Categories: Blog

ಕೆಸರು ಗುಂಡಿಯಾದ ರಸ್ತೆ: ಗ್ರಾಮಸ್ಥರಿಂದ ಆಕ್ರೋಶ

ಸೊರಬ:ಇಲ್ಲಿನ ಚಂದ್ರಗುತ್ತಿಯ ಬೋವಿ ಕಾಲೋನಿಯಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಗಾಗಿ ಇಂತಹ ಮಳೆಗಾಲದಲ್ಲಿ ರಸ್ತೆ ಅಗೆದು ಓಡಾಡಲು ಬಾರದ ಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಅಳಲನ್ನು ತೋಡಿಕೊಂಡರು.

ಗ್ರಾಮ ಪಂಚಾಯತಿಯ 14ನೇ ಹಣಕಾಸಿನಲ್ಲಿ 1.5 ಲಕ್ಷ ಅನುದಾನದಲ್ಲಿ ಮೊದಲಿದ್ದ 3ಇಂಚ್ ಪೈಪಲೈನ್ ಬದಲಾಯಿಸಿ 2ಇಂಚ್ ಪೈಪ್ ಹಾಕಿದರು. ಮೊದಲು 3 ಇಂಚ್ ಇದ್ದಾಗ ಸ್ವಲ್ಪವಾದರೂ ನೀರು ಬರುತ್ತಿತ್ತು ಆದರೆ ಈವಾಗ ಪೈಪ್ ಬದಲಾವಣೆಯಿಂದ ಸಮರ್ಪಕವಾಗಿ ನೀರು ಬರುತ್ತಿಲ್ಲ ಎಂದು ಗ್ರಾಮಸ್ಥರು ದೂರಿದರು.

ಗುತ್ತಿಗೆದಾರರು ಬಿಲ್ ಗೋಸ್ಕರ ಮಳೆಯಲ್ಲಿ ದಿಡೀರನೆ ಅಸಮರ್ಪಕ  ಕಾಮಗಾರಿ ಮಾಡಿದ್ದು ರಸ್ತೆಯನ್ನು ಕೆಸರು ಗುಂಡಿಯಾಗಿ ಮಾಡಿದ ಗುತ್ತಿಗೆದಾರನ ಮೇಲೆ ಕ್ರಮ ಜರುಗಿಸಬೇಕಾಗಿ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಕೂಡಲೇ ಸ್ಥಳಕ್ಕಾಗಮಿಸಿದ ಜಿಲ್ಲಾ ಪಂಚಾಯತ್ ಇಂಜಿನೀಯರ್ ಗಣಪತಿ ನಾಯ್ಕ್ ಮತ್ತು ಗ್ರಾಮ ಪಂಚಾಯತ್ ಪಿ ಡಿ ಓ ಈಶ್ವರಪ್ಪ ಮಳೆ ಸ್ವಲ್ಪ ಕಡಿಮೆಯಾದ ತಕ್ಷಣ ರಸ್ತೆ ದುರಸ್ಥಿ ಮಾಡಿಸಿ,ನೀರಿಗಾಗಿ ಶಾಸಕರ ಅನುದಾನದಲ್ಲಿ ಕೊಳೆವೆಬಾವಿ ಮಂಜೂರಾಗಿದ್ದು ತಕ್ಷಣ ಕೊರೆಸಿ ನೀರಿನ ಸಮಸ್ಯೆಯನ್ನು ಪರಿಹರಿಸುತ್ತೇವೆಂದು ಭರವಸೆ ನೀಡಿದರು.

ಇಷ್ಟೆಲ್ಲ ನಡೆದರು ಗ್ರಾಮಸ್ಥರ ಹಾಗೂ ಕೂಲಿ ಕಾರ್ಮಿಕರ ಸಮಸ್ಯೆಗೆ ಸ್ಪಂದಿಸದೆ ಸ್ಥಳಕ್ಕೆ ಬಾರದ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸದ್ಯಸ್ಯರ ನಡುವಳಿಕೆ ಬಗ್ಗೆ  ಜನರು ಆಕ್ರೋಶ ವ್ಯಕ್ತ ಪಡಿಸಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ದ್ಯಾಮಪ್ಪ,,ರಾಘವೇಂದ್ರ ಸಿ,ರಾಘುಫೋಟೋ,ನಾಗರಾಜ,ಪರಶುರಾಮ್,ಕೃಷ್ಣಪ್ಪ,ರವೀಂದ್ರ,
ಮಲ್ಲಪ್ಪ,ನೀಲಮ್ಮ,ಗೌರಿ,ರೇಣುಕಾ,ಶಿಲ್ಪಾ,ರತ್ನಕ್ಕ ಉಪಸ್ಥಿತರಿದ್ದರು.



ವರದಿ: ವೆಂಕಟೇಶ್ ಚಂದ್ರಗುತ್ತಿ ಸೊರಬ





ಪೋಸ್ಟ್ ಮ್ಯಾನ್ ನ್ಯೂಸ್ ನ ಕಳಕಳಿ:

ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹರಡದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ A truck carrying…

6 hours ago

ತಂದೆ–ಮಗನ ಜಗಳ ಕೊಲೆಯಲ್ಲಿ ಅಂತ್ಯ; ಮೃತದೇಹ ಬಾವಿಗೆ ಎಸೆದ ಆರೋಪ

ಸಾಗರ: ಜೈಲಿನಿಂದ ಬಿಡುಗಡೆಯಾದ ತಂದೆಯನ್ನೇ ಮಗ ಕೊಲೆ ಮಾಡಿದ ಆರೋಪ; ಮೃತದೇಹ ಬಾವಿಗೆ ಎಸೆದು ಮುಚ್ಚಿಟ್ಟ ಶಂಕೆ A man…

8 hours ago

ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ – ಇಲ್ಲಿದೆ ಸಂಪೂರ್ಣ ವಿವರ!

ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ - ಇಲ್ಲಿದೆ…

1 day ago

ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಹೆದ್ದಾರಿಪುರ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ Villagers protest by planting…

1 day ago

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ A container lorry lost control and collided…

1 day ago

ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ

ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ Karnataka government bans manufacture, storage, transport,…

1 day ago