ಅಕ್ಟೋಬರ್ ನಲ್ಲಿ ರಾಷ್ಟ್ರ ನಾಯಕರೊಬ್ಬರ ಹತ್ಯೆ,ದೇಶದಲ್ಲಿ ದಂಗೆ:ಭವಿಷ್ಯವಾಣಿ

ನವದೆಹಲಿ:ಕೊರೊನಾ ಮೊದಲನೇ,ಎರಡನೇ ಅಲೆಯ ವಿಚಾರದಲ್ಲಿ ಬಹುತೇಕ ಕರಾರುವಕ್ಕಾಗಿ ಭವಿಷ್ಯ ನುಡಿದಿದ್ದ ಉತ್ತರ ಭಾರತದ ಮೂಲದ ಖ್ಯಾತ ಜ್ಯೋತಿಷಿ ಕೆ.ಎಂ.ಸಿನ್ಹಾ ಮತ್ತೊಂದು ಆತಂಕಕಾರಿ ಭವಿಷ್ಯವನ್ನು ನುಡಿದಿದ್ದಾರೆ.

ಮೇ 6ರಿಂದ 26ರವರೆಗಿನ ಅವಧಿಯಲ್ಲಿ ಕೊರೊನಾ ಗರಿಷ್ಠ ಮಟ್ಟಕ್ಕೆ ಹೋಗಲಿದೆ. ಈ ಅವಧಿ ಸ್ವಲ್ಪದಿನ ಅಂದರೆ ಜೂನ್ 3ರವರೆಗೆ ಹೋಗಬಹುದು. ಈ ಅವಧಿ ಮುಗಿದ ನಂತರ, ಕೊರೊನಾ ವೈರಸಿನ ಪ್ರಭಾವ ಕಮ್ಮಿಯಾಗಲಿದೆ ಎಂದು ಸಿನ್ಹಾ ಭವಿಷ್ಯ ನುಡಿದಿದ್ದರು.

ಕೊರೊನಾ ಎರಡನೇ ಅಲೆ ನಿರ್ವಹಣೆಯಲ್ಲಿ ಪ್ರಧಾನಿ ಮೋದಿಯವರು ಎಡವಿದ್ದು ಅವರು ರಾಜೀನಾಮೆ ನೀಡಬೇಕಾದ ಪರಿಸ್ಥಿತಿ ಎದುರಾಗಬಹುದು ಎನ್ನುವುದಕ್ಕೂ ಸಿನ್ಹಾ ಉತ್ತರ ನೀಡಿದ್ದರು. ಜೂನ್ 14ರ ವರೆಗೆ ಅವರ ಜಾತಕಫಲ ಸರಿಯಾಗಿರಲಿಲ್ಲ. ಆದರೂ, ಅವರು ರಾಜೀನಾಮೆ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗುವುದಿಲ್ಲ ಎಂದೂ ಇವರು ಭವಿಷ್ಯ ನುಡಿದಿದ್ದರು.

ಈಗ ಮತ್ತೊಂದು ಭವಿಷ್ಯವನ್ನು ನುಡಿದಿರುವ ಸಿನ್ಹಾ, ಅಕ್ಟೋಬರ್ ತಿಂಗಳಲ್ಲಿ ರಾಷ್ಟ್ರ ನಾಯಕರೊಬ್ಬರ ಹತ್ಯೆ ನಡೆಯಲಿದೆ. ಇದರಿಂದ, ದೇಶದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣಗೊಳ್ಳಲಿದೆ ಎಂದು ಹೇಳಿದ್ದಾರೆ.

ರಾಜನೀತಿಯ ಕಾರಕ ಎಂದು ಕರೆಯಲ್ಪಡುವುದು ರಾಹು ರಾಶಿ. ಭಾರತದ ರಾಜಕೀಯದಲ್ಲಿ ಬಹಳದೊಡ್ಡ ಮಟ್ಟದಲ್ಲಿ ಪರಿವರ್ತನೆಯಾಗಲಿದೆ. ಸೆಪ್ಟಂಬರ್ ಹದಿನಾಲ್ಕರ ನಂತರ ಈ ಬದಲಾವಣೆಯನ್ನು ಕಾಣಬಹುದಾಗಿದೆ. ಈ ಬದಲಾವಣೆಯನ್ನು ರಾಜಕೀಯ ಭೂಕಂಪ ಎಂದು ಕರೆಯಬಹುದು ಎಂದು ಕೆ.ಎಂ.ಸಿನ್ಹಾ, ತಮ್ಮ ಯೂಟ್ಯೂಬ್ ಚಾನೆಲ್ ನಲ್ಲಿ ಹೇಳಿದ್ದಾರೆ.

ಮಿಥುನ ರಾಶಿಗೆ ರಾಹು ಪ್ರವೇಶಿಸಿಯಾಗಿದೆ. ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷ ಪಂಜಾಬ್ ನಲ್ಲಿ ಚುನಾವಣೆಯನ್ನು ಗೆಲ್ಲಲಿದೆ. ಕೇಜ್ರಿವಾಲ್ ಅವರ ವರ್ಚಸ್ಸು ಇನ್ನಷ್ಟು ಹೆಚ್ಚಾಗಲಿದೆ. ಸೆಪ್ಟಂಬರ್ ಹದಿನಾಲ್ಕರಿಂದ ಡಿಸೆಂಬರ್ ಅಂತ್ಯದವರೆಗೆ ಅತಿಕೆಟ್ಟ ರಾಜಕೀಯಕ್ಕೆ ಭಾರತೀಯರು ಸಾಕ್ಷಿಯಾಗಬೇಕಿದೆ ಎಂದು ಸಿನ್ಹಾ ತಮ್ಮ ಭವಿಷ್ಯದಲ್ಲಿ ನುಡಿದಿದ್ದಾರೆ.
ಅಕ್ಟೋಬರ್ ಹನ್ನೊಂದರಂದು ರಾಷ್ಟ್ರ ನಾಯಕರೊಬ್ಬರ ಹತ್ಯೆಯಾಗಲಿದೆ, ಇವರು ರಾಜಕೀಯದಲ್ಲಿ ಅತ್ಯಂತ ಚಿರಪರಿಚಿತ ಮುಖಂಡರಾಗಿರುತ್ತಾರೆ. ಇದರಿಂದ ಇಡೀ ದೇಶದಲ್ಲಿ ಭಯದ ವಾತಾವರಣವಿರಲಿದೆ, ದಂಗೆಯೂ ನಡೆಯಲಿದೆ. ಆದರೆ ಈ ನಾಯಕ ಪ್ರಧಾನಿ ಮೋದಿಯಲ್ಲ ಎಂದು ಸಿನ್ಹಾ ಭವಿಷ್ಯ ನುಡಿದಿದ್ದಾರೆ.

ಮೇದಿನಿ ಭವಿಷ್ಯದ ಪ್ರಕಾರ, ಷಡ್ಯಂತ್ರದ ಮೂಲಕ ಜನಪ್ರಿಯ ನಾಯಕನ ಹತ್ಯೆಯಾಗಲಿದೆ. R ಅಥವಾ S ನಿಂದ ಆರಂಭವಾಗುವ ಮುಖಂಡರಿಗೆ ತೊಂದರೆಯಾಗಲಿದೆ. ಕೆಟ್ಟ ರಾಜಕೀಯದ ಪರಮಾವಧಿಯನ್ನು ಇದಾದ ನಂತರ ನೋಡಬಹುದಾಗಿದೆ ಎಂದು ಸಿನ್ಹಾ ಹೇಳಿದ್ದಾರೆ.




ವರದಿ:ರಾಮನಾಥ್


ಪೋಸ್ಟ್ ಮ್ಯಾನ್ ನ್ಯೂಸ್ ನ ಕಳಕಳಿ:
ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹರಡದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ A truck carrying…

5 hours ago

ತಂದೆ–ಮಗನ ಜಗಳ ಕೊಲೆಯಲ್ಲಿ ಅಂತ್ಯ; ಮೃತದೇಹ ಬಾವಿಗೆ ಎಸೆದ ಆರೋಪ

ಸಾಗರ: ಜೈಲಿನಿಂದ ಬಿಡುಗಡೆಯಾದ ತಂದೆಯನ್ನೇ ಮಗ ಕೊಲೆ ಮಾಡಿದ ಆರೋಪ; ಮೃತದೇಹ ಬಾವಿಗೆ ಎಸೆದು ಮುಚ್ಚಿಟ್ಟ ಶಂಕೆ A man…

7 hours ago

ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ – ಇಲ್ಲಿದೆ ಸಂಪೂರ್ಣ ವಿವರ!

ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ - ಇಲ್ಲಿದೆ…

24 hours ago

ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಹೆದ್ದಾರಿಪುರ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ Villagers protest by planting…

24 hours ago

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ A container lorry lost control and collided…

1 day ago

ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ

ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ Karnataka government bans manufacture, storage, transport,…

1 day ago