Categories: Blog

ಬೇಳೂರು ಗೋಪಾಲಕೃಷ್ಣ ಒಬ್ಬ ಶೋಕಿಲಾಲ ರಾಜಕಾರಣಿ:: ವೀರೇಶ್ ಆಲುವಳ್ಳಿ

ಹೊಸನಗರ: ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಒಬ್ಬ ಶೋಕಿಲಾಲ ರಾಜಕಾರಣಿ ಅವರಿಗೆ ಕಿಂಚಿತ್ತು ಸಾಮಾಜಿಕ ಬದ್ದತೆ ಇಲ್ಲ ಎಂದು ತಾಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ರವರು ವಾಗ್ದಾಳಿ ನಡೆಸಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸುದ್ದಿ ಗೋಷ್ಟಿ ನಡೆಸಿ ಮಾತನಾಡಿ, ಮಾಜಿ ಶಾಸಕರು ಸುತ್ತಾ ಗ್ರಾಮದಲ್ಲಿ  ಮರಳು ಮಾಫ಼ಿಯ ನಡೆಯುತ್ತಿದೆ ಎಂದು ತಮ್ಮ ಹಾಗೂ ಸುರೇಶ್ ಸ್ವಾಮಿರಾವ್ ವಿರುದ್ದ ಗಂಭೀರ ಆರೋಪ ಹೊರಿಸಿದಲ್ಲದೇ ಇದರ ಹಿಂದೆ ಶಾಸಕರ ಕೈವಾಡ ಇದೆ ಎಂದು ಆರೋಪಿಸಿದ್ದಾರೆ ಇದು ಸತ್ಯಕ್ಕೆ ದೂರವಾಗಿದ್ದು ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳಿದರು.

ತಾಲೂಕಿನಲ್ಲಿ ಅನೇಕ ರೀತಿಯ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು ಈ ಕಾಮಗಾರಿಗಳು ಸುಗಮವಾಗಿ ನಡೆಯುವ ಸಲುವಾಗಿ ಸರ್ಕಾರದ ಆದೇಶದಂತೆ ಸುತ್ತಾ ಗ್ರಾಮದ ಮರಳು ಕ್ವಾರಿ ಗೆ ಅನುಮತಿ ನೀಡಲಾಗಿದೆ.ಇದರಲ್ಲಿ ತಮ್ಮದಾಗಲಿ ಸುರೇಶ್ ಸ್ವಾಮಿರಾವ್ ರವರದಾಗಲಿ ಯಾವುದೇ ಪಾತ್ರವಿಲ್ಲ ಎಂದರು.

ಮಾಜಿ ಶಾಸಕರ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ವರ್ತನೆ:

ಹೆಣ್ಣು ಮಕ್ಕಳ ಬಗ್ಗೆ ಗೋಪಾಲಕೃಷ್ಣ ಬೇಳೂರ್ ರವರಿಗೆ ಕಿಂಚಿತ್ತು  ಕನಿಷ್ಠ ಗೌರವ ಇಲ್ಲ ಎಂಬುವುದು ಸಾಮಾಜಿಕ ಜಾಲತಾಣದಲ್ಲಿ ಅವರ ವರ್ತನೆಯಿಂದ ತಿಳಿಯುತ್ತದೆ.

ಮಾಜಿ ಶಾಸಕರು “ಸೂಡುರು ಶಿವಣ್ಣ ಬಳಗ” ಎಂಬ ವಾಟ್ಸಾಪ್ ಗ್ರೂಪ್ ನಲ್ಲಿ ಅಶ್ಲೀಲ ಫೋಟೋ ಹರಿಬಿಟ್ಟಿದ್ದು ಕೈತಪ್ಪಿನಿಂದ ಅದನ್ನು ಕಳುಹಿಸಿದ್ದರೂ ಅದನ್ನು ಅಳಿಸಿ ಹಾಕುವ ಸೌಜನ್ಯ ಕೂಡ ಇಲ್ಲದೇ ಇರುವುದು ಹೆಣ್ಣುಮಕ್ಕಳ ಮೇಲೆ ಅವರಿಗೆ ಇರುವ ಗೌರವವನ್ನು ಸೂಚಿಸುತ್ತದೆ ಎಂದು ಘಟನೆಯ ಬಗ್ಗೆ ಇರುವ ದಾಖಲೆಗಳನ್ನು ಸುದ್ದಿಗೋಷ್ಟಿಯಲ್ಲಿ ವೀರೇಶ್ ಬಿಡುಗಡೆ ಮಾಡಿದರು

ಬೇಳೂರು ಗೋಪಾಲ ಕೃಷ್ಣ ರವರು, 2 ಅವಧಿಗೆ ಶಾಸಕರಾದವರು, ರಾಷ್ಟ್ರೀಯ ಪಕ್ಷದ ವಕ್ತಾರಾಗಿರುವವರು, ಮಹಿಳೆ ಬಗ್ಗೆ ಈ ರೀತಿ ಅವಹೇಳನಕಾರಿ ಪೋಸ್ಟ್ ಹಾಕಿರುವುದು, ಅವರ ರಾಷ್ಟ್ರೀಯ ನಾಯಕಿ ಸೋನಿಯಾ ಗಾಂಧಿ ಅವರಿಗೆ ಮಾಡಿದ ಅವಮಾನ.

ಈ ರೀತಿ ಮಂಗಾಟ ಮಾಡಿದ್ದರಿಂದಲೇ ಯಾವ ಪಕ್ಷದವರು ಇವರನ್ನು ಸೇರಿಸಿಕೊಂಡಿಲ್ಲ ಈಗ ಕಾಂಗ್ರೆಸ್ ಸೇರಿದ್ದಾರೆ. ಕೊರೋನ ಸಮಯದಲ್ಲಿ ಕ್ಷೇತ್ರದ ಜನರು ಹಾಗೂ ಮತದಾರರಿಂದ ಕಣ್ಮರೆಸಿಕೊಂಡಿದ್ದು, ಲಾಕ್ ಡೌನ್ ಸಡಿಲಿಕೆಯಾದ ನಂತರ ಕ್ಷೇತ್ರಕ್ಕೆ ಬಂದು ಈ ರೀತಿ ಮಂಗಾಟ ಮಾಡುತ್ತಿದ್ದಾರೆ.

KPCC ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ರವರು, ಹಾಗೂ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ನವರು ಇದರ ಬಗ್ಗೆ ಕೂಡಲೇ ಕ್ರಮ ಕೈಗೊಂಡು, ಇಂತಹ ಕುಚೇಷ್ಟೆ ಮಾಡುವ ವ್ಯಕ್ತಿಯನ್ನು ಪಕ್ಷದಿಂದ ಉಚ್ಛಾಟಿಸಬೇಕೆಂದು ವೀರೇಶ್ ಒತ್ತಾಯಿಸಿದರು.

ಸುತ್ತಾ ಗ್ರಾಮದ ಮರಳುಗಾರಿಕೆ ವಿಚಾರದಲ್ಲಿ ನನ್ನ ಹಾಗೂ ಸುರೇಶ್ ಸ್ವಾಮಿರಾವ್ ವಿರುದ್ದ ಇಲ್ಲ ಸಲ್ಲದ ಆರೋಪ ಮಾಡಿರುವ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಹಾಗೂ ಒಂದು ಟಿ ವಿ ಚಾನೆಲ್ ವಿರುದ್ದ ಮುಂದಿನ ದಿನಗಳಲ್ಲಿ ಕಾನೂನು ರೀತಿಯ ಹೋರಾಟ ಮಾಡಲು ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಹೇಳಿದರು.

ಒಂದು ವೇಳೆ ಮರಳು ಮಾಫ಼ಿಯದಲ್ಲಿ ತಾನು ಭಾಗಿಯಾಗಿರುವುದನ್ನ ಸಾಬೀತು ಪಡಿಸಿದರೇ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದೂ ಈ ಸಂಧರ್ಭದಲ್ಲಿಹೊಸನಗರ ತಾ ಪಂ ಮಾಜಿ ಅಧ್ಯಕ್ಷ
ವೀರೇಶ್ ಆಲವಳ್ಳಿ ಸುದ್ಧಿಘೋಷ್ಠಿಯಲ್ಲಿ ತಿಳಿಸಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

5 hours ago

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…

8 hours ago

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…

9 hours ago

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ – ಬಿ ವೈ ವಿಜಯೇಂದ್ರ ಆಕ್ರೋಶ

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…

9 hours ago

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…

16 hours ago

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…

18 hours ago