ಆನಂದಪುರಂ: ಇಲ್ಲಿನ ರಂಗನಾಥಸ್ವಾಮಿ ದೇವಸ್ಥಾನದ ಆವರಣದಲ್ಲಿ ಆಹಾರ ಕಿಟ್ ವಿತರಣಾ ಕಾರ್ಯಕ್ರಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಾಗರ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ. ಜೀವನದ ಕೊನೆ ಕ್ಷಣದವರೆಗೂ ಸಮಾಜಸೇವೆ ಮಾಡಲು ಸಿದ್ಧ.ಕೊವಿಡ್ ಸಂದರ್ಭದಲ್ಲಿ ಸರ್ಕಾರ ಅತೀ ಹೆಚ್ಚಿನ ಗಮನ ಕೊಡಬೇಕಿತ್ತು, ಸರ್ಕಾರ ಅತಿ ಹೆಚ್ಚಿನ ಒತ್ತು ಕೊಟ್ಟಿಲ್ಲ , ಆದ್ದರಿಂದ ಹಲವರು ನೊಂದಿದ್ದಾರೆ,ಕಷ್ಟದಲ್ಲಿದ್ದಾರೆ. ಸಮಾಜದಲ್ಲಿ ಇನ್ನೂ ಕಡುಬಡವರಿದ್ದಾರೆ. ಅಂತಹವರನ್ನು ಗುರುತಿಸುವ ಕಾರ್ಯ ನಡೆಯಬೇಕು ಎಂದರು.
ಕರೋನದ ಫ್ರಂಟ್ ಲೈನ್ ವಾರಿಯರ್ಸ್ ಗಳಾದ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಕ್ಷೌರಿಕರು, ಆಟೋ ಚಾಲಕರು, ಪತ್ರಿಕಾ ವಿತರಕರು, ಹಮಾಲರು ಇವರನ್ನು ಗುರುತಿಸಿ ಆಹಾರದ ಕಿಟ್ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ಕರೋನಾ ಮಹಾಮಾರಿ ನಮ್ಮ ದೇಶಕ್ಕೆ ಬರಬಾರದು ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದ್ಯಸರು ಅದ ಅನಿತಾ ಕುಮಾರಿ, ಮಾಜಿ ತಾ.ಪಂ.ಸದಸ್ಯರಾದ ಸೋಮಶೇಖರ್ ಲ್ಯಾವಿಗೆರೆ, ಯುವ ಕಾಂಗ್ರೆಸ್ ಅಧ್ಯಕ್ಷರು ಅದ ಅಶೋಕ್ ಬೇಳೂರು , ನಗರಸಭೆ ವಿರೋಧಪಕ್ಷನಾಯಕರಾದ ಗಣಪತಿ ಮಂಡಗಳಲೆ, ಒಬಿಸಿ ಅಧ್ಯಕ್ಷರು ಅದ ಸಂತೋಷ ಸದ್ಗುರು, ಪಣಿ, ಯುವ ನಾಯಕರಾದ ರಮಾನಂದ ಪ್ರೇಮ್ ಕುಮಾರ್, ಉಮೇಶ್, ಆನಂದ ಐಗಿನಬೈಲ್, ರಹಮತ್ತುಲ್ಲಾ, ಪ್ರಕಾಶ್, ಮುರುಘಾಮಠ ರಾಜಣ್ಣ, ಸೋಮೇಶ ಹಾಗೂ ಇನ್ನಿತರ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು..
ವರದಿ: ಪವನ್ ಕುಮಾರ್ ಕಠಾರೆ
ಪೋ:9632820256
ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್