Categories: Blog

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ಮರುನಾಮಕರಣ: ಲಕ್ಷಣ ಸವದಿ

ಬೆಂಗಳೂರು: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ಮರುನಾಮಕರಣ ಮಾಡುವುದಾಗಿ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಈ ಆದೇಶ ತಕ್ಷಣದಿಂದಲೇ ಅನ್ವಯವಾಗಲಿದ್ದು, ಇನ್ನುಮುಂದೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯನ್ನು (North Eastern Karnataka Road Transport Corporation) ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ಕರೆಯುವುದಾಗಿ ಮಾಹಿತಿ ನೀಡಿದ್ದಾರೆ.

ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣವಾದ ನಂತರ ಈಶಾನ್ಯ ಸಾರಿಗೆಗೂ ಈ ರೀತಿ ಮರು ನಾಮಕರಣ ಮಾಡಬೇಕೆಂದು ಬಹುದಿನಗಳ ಬೇಡಿಕೆ ಸ್ಥಳೀಯರಿಂದ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಈಗ ಕ್ರಮ ಕೈಗೊಳ್ಳಲಾಗುತ್ತಿದೆ. ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ ಎಂದು ಈಶಾನ್ಯ ಸಾರಿಗೆ ನಿಗಮಕ್ಕೆ ಮರುನಾಮಕರಣ ಮಾಡಲಾಗುತ್ತಿದೆ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ.

ಮಹಿಳೆಯರಿಗಾಗಿ ವಿನೂತನ ಬಸ್

ಕಲಬುರಗಿ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿ, ಮಹಿಳೆಯರಿಗೆ ಬಸ್​ನಲ್ಲಿಯೇ ಶೌಚಾಲಯ, ಸ್ನಾನಗೃಹ, ಹಾಲುಣಿಸಲು ಸೌಲಭ್ಯ, ಸ್ಯಾನಿಟರಿ ಪ್ಯಾಡ್ ವ್ಯವಸ್ಥೆ ಮಾಡಿ ಮಾದರಿಯಾಗಿದ್ದಾರೆ. ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ, ಯಾದಗಿರಿ ವರ್ಕ್​ಶಾಪ್​ನಲ್ಲಿ ಮಹಿಳೆಯರಿಗಾಗಿಯೇ ವಿನೂತನ ಬಸ್ ಅನ್ನು ಸಿದ್ಧಗೊಳಿಸಲಾಗಿದೆ. ಸಂಸ್ಥೆಯಲ್ಲಿ ನಿರುಪಯುಕ್ತವಾಗಿದ್ದ ಬಸ್ ಅನ್ನು ಮಹಿಳಾ ಶೌಚಾಲಯದ ಬಸ್ ಆಗಿ ಪರಿವರ್ತನೆ ಮಾಡಲಾಗಿದೆ. ಸಾವಿರಾರು ಕಿಲೋ ಮೀಟರ್ ಓಡಿದ ನಂತರ, ಕೆಲ ಬಸ್​ಗಳನ್ನು ಓಡಿಸಲು ಆಗುವುದಿಲ್ಲ. ಅಂತಹ ಬಸ್​ವೊಂದನ್ನು ಪಡೆದು, ಅದನ್ನು ಬದಲಾಯಿಸಿ ಮಹಿಳಾ ಬಸ್ ಅನ್ನು ಸಿದ್ಧಗೊಳಿಸಿದ್ದಾರೆ. ಬಸ್​ನಲ್ಲಿ ಸೌಲಭ್ಯಗಳನ್ನು ಕಲ್ಪಿಸಲು ಸರಿಸುಮಾರು ಎರಡು ಲಕ್ಷ ರೂಪಾಯಿ ಹಣವನ್ನು ಖರ್ಚು ಮಾಡಿದ್ದಾರೆ. ಕಳೆದ ಒಂದು ತಿಂಗಳಿಂದ ಸಂಸ್ಥೆಯ ವರ್ಕ್​ಶಾಪ್ ಸಿಬ್ಬಂದಿ ನಿರಂತರ ಶ್ರಮ ವಹಿಸಿ, ನಿರುಪಯುಕ್ತ ಬಸ್​ ಅನ್ನು ಉಪಯುಕ್ತ ಬಸ್ ಆಗಿ ಮಾಡಿದ್ದಾರೆ.

ಈ ಬಸ್​ನ ವಿಶೇಷತೆ ಏನು?
ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಈ ಬಸ್ ಮಹಿಳಾ ಪ್ರಯಾಣಿಕರನ್ನು ದೃಷ್ಟಿಯಲ್ಲಿಟ್ಟುಕೊಂಡು ರೂಪಿಸಲಾಗಿದೆ. ಅಂದರೆ ಬಸ್ ನಿಲ್ದಾಣದಲ್ಲಿ ಈಗಿರುವ ಶೌಚಗೃಹಗಳನ್ನು ಬಳಕೆ ಮಾಡಲು ಅನೇಕರು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಸ್ವಚ್ಛ ಮತ್ತು ಸುಂದರವಾದ ಮಹಿಳಾ ಶೌಚಾಲಾಯ, ಸ್ನಾನಗೃಹ, ಹಾಲುಣಿಸುವ ಕೋಣೆಯನ್ನು ಬಸ್​ನಲ್ಲಿ ಸಿದ್ಧಮಾಡಲಾಗಿದೆ. ಒಂದು ಬಸ್​ನಲ್ಲಿ ಎರಡು ದೇಶಿಯ ಶೌಚಾಲಯ, ಒಂದು ವಿದೇಶಿ ಶೌಚಾಲಯ, ಕೈ ತೊಳೆಯುವ ಕೋಣೆ, ಸ್ನಾನಗೃಹ ಕೋಣೆ, ಜತೆಗೆ ಪುಟ್ಟ ಮಕ್ಕಳಿಗೆ ಹಾಲುಣಿಸಲು ಕೋಣೆಯೊಂದನ್ನು ಮಾಡಲಾಗಿದೆ. ವಿಶೇಷವೆಂದರೆ ಸ್ನಾನಗೃಹದಲ್ಲಿ ಗೀಜರ್ ಕೂಡಿಸಿದ್ದು, ಬಿಸಿನೀರು ಕೂಡಾ ಬರಲಿದೆ. ಮಹಿಳಾ ಪ್ರಯಾಣಿಕರು ಶೌಚ, ಸ್ನಾನ ಮಾಡಿ, ಬಟ್ಟೆ ಬದಲಾಯಿಸಲು ಬೇಕಾದ ಎಲ್ಲಾ ವ್ಯವಸ್ಥೆಯನ್ನು ಇಲ್ಲಿ ಮಾಡಲಾಗಿದೆ. ಜತೆಗೆ ಸ್ಯಾನಿಟರಿ ನ್ಯಾಪಕಿನ್ ವ್ಯವಸ್ಥೆ ಕೂಡಾ ಕಲ್ಪಿಸಲಾಗಿದೆ. ಬಸ್​ನ ಮೇಲೆ ಸೋಲಾರ್​ ವ್ಯವಸ್ಥೆ ಇದ್ದು, ವಿದ್ಯುತ್ ಪೂರಕೆಯಾಗುತ್ತದೆ. ಹೀಗಾಗಿ ಪ್ರತಿಯೊಂದು ಕೋಣೆಗೂ ಫ್ಯಾನ್ ಕೂಡಾ ಹಾಕಲಾಗಿದೆ. ಬಸ್​ನ ಮೇಲ್ಭಾಗದಲ್ಲಿ ನೀರಿನ ಟ್ಯಾಂಕ್ ಕೂರಿಸಿದ್ದು, ಅಲ್ಲಿಂದ ಶೌಚಗೃಹಕ್ಕೆ, ಸ್ನಾನ ಗೃಹಕ್ಕೆ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ.

ಬಸ್ ನಿಲ್ದಾಣಕ್ಕೆ ಮಾತ್ರ ಈ ಬಸ್ ಸೀಮಿತ
ಮಹಿಳಾ ಶೌಚಾಲಯ, ಸ್ನಾನಗೃಹ ಇರುವ ಈ ಬಸ್ ಬೇರಡೆ ಹೋಗುವುದಿಲ್ಲ. ಬದಲಾಗಿ ಬಸ್ ನಿಲ್ದಾಣದಲ್ಲಿಯೇ ನಿಲ್ಲಲಿದೆ. ಹೆಚ್ಚಿನ ಜನದಟ್ಟಣೆ ಇರುವ ಕಲಬುರಗಿಯಲ್ಲಿ ಇಂದಿನಿಂದ (ಜುಲೈ 7) ಈ ಬಸ್ ಬಳಕೆಗೆ ಮುಕ್ತವಾಗಲಿದೆ. ಸಾರಿಗೆ ಸಚಿವ ಲಕ್ಷ್ಮಣ ಸವದಿ ಈ ಬಸ್​ಗೆ ಇಂದು ಚಾಲನೆ ನೀಡಲಿದ್ದಾರೆ. ಈ ಸೌಲಭ್ಯಗಳನ್ನು ಪಡೆಯಬೇಕಾದರೆ ಐದರಿಂದ ಹತ್ತು ರೂಪಾಯಿ ಹಣ ನಿಗದಿ ಮಾಡಲು ಸಂಸ್ಥೆಯ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಏಕೆಂದರೆ ಬಸ್​ಗೆ ಒಬ್ಬರು ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಬೇಕು. ಸ್ವಚ್ಚತೆ ಕಾಪಾಡಿಕೊಳ್ಳಬೇಕಾದರೆ ಕೆಲಸಗಾರರ ಅವಶ್ಯಕತೆ ಇದೆ. ಹೀಗಾಗಿ ಪ್ರತಿ ಪ್ರಯಾಣಿಕರಿಗೆ ಐದು ರೂಪಾಯಿ ಪಡೆದು ಈ ಸೌಲಭ್ಯವನ್ನು ಬಳಸಿಕೊಳ್ಳಲು ಮಹಿಳಾ ಪ್ರಯಾಣಿಕರಿಗೆ ಅವಕಾಶ ಕಲ್ಪಿಸಲು ಸಂಸ್ಥೆಯ ಅಧಿಕಾರಿಗಳು ಮುಂದಾಗಿದ್ದಾರೆ.

ವರದಿ: ರಾಮನಾಥ್ ರಿಪ್ಪನ್ ಪೇಟೆ

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ – ಇಲ್ಲಿದೆ ಸಂಪೂರ್ಣ ವಿವರ!

ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ - ಇಲ್ಲಿದೆ…

4 hours ago

ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಹೆದ್ದಾರಿಪುರ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ Villagers protest by planting…

4 hours ago

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ A container lorry lost control and collided…

7 hours ago

ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ

ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ Karnataka government bans manufacture, storage, transport,…

7 hours ago

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…

1 day ago

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ!

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…

2 days ago