Breaking
12 Jan 2026, Mon

ಜ್ಞಾನೇಂದ್ರರಿಗೆ ಸಚಿವ ಸ್ಥಾನ ಸಿಗಲೆಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ವಿಶೇಷ ಪೂಜೆ:

ತೀರ್ಥಹಳ್ಳಿ : ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಸಂಪುಟ ಸೇರ್ಪಡೆಯಾಗಲು ಬಿಜೆಪಿ ಪಾಳಯದಲ್ಲಿ ಶಾಸಕರ ಕಸರತ್ತು ಗರಿಗೆದರಿದೆ.

ಜಾತಿ ಲಾಬಿ,ಹಿರಿತನ ಹಾಗೂ ಮಠಾಧಿಪತಿಗಳ ಒತ್ತಡ ಹೀಗೆ ಹತ್ತು ಹಲವಾರು ಪ್ರಯತ್ನಗಳಿಂದ ಹೈಕಮಾಂಡ್ ಮೇಲೆ ಪ್ರಭಾವ ಬೀರಿ ಸಚಿವಗಿರಿ ಗಿಟ್ಟಿಸಲು ಸರ್ಕಸ್ ಮಾಡುತ್ತಿದ್ದಾರೆ.

ಆದರೆ ತೀರ್ಥಹಳ್ಳಿಯಲ್ಲಿ ಸ್ವಲ್ಪ ತಮ್ಮ ನೆಚ್ಚಿನ ನಾಯಕ ಆರಗ ಜ್ಞಾನೇಂದ್ರರಿಗೆ ಸಚಿವ ಸ್ಥಾನ ಸಿಗಲೆಂದು ತೀರ್ಥಹಳ್ಳಿಗರ ಆರಾಧ್ಯ ದೈವ ಶ್ರೀರಾಮೇಶ್ವರನ ಮೊರೆ ಹೋಗಲಾಗಿದೆ.

ಮಲೆನಾಡಿನ ತವರೂರು ತೀರ್ಥಹಳ್ಳಿಯ ಯಶಸ್ವಿ ಶಾಸಕ ಎಂದೇ ಬಿಂಬಿತರಾಗಿರುವ ಶಾಸಕ ಆರಗ ಜ್ಞಾನೇಂದ್ರ ನಾಲ್ಕು ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿದವರು. ಪಕ್ಷಕ್ಕಾಗಿ ದುಡಿದವರು. ಅವರಿಗೆ ಮಂತ್ರಿಗಿರಿ ಸಿಗಲೆಂದು ಪ್ರಾರ್ಥಿಸಿ ತೀರ್ಥಹಳ್ಳಿಯ ಮಾರಿಕಾಂಬಾ ದೇಗುಲದಲ್ಲಿ ಬಿಜೆಪಿ ಪಟ್ಟಣ ಯುವ ಮೋರ್ಚಾ ವತಿಯಿಂದ ವಿಶೇಷ ಪೂಜೆ ಪುನಸ್ಕಾರ ನೆರವೇರಿಸಲಾಯಿತು.

ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಮಹಾಗಣಪತಿಗೆ ಫಲ ಪುಷ್ಪ ಅರ್ಪಿಸಲಾಯಿತು. ರಾಮೇಶ್ವರ ದೇವರಿಗೆ ರುದ್ರಾಭಿಷೇಕ ಹಾಗೂ ದುರ್ಗಾಪರಮೇಶ್ವರಿಗೆ ಅಷ್ಟೋತ್ತರ ಸೇವೆಯನ್ನು ನಡೆಸಲಾಯಿತು.
ಕೊರೊನಾದಂಥ ಸಂಕಷ್ಟದ ವೇಳೆ ತಾಲೂಕಿನಲ್ಲಿ ಸುತ್ತಾಡಿ ಜನರ ಕಷ್ಟ ಆಲಿಸಿದ್ದಾರೆ. ಮಳೆ ಬಂದರೂ ಮಳೆಯಲ್ಲಿಯೇ ಜನರ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಿದ್ದಾರೆ. ಮೂರು ಬಾರಿ ಶಾಸಕರಾಗಿರುವ ಅರಗ ಅವರಿಗೆ ಬಿಜೆಪಿ ಹೈಕಮಾಂಡ್ ಹಾಗೂ ಸಿಎಂ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ನೀಡುವಂತಾಗಲಿ ಎಂದು ಪ್ರಾರ್ಥಿಸಲಾಯಿತು. ತೀರ್ಥಹಳ್ಳಿಯ ಪಟ್ಟಣ ಯುವ ಮೋರ್ಚಾ ಹಮ್ಮಿಕೊಂಡಿದ್ದರು.

ಈ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು, ಪಕ್ಷದ ವಿವಿಧ ಪದಾಧಿಕಾರಿಗಳು, ತಾಲೂಕು ಯುವ ಮೋರ್ಚಾದ ಎಲ್ಲಾ ಸದಸ್ಯರ ಉಪಸ್ಥಿತರಿದ್ದರು.


ವರದಿ : ದೇವರಾಜ್ ರಿಪ್ಪನ್ ಪೇಟೆ



ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *

Exit mobile version