ವಾಷಿಂಗ್ಟನ್: ಇಡೀ ಜಗತ್ತು ಕೋವಿಡ್ ಸಂಕಷ್ಟಕ್ಕೆ ಸಿಲುಕಿರುವ ನಡುವೆಯೇ ಭಾರೀ ಪ್ರಮಾಣದ ಸೂರ್ಯನ ಶಾಖದ ಅಲೆಗಳು ಸೌರ ಚಂಡಮಾರುತದ ರೂಪದಲ್ಲಿ ಬುಧವಾರ ಅಥವಾ ಗುರುವಾರ ಭೂಮಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇದಕ್ಕೂ ಮುನ್ನ ಭಾನುವಾರ ಅಥವಾ ಸೋಮವಾರ ಸೌರ ಚಂಡಮಾರುತ ಭೂಮಿಗೆ ಬಂದಪ್ಪಳಿಸುವ ಸಾಧ್ಯತೆ ಇದೆ ಎಂದು ವರದಿಯಾಗಿತ್ತು.
ಆಯಸ್ಕಾಂತೀಯ ಗುಣದ ಚಂಡಮಾರುತ ಎಂದು ಕರೆಯಲ್ಪಡುವ ಇದು ಅತೀ ವೇಗದ ಸೌರ ಮಾರುತವಾಗಿದ್ದು, ಭೂಮಿಯ ಮ್ಯಾಗ್ನೆಟಿಕ್ ವಲಯದ ಮೇಲೆ ಅಪ್ಪಳಿಸುವ ನಿರೀಕ್ಷೆ ಇದೆ ಎಂದು ಹವಾಮಾನ ತಜ್ಞರು ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ.
ಸೂರ್ಯನ ವಾತಾವರಣದಲ್ಲಿ ರಂಧ್ರವೊಂದು ತೆರೆದಿದ್ದು, ಆ ಮೂಲಕ ಈ ಬಿಸಿ ತಾಪದ ಚಂಡಮಾರುತ ಹೊರಬರುತ್ತಿದ್ದು, ಇದು ಭೂಮಿಯತ್ತ ಬೀಸುತ್ತಿರುವುದಾಗಿ ವಿಜ್ಞಾನಿಗಳು ವಿವರಿಸಿದ್ದಾರೆ. ಈ ಸೌರ ಚಂಡಮಾರುತ ಭೂಮಿಯ ಆಯಸ್ಕಾಂತೀಯ ಕ್ಷೇತ್ರದ ಮೇಲೆ ಅಪ್ಪಳಿಸಿದಲ್ಲಿ ಜಿಪಿಎಸ್, ಮೊಬೈಲ್ ಸಿಗ್ನಲ್ಸ್, ಸೆಟಲೈಟ್ ಟಿವಿ ಹಾನಿಗೊಳಗಾಗುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ.
ಸೌರ ಚಂಡಮಾರುತದ ವೇಗ ಗಂಟೆಗೆ 1.6 ಮಿಲಿಯನ್ ಕಿಲೋ ಮೀಟರ್ ವೇಗದಲ್ಲಿದೆ ಎಂದು ವಿಜ್ಞಾನಿಗಳು ಅಂದಾಜಿಸಿದ್ದಾರೆ. ಇದು ಭೂಮಿಯ ಹೊರಮೈ ವಾತಾವರಣವನ್ನು ಇನ್ನಷ್ಟು ಉಷ್ಣಗೊಳಿಸಲಿದ್ದು, ಇದರಿಂದಾಗಿ ಉಪಗ್ರಹಗಳ ಮೇಲೆ ಪರಿಣಾಮ ಬೀರಲಿದೆ ಎಂದು ವಿವರಿಸಿದೆ.
ಸೂರ್ಯನಲ್ಲಿ ನಿರಂತರವಾಗಿ ನಡೆಯುವ ರಾಸಾಯನ ಪ್ರಕ್ರಿಯೆಗಳು ನಡೆಯುತ್ತಿರುವುದರಿಂದಲೇ ಅದೊಂದು ಉರಿಯುವ ಗೋಳದ ರೂಪದಲ್ಲಿರುತ್ತದೆ. ಸೂರ್ಯನಲ್ಲಿ ನಡೆಯುವ ರಾಸಾಯನಿಕ ಪ್ರಕ್ರಿಯೆಗಳಲ್ಲಿ ಏರುಪೇರಾದರೆ, ಇಂಥ ಸೌರ ಅಲೆಗಳು ಚಂಡ ಮಾರುತದ ರೂಪದಲ್ಲಿ ಏಳುತ್ತವೆ ಎಂದು ಹೇಳಲಾಗಿದೆ.
ವರದಿ:ರಾಮನಾಥ್
ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..
https://chat.whatsapp.com/HRze7aL1vlY6EbLgZF0CCe
ಹೊಸನಗರ ಪಿಎಸ್ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ನೂತನ ಪಿಎಸ್ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕಾರ Hosanagara PSI…
ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ - 9ನೇ ತರಗತಿ ವಿದ್ಯಾರ್ಥಿನಿ ಸಾವು A tragic incident…
ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ನಿಯಮ ಉಲ್ಲಂಘನೆ; ಶಿವಮೊಗ್ಗದಲ್ಲಿ ಒಟ್ಟು 5 ಪ್ರಕರಣ ದಾಖಲು Shivamogga police have registered…
ಶಿವಮೊಗ್ಗದಲ್ಲಿ ತಡರಾತ್ರಿ ಕಿಡಿಗೇಡಿಗಳ ಕೃತ್ಯ: ನಿಲ್ಲಿಸಿದ್ದ ಎರಡು ಬೈಕ್ಗಳಿಗೆ ಬೆಂಕಿ Miscreants allegedly set two parked bikes on…
ತೋಟದಲ್ಲಿ ಪ್ರತ್ಯಕ್ಷವಾದ 27.7 ಕೆಜಿ ಬೃಹತ್ ಹೆಬ್ಬಾವು! A massive 27.7 kg python was spotted in a…
ತೀರ್ಥಹಳ್ಳಿಗೆ ಯುವ ಐಪಿಎಸ್ ಅಧಿಕಾರಿ: ನೂತನ ಡಿವೈಎಸ್ಪಿಯಾಗಿ ಭಾನುಪ್ರಕಾಶ್ ಜೆ. ನೇಮಕ Young IPS officer Bhanu Prakash J.…