ವಾಷಿಂಗ್ಟನ್: ಇಡೀ ಜಗತ್ತು ಕೋವಿಡ್ ಸಂಕಷ್ಟಕ್ಕೆ ಸಿಲುಕಿರುವ ನಡುವೆಯೇ ಭಾರೀ ಪ್ರಮಾಣದ ಸೂರ್ಯನ ಶಾಖದ ಅಲೆಗಳು ಸೌರ ಚಂಡಮಾರುತದ ರೂಪದಲ್ಲಿ ಬುಧವಾರ ಅಥವಾ ಗುರುವಾರ ಭೂಮಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇದಕ್ಕೂ ಮುನ್ನ ಭಾನುವಾರ ಅಥವಾ ಸೋಮವಾರ ಸೌರ ಚಂಡಮಾರುತ ಭೂಮಿಗೆ ಬಂದಪ್ಪಳಿಸುವ ಸಾಧ್ಯತೆ ಇದೆ ಎಂದು ವರದಿಯಾಗಿತ್ತು.
ಆಯಸ್ಕಾಂತೀಯ ಗುಣದ ಚಂಡಮಾರುತ ಎಂದು ಕರೆಯಲ್ಪಡುವ ಇದು ಅತೀ ವೇಗದ ಸೌರ ಮಾರುತವಾಗಿದ್ದು, ಭೂಮಿಯ ಮ್ಯಾಗ್ನೆಟಿಕ್ ವಲಯದ ಮೇಲೆ ಅಪ್ಪಳಿಸುವ ನಿರೀಕ್ಷೆ ಇದೆ ಎಂದು ಹವಾಮಾನ ತಜ್ಞರು ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ.
ಸೂರ್ಯನ ವಾತಾವರಣದಲ್ಲಿ ರಂಧ್ರವೊಂದು ತೆರೆದಿದ್ದು, ಆ ಮೂಲಕ ಈ ಬಿಸಿ ತಾಪದ ಚಂಡಮಾರುತ ಹೊರಬರುತ್ತಿದ್ದು, ಇದು ಭೂಮಿಯತ್ತ ಬೀಸುತ್ತಿರುವುದಾಗಿ ವಿಜ್ಞಾನಿಗಳು ವಿವರಿಸಿದ್ದಾರೆ. ಈ ಸೌರ ಚಂಡಮಾರುತ ಭೂಮಿಯ ಆಯಸ್ಕಾಂತೀಯ ಕ್ಷೇತ್ರದ ಮೇಲೆ ಅಪ್ಪಳಿಸಿದಲ್ಲಿ ಜಿಪಿಎಸ್, ಮೊಬೈಲ್ ಸಿಗ್ನಲ್ಸ್, ಸೆಟಲೈಟ್ ಟಿವಿ ಹಾನಿಗೊಳಗಾಗುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ.
ಸೌರ ಚಂಡಮಾರುತದ ವೇಗ ಗಂಟೆಗೆ 1.6 ಮಿಲಿಯನ್ ಕಿಲೋ ಮೀಟರ್ ವೇಗದಲ್ಲಿದೆ ಎಂದು ವಿಜ್ಞಾನಿಗಳು ಅಂದಾಜಿಸಿದ್ದಾರೆ. ಇದು ಭೂಮಿಯ ಹೊರಮೈ ವಾತಾವರಣವನ್ನು ಇನ್ನಷ್ಟು ಉಷ್ಣಗೊಳಿಸಲಿದ್ದು, ಇದರಿಂದಾಗಿ ಉಪಗ್ರಹಗಳ ಮೇಲೆ ಪರಿಣಾಮ ಬೀರಲಿದೆ ಎಂದು ವಿವರಿಸಿದೆ.
ಸೂರ್ಯನಲ್ಲಿ ನಿರಂತರವಾಗಿ ನಡೆಯುವ ರಾಸಾಯನ ಪ್ರಕ್ರಿಯೆಗಳು ನಡೆಯುತ್ತಿರುವುದರಿಂದಲೇ ಅದೊಂದು ಉರಿಯುವ ಗೋಳದ ರೂಪದಲ್ಲಿರುತ್ತದೆ. ಸೂರ್ಯನಲ್ಲಿ ನಡೆಯುವ ರಾಸಾಯನಿಕ ಪ್ರಕ್ರಿಯೆಗಳಲ್ಲಿ ಏರುಪೇರಾದರೆ, ಇಂಥ ಸೌರ ಅಲೆಗಳು ಚಂಡ ಮಾರುತದ ರೂಪದಲ್ಲಿ ಏಳುತ್ತವೆ ಎಂದು ಹೇಳಲಾಗಿದೆ.
ವರದಿ:ರಾಮನಾಥ್
ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..
https://chat.whatsapp.com/HRze7aL1vlY6EbLgZF0CCe
ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…
ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ Three people were arrested…
ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ Farmer from Thirthahalli…
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪ್ರದೋಷ್ಗೆ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್ ಅಸ್ತು Renukaswamy murder case takes…
ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ KSRTC ಬಸ್ನ ಟೈರ್; ತಪ್ಪಿದ ಭಾರಿ ಅನಾಹುತ KSRTC bus travelling from Udupi to…
ಅಂಗನವಾಡಿ ಸಿಬ್ಬಂದಿಗೆ ಕನಿಷ್ಠ ವೇತನ ಜಾರಿಗೆ ಆಗ್ರಹ: ಜಿಲ್ಲಾಧಿಕಾರಿಗೆ 24 ಬೇಡಿಕೆಗಳ ಮನವಿ Anganwadi workers in Shivamogga demand…