ಇಂದು ಅಥವಾ ನಾಳೆ ಭೂಮಿಗೆ ಅಪ್ಪಳಿಸಲಿದೆ ಪ್ರಬಲ ಸೌರಚಂಡಮಾರುತ:ಟಿ ವಿ,ಮೊಬೈಲ್, ಜಿಪಿಎಸ್ ಸಿಗ್ನಲ್ ಹಾನಿ ಸಾಧ್ಯತೆ.

ವಾಷಿಂಗ್ಟನ್: ಇಡೀ ಜಗತ್ತು ಕೋವಿಡ್ ಸಂಕಷ್ಟಕ್ಕೆ ಸಿಲುಕಿರುವ ನಡುವೆಯೇ ಭಾರೀ ಪ್ರಮಾಣದ ಸೂರ್ಯನ ಶಾಖದ ಅಲೆಗಳು ಸೌರ ಚಂಡಮಾರುತದ ರೂಪದಲ್ಲಿ ಬುಧವಾರ ಅಥವಾ ಗುರುವಾರ ಭೂಮಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇದಕ್ಕೂ ಮುನ್ನ ಭಾನುವಾರ ಅಥವಾ ಸೋಮವಾರ ಸೌರ ಚಂಡಮಾರುತ ಭೂಮಿಗೆ ಬಂದಪ್ಪಳಿಸುವ ಸಾಧ್ಯತೆ ಇದೆ ಎಂದು ವರದಿಯಾಗಿತ್ತು.

ಆಯಸ್ಕಾಂತೀಯ ಗುಣದ ಚಂಡಮಾರುತ ಎಂದು ಕರೆಯಲ್ಪಡುವ ಇದು ಅತೀ ವೇಗದ ಸೌರ ಮಾರುತವಾಗಿದ್ದು, ಭೂಮಿಯ ಮ್ಯಾಗ್ನೆಟಿಕ್ ವಲಯದ ಮೇಲೆ ಅಪ್ಪಳಿಸುವ ನಿರೀಕ್ಷೆ ಇದೆ ಎಂದು ಹವಾಮಾನ ತಜ್ಞರು ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ.

ಸೂರ್ಯನ ವಾತಾವರಣದಲ್ಲಿ ರಂಧ್ರವೊಂದು ತೆರೆದಿದ್ದು, ಆ ಮೂಲಕ ಈ ಬಿಸಿ ತಾಪದ ಚಂಡಮಾರುತ ಹೊರಬರುತ್ತಿದ್ದು, ಇದು ಭೂಮಿಯತ್ತ ಬೀಸುತ್ತಿರುವುದಾಗಿ ವಿಜ್ಞಾನಿಗಳು ವಿವರಿಸಿದ್ದಾರೆ. ಈ ಸೌರ ಚಂಡಮಾರುತ ಭೂಮಿಯ ಆಯಸ್ಕಾಂತೀಯ ಕ್ಷೇತ್ರದ ಮೇಲೆ ಅಪ್ಪಳಿಸಿದಲ್ಲಿ ಜಿಪಿಎಸ್, ಮೊಬೈಲ್ ಸಿಗ್ನಲ್ಸ್, ಸೆಟಲೈಟ್ ಟಿವಿ ಹಾನಿಗೊಳಗಾಗುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ.

ಸೌರ ಚಂಡಮಾರುತದ ವೇಗ ಗಂಟೆಗೆ 1.6 ಮಿಲಿಯನ್ ಕಿಲೋ ಮೀಟರ್ ವೇಗದಲ್ಲಿದೆ ಎಂದು ವಿಜ್ಞಾನಿಗಳು ಅಂದಾಜಿಸಿದ್ದಾರೆ. ಇದು ಭೂಮಿಯ ಹೊರಮೈ ವಾತಾವರಣವನ್ನು ಇನ್ನಷ್ಟು ಉಷ್ಣಗೊಳಿಸಲಿದ್ದು, ಇದರಿಂದಾಗಿ ಉಪಗ್ರಹಗಳ ಮೇಲೆ ಪರಿಣಾಮ ಬೀರಲಿದೆ ಎಂದು ವಿವರಿಸಿದೆ.

ಸೂರ್ಯನಲ್ಲಿ ನಿರಂತರವಾಗಿ ನಡೆಯುವ ರಾಸಾಯನ ಪ್ರಕ್ರಿಯೆಗಳು ನಡೆಯುತ್ತಿರುವುದರಿಂದಲೇ ಅದೊಂದು ಉರಿಯುವ ಗೋಳದ ರೂಪದಲ್ಲಿರುತ್ತದೆ. ಸೂರ್ಯನಲ್ಲಿ ನಡೆಯುವ ರಾಸಾಯನಿಕ ಪ್ರಕ್ರಿಯೆಗಳಲ್ಲಿ ಏರುಪೇರಾದರೆ, ಇಂಥ ಸೌರ ಅಲೆಗಳು ಚಂಡ ಮಾರುತದ ರೂಪದಲ್ಲಿ ಏಳುತ್ತವೆ ಎಂದು ಹೇಳಲಾಗಿದೆ.

ವರದಿ:ರಾಮನಾಥ್

ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..

https://chat.whatsapp.com/HRze7aL1vlY6EbLgZF0CCe

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಹೊಸನಗರ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ನೂತನ ಪಿಎಸ್‌ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕಾರ

ಹೊಸನಗರ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ನೂತನ ಪಿಎಸ್‌ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕಾರ Hosanagara PSI…

2 hours ago

ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ – 9ನೇ ತರಗತಿ ವಿದ್ಯಾರ್ಥಿನಿ ಸಾವು

ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ - 9ನೇ ತರಗತಿ ವಿದ್ಯಾರ್ಥಿನಿ ಸಾವು A tragic incident…

3 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ನಿಯಮ ಉಲ್ಲಂಘನೆ; ಶಿವಮೊಗ್ಗದಲ್ಲಿ ಒಟ್ಟು 5 ಪ್ರಕರಣ ದಾಖಲು

ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ನಿಯಮ ಉಲ್ಲಂಘನೆ; ಶಿವಮೊಗ್ಗದಲ್ಲಿ ಒಟ್ಟು 5 ಪ್ರಕರಣ ದಾಖಲು Shivamogga police have registered…

3 hours ago

ಶಿವಮೊಗ್ಗದಲ್ಲಿ ತಡರಾತ್ರಿ ಕಿಡಿಗೇಡಿಗಳ ಕೃತ್ಯ: ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಬೆಂಕಿ

ಶಿವಮೊಗ್ಗದಲ್ಲಿ ತಡರಾತ್ರಿ ಕಿಡಿಗೇಡಿಗಳ ಕೃತ್ಯ: ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಬೆಂಕಿ Miscreants allegedly set two parked bikes on…

4 hours ago

ತೋಟದಲ್ಲಿ ಪ್ರತ್ಯಕ್ಷವಾದ 27.7 ಕೆಜಿ ಬೃಹತ್ ಹೆಬ್ಬಾವು!

ತೋಟದಲ್ಲಿ ಪ್ರತ್ಯಕ್ಷವಾದ 27.7 ಕೆಜಿ ಬೃಹತ್ ಹೆಬ್ಬಾವು! A massive 27.7 kg python was spotted in a…

4 hours ago

ತೀರ್ಥಹಳ್ಳಿಗೆ ಯುವ ಐಪಿಎಸ್ ಅಧಿಕಾರಿ: ನೂತನ ಡಿವೈಎಸ್ಪಿಯಾಗಿ ಭಾನುಪ್ರಕಾಶ್ ಜೆ. ನೇಮಕ

ತೀರ್ಥಹಳ್ಳಿಗೆ ಯುವ ಐಪಿಎಸ್ ಅಧಿಕಾರಿ: ನೂತನ ಡಿವೈಎಸ್ಪಿಯಾಗಿ ಭಾನುಪ್ರಕಾಶ್ ಜೆ. ನೇಮಕ Young IPS officer Bhanu Prakash J.…

22 hours ago