ಸಾಗರ: ಸೊರಬದ ಮಾಜಿ ಶಾಸಕರಾದ ಮಧು ಬಂಗಾರಪ್ಪ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಮುಖಂಡರಾದ ಆರ್ ಎಂ ಮಂಜುನಾಥ ಗೌಡರವರು ಹೇಳಿದರು.
ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಜುಲೈ 30ರಂದು ಹುಬ್ಬಳ್ಳಿಯಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದ ರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಮಧು ಬಂಗಾರಪ್ಪ ರವರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದರು.
ಇವರ ಜೊತೆಯಲ್ಲಿ ಭಾರಿ ಸಂಖ್ಯೆಯ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ಹೇಳಿದರು.
ಬಂಗಾರಪ್ಪನವರ ಮಗನಾದ ಮಧುಬಂಗಾರಪ್ಪ ಜಾತ್ಯಾತೀತ ತತ್ವದಲ್ಲಿ ನಂಬಿಕೆ ಹೊಂದಿದವರಾಗಿದ್ದಾರೆ .ಕಳೆದ ಲೋಕಸಭಾ ಚುನಾವಣೆಯಲ್ಲಿ ಅಲ್ಪಮತಗಳಿಂದ ತಪ್ಪಿದ ಅವಕಾಶ ಈ ಬಾರಿ ನಮ್ಮ ಪಕ್ಷಕ್ಕೆ ಸಿಗಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಬಿ. ಆರ್. ಜಯಂತ್ ,ರಾಜನಂದಿನಿ ಕಾಗೋಡು, ಮಹಾಬಲ ಕೌತಿ,ನಗರಸಭಾ ಸದಸ್ಯರಾದ ತಶ್ರೀಫ್,ಸಾಗರ ಸುರೇಶ್ ಬಾಬು ಅಶೋಕ ಬೇಳೂರು ಹಾಗೂ ಇನ್ನಿತರ ಮುಖಂಡರು ಹಾಜರಿದ್ದರು.
ವರದಿ . ಧರ್ಮ ರಾಜ್. ಜಿ .ಸಾಗರ
ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..
https://chat.whatsapp.com/KlIbXYr74Ee5ph5noWzuHw
ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…
ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…
ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ Three people were arrested…
ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ Farmer from Thirthahalli…
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪ್ರದೋಷ್ಗೆ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್ ಅಸ್ತು Renukaswamy murder case takes…
ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ KSRTC ಬಸ್ನ ಟೈರ್; ತಪ್ಪಿದ ಭಾರಿ ಅನಾಹುತ KSRTC bus travelling from Udupi to…