Categories: Blog

ಅರಮನೆ ಹಳ್ಳ ಸೇತುವೆ: ಹಲವು ದಶಕಗಳ ಸಮಸ್ಯೆಗೆ ಸ್ಪಂದಿಸಿದ ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ:ಹಳಿಯೂರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಹಲವು ದಶಕಗಳ  ಬೇಡಿಕೆಯಾದ ಅರಮನೆ ಹಳ್ಳ ಸೇತುವೆಗೆ ಹಣ ಬಿಡುಗಡೆಯಾಗಿದ್ದು ಕೆಲವೆ ದಿನಗಳಲ್ಲಿ ಕಾಮಗಾರಿ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿದೆ.


ಇಲ್ಲಿನ ಅರಮನೆ ಹಳ್ಳಕ್ಕೆ ಸೇತುವೆ ನಿರ್ಮಾಣ ವಿಚಾರದಲ್ಲಿ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ ಎಂಬ ಅಡಿಬರಹದಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಮಾಡಿತ್ತು.ಈ ವರದಿಗೆ ಕೂಡಲೇ ಸ್ಪಂದಿಸಿದ ಶಾಸಕ ಹರತಾಳು ಹಾಲಪ್ಪನವರ ಆಪ್ತ ಸಹಾಯಕರಾದ ಕೀರ್ತಿ ಗೌಡರವರು ಅರಮನೆ ಹಳ್ಳ ಸೇತುವೆಗೆ ಬಿಡುಗಡೆಯಾಗಿರುವ  ಅನುದಾನದ ಬಗ್ಗೆ ಮಾಹಿತಿ ನೀಡಿದರು.

ಈ ಮೊದಲು 2017-18 ನೇ ಸಾಲಿನಲ್ಲಿ  ಶಾಸಕರಾದ ಹರತಾಳು ಹಾಲಪ್ಪನವರು ಅರಮನೆ ಹಳ್ಳಕ್ಕೆ ಪ್ರತ್ಯೇಕ ಎರಡು ಕಾಲು ಸಂಕ ನಿರ್ಮಾಣಕ್ಕೆ ಕ್ರಮವಾಗಿ ಸುಮಾರು 10 ಮತ್ತು 15 ಲಕ್ಷ  ರೂ ಅನುದಾನವನ್ನು ಬಿಡುಗಡೆಗೊಳಿಸಿ ಕಾಮಗಾರಿ ಪ್ರಾರಂಭಗೊಂಡಿತು ಆದರೆ ದೊಡ್ಡ ಸೇತುವೆ ಬೇಕು ಎಂದು ಕಾಲು ಸಂಕ ನಿರ್ಮಾಣಕ್ಕೆ ಊರಿನ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ ಕಾರಣ ಕಾಮಗಾರಿ ನೆನೆಗುದಿಗೆಗೆ ಬಿದ್ದಿತ್ತು.

     –  20/11/2021 ಶಾಸಕರಿಗೆ ಮನವಿ ಕೊಟ್ಟ ಸಂಧರ್ಭ-



ನಂತರ 20/11/2020 ಶಾಸಕರು ಹಾಗೂ ಸಂಸದರು ಗವಟೂರು-ನೆರಲಮನೆ-ಪೂಜಾರದಿಂಬ ರಸ್ತೆ ಗುದ್ದಲಿ ಪೂಜೆಗೆ ಬಂದಾಗ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರಾದ ಮಲ್ಲಿಕಾರ್ಜುನ್  ಹಾಗೂ  ಕೀರ್ತಿ ಗೌಡರವರ ನೇತೃತ್ವದಲ್ಲಿ ಮಾನ್ಯ ಶಾಸಕರಿಗೆ ಅರಮನೆ ಹಳ್ಳ ಸೇತುವೆ ನಿರ್ಮಾಣದ ಬಗ್ಗೆ ಮನವಿಯನ್ನು ಕೊಡಲಾಯಿತು.

 –01/07/21ರಂದು ಅಧಿಕಾರಿಗಳು ಸ್ಥಳ ಪರಿಶೀಲಿಸಿದ ಸಂಧರ್ಭ-



ಈ ಜ್ವಲಂತ ಸಮಸ್ಯೆಯ ಬಗ್ಗೆ ಕೂಡಲೇ ಸ್ಪಂದಿಸಿದ ಶಾಸಕರಾದ ಹಾಲಪ್ಪನವರು  ಸದರಿ ಗ್ರಾಮಕ್ಕೆ ಸಂಪರ್ಕಿಸುವ ಸೇತುವೆ ನಿರ್ಮಿಸಲು 50 ಲಕ್ಷ ಅನುದಾನ ಮಂಜೂರು ಮಾಡಿಸಿದ್ದು, 01-07-2021 ರಂದು ಅಧಿಕಾರಿಗಳು ಸ್ಥಳ ಪರಿಶೀಲಿಸಿ, ಎಸ್ಟಿಮೇಟ್ ಮಾಡಿದ್ದಾರೆ.ಮಳೆಗಾಲ ಮುಗಿದ ನಂತರ ಕಾಮಗಾರಿ ಪ್ರಾರಂಭವಾಗುತ್ತದೆ ಎಂದು ಶಾಸಕರ ಆಪ್ತ ಕಾರ್ಯದರ್ಶಿ ಕೀರ್ತಿ ಗೌಡರವರು ಮಾಹಿತಿ ನೀಡಿದರು.

ಈ ವಿಚಾರದ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಗ್ರಾಮಸ್ಥರಾದ ನಾಗಭೂಷಣ್ ಹಾಗೂ ಕಶ್ಯಪ್ ರವರು ಕಳೆದ 60 ವರ್ಷಗಳಿಂದ ಸೇತುವೆ ಇಲ್ಲದೆ ಮಳೆಗಾಲದ ಸಂದರ್ಭದಲ್ಲಿ ಗವಟೂರು ಗ್ರಾಮದ ಹಳಿಯೂರು (ಮತ್ತಿಮನೆ, ಸಂಪಳ್ಳಿ ಸಂಪರ್ಕ)ಭಾಗದ ಜನರು ದಿನ ನಿತ್ಯದ ವಸ್ತುಗಳು, ಶಾಲೆಗೆ ಹೋಗುವ ಮಕ್ಕಳು, ಕೃಷಿ ಚಟುವಟಿಕೆಗಳಿಗೆ ಆಳು ಕೂಡ ಸಿಗುವುದಿಲ್ಲ, ಗೊಬ್ಬರ ತರಲು ಒದ್ದಾಡುತ್ತಿರುವ ಕೃಷಿಕರು ಸೇತುವೆ ಇಲ್ಲದೆ ಸಂಕಟಪಡುತ್ತಿದ್ದಾರೆ.ನಮ್ಮ ಊರಿಗೆ ಕೊನೇ ಪಕ್ಷ ಮಳೆಗಾಲದ ತುರ್ತು ಸಂಧರ್ಭದಲ್ಲಿ ಆಸ್ಪತ್ರೆಗೆ ಹೋಗಲು ಆಂಬ್ಯುಲೆನ್ಸ್ ಬಂದರೆ ಸಾಕು ಎಂಬ ಪರಿಸ್ಥಿತಿಯಲ್ಲಿದ್ದೆವು ಎಂದು ತಮ್ಮ ನೋವು ವ್ಯಕ್ತ ಪಡಿಸಿದರು.

     ಸೇತುವೆ ಇಲ್ಲದೇ ಹೊಳೆ ದಾಟುತ್ತಿರುವ ಗ್ರಾಮಸ್ಥರು



ನಮ್ಮ ಊರಿಗೆ ಹೋಗಲು ಯಾವುದೇ ಪರ್ಯಾಯ ಮಾರ್ಗ ಇರುವುದಿಲ್ಲ ಹಾಗಾಗಿ ನಾವು ಕಾಲುಸಂಕ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದೆವು.

ಈಗ ಶಾಸಕರಾದ ಹರತಾಳು ಹಾಲಪ್ಪನವರ ಸಹಕಾರದಿಂದ ನಮ್ಮ ಊರಿಗೆ ಸೇತುವೆ ನಿರ್ಮಾಣವಾಗುತ್ತಿರುವುದರಿಂದ ಸಂತಸವಾಗಿದೆ  ಅಧಿಕಾರಿಗಳು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡದೇ ತ್ವರಿತಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಮನವಿ ಮಾಡಿದರು.

ಒಟ್ಟಾರೆಯಾಗಿ ಆರು ದಶಕಗಳ ಬೇಡಿಕೆಯಾದ ಅರಮನೆಹಳ್ಳ ಸೇತುವೆ ನಿರ್ಮಾಣವಾಗುತ್ತಿರುವುದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ.ಶಾಸಕರ ಕಾರ್ಯವೈಖರಿಯನ್ನು ಪ್ರಶಂಸಿದ್ದಾರೆ.




ರಿಪ್ಪನ್ ಪೇಟೆ ವರದಿ:




ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…

44 minutes ago

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ!

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…

10 hours ago

ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ

ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ Three people were arrested…

23 hours ago

ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ

ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ Farmer from Thirthahalli…

23 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪ್ರದೋಷ್‌ಗೆ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್‌ ಅಸ್ತು

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪ್ರದೋಷ್‌ಗೆ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್‌ ಅಸ್ತು Renukaswamy murder case takes…

23 hours ago

ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ KSRTC ಬಸ್‌ನ ಟೈರ್; ತಪ್ಪಿದ ಭಾರಿ ಅನಾಹುತ

ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ KSRTC ಬಸ್‌ನ ಟೈರ್; ತಪ್ಪಿದ ಭಾರಿ ಅನಾಹುತ KSRTC bus travelling from Udupi to…

23 hours ago