ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಸದ್ದಿಲ್ಲದೆ ಸಜ್ಜಾಗುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಆಷಾಢ ಮಾಸ ಕಳೆಯುತ್ತಿದ್ದಂತೆ “ರಂಗಪ್ರವೇಶ’ಕ್ಕೆ ನೀಲನಕ್ಷೆ ರೂಪಿಸುತ್ತಿದ್ದಾರೆ.
ಕಳೆದ ಎರಡು ವಿಧಾನಸಭೆ ಚುನಾವಣೆಯ ಅನುಭವದ ಆಧಾರದ ಮೇಲೆ 2023ರಲ್ಲಿ 150 ಕ್ಷೇತ್ರಗಳ ಗುರಿಯೊಂದಿಗೆ ರಾಜ್ಯ ಪ್ರವಾಸ ಕೈಗೊಳ್ಳಲು ತೀರ್ಮಾನಿಸಿದ್ದಾರೆ. ಈ ಸಂದರ್ಭದಲ್ಲಿ ಮತ್ತೆ ತಮಗೆ ಜನಪ್ರಿಯತೆ ತಂದುಕೊಟ್ಟ “ಗ್ರಾಮವಾಸ್ತವ್ಯ’ ನಡೆಸುವ ಬಗ್ಗೆಯೂ ಚಿಂತನೆ ನಡೆಸಿದ್ದಾರೆ.
ಹಳೇ ಮೈಸೂರು, ಉತ್ತರ ಕರ್ನಾಟಕ ಹಾಗೂ ಮಲೆನಾಡು ಭಾಗದ ಕ್ಷೇತ್ರಗಳನ್ನು ಪಟ್ಟಿ ಮಾಡಿಕೊಂಡಿದ್ದು, ಪ್ರವಾಸದ ಅನಂತರ ಬೃಹತ್ ಸಮಾವೇಶ ನಡೆಸಿ ವರ್ಷಕ್ಕೆ ಮುಂಚೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲು ನಿರ್ಧರಿಸಿದ್ದಾರೆ.
ಆರೋಗ್ಯ, ಶಿಕ್ಷಣ, ವಸತಿ, ಕೃಷಿ, ಕೈಗಾರಿಕೆ ಅಭಿವೃದ್ಧಿಗೆ ಜತೆಗೆ ಉದ್ಯೋಗ ಸೃಷ್ಟಿ ಕ್ಷೇತ್ರಗಳಿಗೆ ಒತ್ತು ನೀಡುವ ಪ್ರಣಾಳಿಕೆಯ “ಪಂಚಸೂತ್ರ’ ಸಿದ್ಧಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರತೀ ವಲಯಕ್ಕೆ ವರ್ಷಕ್ಕೆ 25 ಸಾವಿರ ಕೋಟಿ ರೂ. ವೆಚ್ಚ ಮಾಡುವುದು, ಆಯಾ ಕ್ಷೇತ್ರ ಹೇಗೆ ಅಭಿವೃದ್ಧಿಯಾಗಲಿದೆ ಎಂಬುದರ ವೀಡಿಯೋ ಪ್ರಾತ್ಯಕ್ಷಿಕೆಯನ್ನು ರಾಜ್ಯದ 224 ಕ್ಷೇತ್ರಗಳ ಪ್ರತೀ ಗ್ರಾಮದಲ್ಲೂ ಸಂಚಾರಿ ಎಲ್ಇಡಿ ಮೂಲಕ ಪ್ರದರ್ಶಿಸಲು ಮುಂದಾಗಿದ್ದಾರೆ.
ತಾಲೂಕು ಮತ್ತು ಜಿ.ಪಂ. ಚುನಾವಣೆಗಳಲ್ಲಿ ಪಕ್ಷಕ್ಕೆ ಗಟ್ಟಿ ತಳಪಾಯ ಹಾಕಿ ವಿಧಾನಸಭೆ ಚುನಾವಣೆಗೆ ಸಜ್ಜಾಗುವುದು ಉದ್ದೇಶ ಎನ್ನಲಾಗಿದೆ.
ಕೈ ನಾಯಕರ ಸಂಪರ್ಕ:
ಕಾಂಗ್ರೆಸ್ನಲ್ಲಿ ಬಣ ರಾಜಕೀಯದಿಂದ ಟಿಕೆಟ್ ತಪ್ಪುವ ಆತಂಕದಲ್ಲಿರುವ ಹಲವು ನಾಯಕರು ಎಚ್ಡಿಕೆ ಸಂಪರ್ಕದಲ್ಲಿದ್ದು, ಟಿಕೆಟ್ ಖಾತರಿಯಾದರೆ ಪಕ್ಷಕ್ಕೆ ಬರುವ ಭರವಸೆ ನೀಡಿದ್ದಾರೆ. ಸ್ಥಳೀಯ ನಾಯಕರ ಅಭಿಪ್ರಾಯ ಪಡೆದು ಅವರ ಸೇರ್ಪಡೆ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.
ಏನು ಮಾಡುತ್ತಿದ್ದಾರೆ ಎಚ್ಡಿಕೆ?
ಕೇತಗಾನಹಳ್ಳಿಯ ತೋಟದ ಮನೆಯಲ್ಲಿರುವ ಕುಮಾರಸ್ವಾಮಿ ಎರಡು ತಿಂಗಳುಗಳಿಂದ ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ತಮ್ಮ ತೋಟದಲ್ಲೇ ಪ್ರಯೋಗ ಮಾಡುತ್ತಿದ್ದಾರೆ. ಜತೆಗೆ ಕುರಿ, ಕೋಳಿ, ಹಸು, ಮೀನು ಸಾಕಾಣಿಕೆ ಮಾಡುತ್ತಿದ್ದಾರೆ.
ತಾಲೂಕು, ಜಿ.ಪಂ. ಹಾಗೂ ವಿಧಾನಸಭೆ ಚುನಾವಣೆಗೆ ತಳಮಟ್ಟದಿಂದ ಪಕ್ಷ ಸಂಘಟಿಸಲು ಸಜ್ಜಾಗುತ್ತಿದ್ದಾರೆ. ಮುಂದಿನ ತಿಂಗಳಿನಿಂದ ರಾಜ್ಯ ಪ್ರವಾಸಕ್ಕೆ ತೀರ್ಮಾನಿಸಲಾಗಿದ್ದು, ಹಲವೆಡೆ ಗ್ರಾಮವಾಸ್ತವ್ಯವೂ ಇರಲಿದೆ. ಇದೆಲ್ಲದರ ಬಗ್ಗೆ ಸದ್ಯದಲ್ಲೇ ರೂಪುರೇಷೆ ಪ್ರಕಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವರದಿ:®®
ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್