ರಿಪ್ಪನ್ ಪೇಟೆ: ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಜಿಲ್ಲಾ ಪಂಚಾಯತಿ ಕ್ಷೇತ್ರವಾದ ರಿಪ್ಪನ್ ಪೇಟೆಯಿಂದ ಈ ಬಾರಿ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಾನು ಆಸಕ್ತಿಯನ್ನು ಹೊಂದಿದ್ದೇನೆ ಎಂದು ಸಮಾಜ ಸೇವಕ ಹಾಗೂ ರಿಪ್ಪನ್ ಪೇಟೆ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸತೀಶ್ ಹೇಳಿದ್ದಾರೆ.
ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಈ ಬಾರಿ ರಿಪ್ಪನ್ ಪೇಟೆ ಜಿಲ್ಲಾ ಪಂಚಾಯತಿ ಕ್ಷೇತ್ರವು ಸಾಮಾನ್ಯ ಕ್ಷೇತ್ರವಾಗಿದ್ದು ನಾನು ಬಿಜೆಪಿಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಯಸಿದ್ದು ಬಿಜೆಪಿ ಪಕ್ಷದಿಂದ ಅವಕಾಶವನ್ನು ಕೊಟ್ಟರೆ ಖಂಡಿತವಾಗಿಯೂ ನಾನು ಬಿಜೆಪಿ ಅಭ್ಯರ್ಥಿಯಾಗಿ ಈ ಬಾರಿ ರಿಪ್ಪನ್ ಪೇಟೆ ಜಿಲ್ಲಾ ಪಂಚಾಯಿತಿಯಿಂದ ಸ್ಪರ್ಧಿಸುತ್ತೇನೆ ಎಂದು ತಿಳಿಸಿದರು.
ಕಳೆದ ಕೆಲವು ದಶಕಗಳಿಂದ ರಿಪ್ಪನಪೇಟೆ ಸೇರಿದಂತೆ ತಾಲ್ಲೂಕು ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ವಿವಿಧ ಸಮಾಜಸೇವೆಯಲ್ಲಿ ಗುರುತಿಸಿಕೊಂಡಿರುವ ನಾನು ಈ ಬಾರಿಯ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಚಿಸಿದ್ದು ಈಗಾಗಲೇ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಎಂಎಸ್ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಹಾಗೂ ಹಾಗೂ ಜಿಲ್ಲೆಯ ಮತ್ತು ತಾಲೂಕಿನ ಎಲ್ಲಾ ಬಿಜೆಪಿಯ ಮುಖಂಡರುಗಳಿಗೆ ನನ್ನ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದು ಬಿಜೆಪಿಯಿಂದ ಸ್ಪರ್ಧಿಸಲು ನನಗೆ ಅವಕಾಶ ಮಾಡಿಕೊಟ್ಟರೆ ನಾನು ಖಂಡಿತವಾಗಿ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದರು.
ಹೊಸನಗರ ತಾಲೂಕಿನ 4 ಜಿಲ್ಲಾಪಂಚಾಯಿತಿ ಕ್ಷೇತ್ರಗಳಲ್ಲಿ ರಿಪ್ಪನಪೇಟೆ ಸಾಮಾನ್ಯ ಕ್ಷೇತ್ರವಾಗಿದ್ದು ಬಿಜೆಪಿಯಿಂದ ಆಲುವಳ್ಳಿ ವೀರೇಶ್, ಬೆಳ್ಳೂರು ತಿಮ್ಮಪ್ಪ, ಪೆಟ್ರೋಲ್ ಬಂಕ್ ಗಿರೀಶ್, ಶಾಸಕ ಹರತಾಳು ಹಾಲಪ್ಪ ಅವರ ಸಹೋದರ ಹರತಾಳು ರಾಮಚಂದ್ರಪ್ಪ, ಉದ್ಯಮಿ ಗುಳಗುಳಿ ಶಂಕರ ನಾಗರಾಜಶೆಟ್ಟಿ ಸೇರಿದಂತೆ ಐದಕ್ಕೂ ಅಧಿಕ ಜನರು ಈ ಬಾರಿ ರಿಪ್ಪನ್ ಪೇಟೆ ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಆಕಾಂಕ್ಷೆಯನ್ನು ಹೊಂದಿದ್ದಾರೆ.
ಶಿವಮೊಗ್ಗ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ರಿಪ್ಪನ್ ಪೇಟೆ ಕ್ಷೇತ್ರದಲ್ಲಿ ಇದುವರೆಗೂ ರಿಪ್ಪನ್ ಪೇಟೆಯ ಯಾವ ಒಬ್ಬ ವ್ಯಕ್ತಿಗೆ ಯಾವುದೇ ರಾಷ್ಟ್ರೀಯ ಪಕ್ಷಗಳಿಂದ ಅವಕಾಶ ದೊರೆತಿಲ್ಲ. ಈ ಬಾರಿಯಾದರೂ ರಿಪ್ಪನ್ ಪೇಟೆಯ ವ್ಯಕ್ತಿಯೊಬ್ಬರಿಗೆ ಅವಕಾಶ ದೊರಕಬಹುದೇ ಎಂದು ಪಟ್ಟಣದ ಜನತೆ ಆಶಾಭಾವನೆಯನ್ನು ಹೊಂದಿದ್ದಾರೆ.
ವರದಿ : ಸಬಾಸ್ಟಿನ್ ಮ್ಯಾಥ್ಯೂಸ್ ರಿಪ್ಪನ್ ಪೇಟೆ
ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್