ಆನಂದಪುರ: ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಪೊಲೀಸ್ ಉಪಠಾಣೆಯ ಸಿಬ್ಬಂದಿಗಳಿಗಾಗಿ ಸುಮಾರು ನಲವತ್ತು ವರ್ಷಗಳ ಹಿಂದೆ ಸರ್ಕಾರ ನಿರ್ಮಿಸಿದಂತಹ ಪೊಲೀಸ್ ವಸತಿ ಗೃಹಗಳು ಇಂದು ಸಂಪೂರ್ಣವಾಗಿ ಶಿಥಿಲಗೊಂಡಿದೆ.
ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಕಾಣುವಂತಹ ಕೋಟ್ಯಂತರ ರೂಪಾಯಿ ಬೆಲೆಬಾಳುವ ಜಾಗದಲ್ಲಿ ನಿರ್ಮಿಸಿರುವಂತಹ 5 ಪೊಲೀಸ್ ವಸತಿ ಗೃಹಗಳು ಇದೀಗ ಸಂಪೂರ್ಣವಾಗಿ ಪಾಳು ಬಿದ್ದಿದ್ದು ಅನೈತಿಕ ಚಟುವಟಿಕೆಯ ಮುಖ್ಯ ತಾಣವಾಗಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಇದೆ.
ಮದ್ಯವ್ಯಸನಿ ಗಳಿಗಂತೂ ಇದು ಅಡ್ಡವಾಗಿದ್ದು ಯಾವುದೇ ಭಯವಿಲ್ಲದೆ ವಸತಿಗೃಹದ ಒಳಗಡೆನೇ ಇವರು ತಮ್ಮ ಅನೈತಿಕ ಚಟುವಟಿಕೆಯನ್ನು ರಾಜಾರೋಷವಾಗಿ ಮಾಡುತ್ತಿದ್ದಾರೆ.
ವಸತಿ ಗೃಹದ ಮುಂದೆ ಬಾನೆತ್ತರಕ್ಕೆ ಗಿಡಗಂಟಿಗಳು ಬೆಳೆದಿದ್ದು ವಾಸಕ್ಕೆ ಯೋಗ್ಯವಿಲ್ಲದಂತಾಗಿದೆ.
ಇಲ್ಲಿನ ಉಪ ಠಾಣೆಯ ಸಿಬ್ಬಂದಿಗಳು ವಸತಿಗೃಹಗಳಿಲ್ಲದೆ ಬೇರೆ ಕಡೆ ಬಾಡಿಗೆ ಮನೆಯಲ್ಲಿ ವಾಸಿಸುವ ವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು ಸರ್ಕಾರದ ಲಕ್ಷಾಂತರ ರೂಪಾಯಿ ವಸತಿ ಗೃಹ ಪಾಳು ಬಿದ್ದಿದೆ.ಮುಖ್ಯರಸ್ತೆಯ ಪಕ್ಕದಲ್ಲೇ ವಸತಿ ಗೃಹಗಳು ಪಾಳು ಬಿದ್ದರೂ ಕೂಡ ಅಧಿಕಾರಿಗಳು ಗಮನಹರಿಸದೇ ಇರುವುದು ನಿಜವಾಗಿಯೂ ಕೂಡ ಅಧಿಕಾರಿಗಳ ಜಾಣ ಕುರುಡುತನವಾಗಿದೆ.
ಇನ್ನಾದರೂ ಅಧಿಕಾರಿಗಳು ಈ ವಸತಿಗೃಹಗಳನ್ನು ಪುನರ್ನಿರ್ಮಿಸಿ ಅನೈತಿಕ ಚಟುವಟಿಕೆ ತಾಣ ದಿಂದ ಮುಕ್ತಗೊಳಿಸಿ ವಸತಿಗೃಹವನ್ನು ಪುನರ್ನಿರ್ಮಿಸಿ ಸಿಬ್ಬಂದಿಗಳ ವಾಸಕ್ಕೆ ಯೋಗ್ಯ ಸ್ಥಳವನ್ನಾಗಿ ಮಾಡಿಕೊಡಬೇಕಾಗಿರುವುದು ಸಾರ್ವಜನಿಕರ ಆಗ್ರಹವಾಗಿದೆ.
ವರದಿ: ದೇವರಾಜ್ ರಿಪ್ಪನ್ ಪೇಟೆ
ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್