದಾಗ ಕಾನೂನು ಬದ್ಧವಾಗಿ ಸುಪ್ರೀಂ ಕೋರ್ಟ್ ಆದೇಶದಂತೆ ಬಾರ್ ಸ್ಥಳಾಂತರಕ್ಕೆ ಅನುಮತಿ ಪಡೆದಿದ್ದಾರೆ ತೆರವುಗೊಳಿಸುವ ಅಧಿಕಾರ ನಮಗೆ ಇಲ್ಲ ಎಂದೂ ಶಾಸಕರಿಗೆ ಮಾಹಿತಿ ನೀಡಿದರು.ಈ ಸಂಧರ್ಭದಲ್ಲಿ ಅಬಕಾರಿ ಜಿಲ್ಲಾಧಿಕಾರಿಗೆ ಧಿಕ್ಕಾರ ಕೂಗಿದ ಪ್ರಸಂಗವು ನಡೆಯಿತು.ನಂತರ ಪ್ರತಿಭಟನಾಕಾರರು ಅಹೋರಾತ್ರಿ ಧರಣಿಗೆ ನಿರ್ಧರಿಸಿದರು..
ಎಲ್ಲಾ ಬೆಳವಣಿಗೆಗಳನ್ನು ಗಮನಿಸಿದ ಶಾಸಕರು ಕೂಡಲೇ ವಿನಾಯಕ ವೃತ್ತದ ಗುರುಕೃಪ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕರಾದ ಎಂ ಬಿ ಲಕ್ಷಣ ಗೌಡರನ್ನು ಕರೆಯಿಸಿ ಈಗಾಗಲೇ ಅಂಗಡಿ ಬದಲಾವಣೆಗಾಗಿ ಸರ್ಕಾರಕ್ಕೆ ಹಣ ಸಂದಾಯ ಮಾಡಿದ್ದೀರಿ ಇದರಿಂದ ನಿಮಗೆ ನಷ್ಟ ಆಗುತ್ತದೆ ಆದರೆ ಸಾರ್ವಜನಿಕರ ವಿರೋಧ ಕಟ್ಟಿಕೊಂಡು ವ್ಯಾಪಾರ ಮಾಡುವುದು ಬೇಡ ಎಂದು ಹಾಗೂ ಮೊದಲಿದ್ದ  ಬಾರ್ ಗೆ ಸಂಪರ್ಕ ಕಲ್ಪಿಸುವ ರಸ್ತೆಯ ಡಾಂಬರೀಕರಣಕ್ಕೆ ಅಗತ್ಯ ಅನುದಾನ ಬಿಡುಗಡೆಯ ಭರವಸೆ ನೀಡಿದರು.

ಕೂಡಲೇ ಶಾಸಕರ ಮನವಿಗೆ ಸ್ಪಂದಿಸಿದ ಬಾರ್ ಮಾಲೀಕರಾದ ಎಂ ಬಿ ಲಕ್ಷ್ಮಣ ಗೌಡರು ಶಾಸಕರ ಸಲಹೆಯಂತೆ ನಾನು ಸಾರ್ವಜನಿಕರ ವಿರೋಧ ಕಟ್ಟಿಕೊಂಡು ಅವರಿಗೆ ತೊಂದರೆ ನೀಡಿ ವ್ಯಾಪಾರ ಮಾಡಲು ಸಿದ್ಧನಿಲ್ಲ.ಮೊದಲಿರುವ ಜಾಗಕ್ಕೆ ಬಾರ್ ಅನ್ನು ಶೀಘ್ರದಲ್ಲಿ ಸ್ಥಳಾಂತರ ಗೊಳಿಸವುದಾಗಿ ಒಪ್ಪಿಗೆ ನೀಡಿದ ಬಳಿಕ ಪ್ರತಿಭಟನೆ ಸುಖಾಂತ್ಯ ಗೊಂಡಿತು.

ಈ ಸಂಧರ್ಭದಲ್ಲಿ ಪ್ರತಿಭಟನಕಾರರು ಶಾಸಕರಾದ ಹರತಾಳು ಹಾಲಪ್ಪ ಹಾಗೂ ಎಂ ಬಿ ಲಕ್ಷಣ ಗೌಡರಿಗೆ ಜೈಕಾರ ಕೂಗಿ ಹರ್ಷ ವ್ಯಕ್ತ ಪಡಿಸಿದರು.
ಸಾರ್ವಜನಿಕರ ಮನವಿಗೆ ಸ್ಪಂದಿಸಿದ ಶಾಸಕರಿಗೆ ಸಾರ್ವಜನಿಕರು ಧನ್ಯವಾದ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ತಾ ಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲವಳ್ಳಿ, ಜೆಡಿಎಸ್ ಮುಖಂಡರಾದ ಆರ್.ಎ ಚಾಬುಸಾಬ್,ಬಿಜೆಪಿಯ ಹಿರಿಯ ಮುಖಂಡರಾದ ಆರ್ ಟಿ ಗೋಪಾಲ್. ಗಣಪತಿ ಬಿಳಗೋಡು ,ಆರ್ ಎನ್ ಮಂಜುನಾಥ್,ಗ್ರಾ ಪಂ ಅಧ್ಯಕ್ಷರಾದ ಮಂಜುಳಾ ಕೇತಾರ್ಜಿ ರಾವ್,ಮೆಣಸೆ ಆನಂದ್,ಎಲ್ ವೆಂಕಟೇಶ್, ಗ್ರಾ ಪಂ ಎಲ್ಲಾ ಸದಸ್ಯರು,ಸಾರ್ವಜನಿಕರು ಉಪಸ್ಥಿತರಿದ್ದರು.

ಕಾಂಗ್ರೆಸ್ ಅನುಪಸ್ಥಿತಿ::
ಇದನ್ನು ಸರ್ವ ಪಕ್ಷದ ಪ್ರತಿಭಟನೆ ಎಂದು ಪ್ರತಿಭಟನಾಕಾರರು ಹೇಳಿದರೂ ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿ,ಮುಖಂಡರು ಹಾಗೂ ಕಾರ್ಯಕರ್ತರ ಅನುಪಸ್ಥಿತಿ ಈ ಪ್ರತಿಭಟನೆಯಲ್ಲಿ ಎದ್ದು ಕಾಣುತ್ತಿತ್ತು.


ವರದಿ:ರಾಮನಾಥ್ ರಿಪ್ಪನ್ ಪೇಟೆ

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

5 hours ago

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…

8 hours ago

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…

9 hours ago

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ – ಬಿ ವೈ ವಿಜಯೇಂದ್ರ ಆಕ್ರೋಶ

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…

9 hours ago

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…

16 hours ago

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…

18 hours ago