ಬೆಂಗಳೂರು: ನಟ ದರ್ಶನ್ರವರ ಲೋನ್ ಗೆ ಜಾಮೀನು ಕೇಸ್ನಲ್ಲಿ ಸಿನಿಮಾ ನಿರ್ದೇಶಕ ಇಂದ್ರಜಿತ್ ಲಂಕೇಶ್ ಎಂಟ್ರಿಯಾಗಿದ್ದು, ಮೈಸೂರು ನಗರದಲ್ಲಿ ಪೊಲೀಸ್ ಸ್ಟೇಷನ್ಗಳು ಸೆಟಲ್ಮೆಂಟ್ ಸ್ಟೇಷನ್ ಆಗಿದೆ. ಜನ ಸಾಮಾನ್ಯರಿಗೆ ನ್ಯಾಯವೇ ಸಿಗುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ಗುರುವಾರ ಬೆಳಗ್ಗೆ ಗೃಹ ಸಚಿವ ಬೊಮ್ಮಾಯಿ ಅವರನ್ನು ಭೇಟಿಯಾದ ಇಂದ್ರಜಿತ್ ಲಂಕೇಶ್, ದರ್ಶನ್ ಹೆಸರಲ್ಲಿ ವಂಚನೆ ಯತ್ನ ಪ್ರಕರಣ, ಮೈಸೂರಿನಲ್ಲಿ ನಡೆದಿರೋ ಗಲಾಟೆ, ಮೈಸೂರಿನ ಸ್ಟಾರ್ ಹೋಟೆಲ್ ಒಂದರಲ್ಲಿ ನಡೆದಿರೋ ದಲಿತನ ಮೇಲಿನ ಹಲ್ಲೆ, ಅಲ್ಲಿನ ಬೆಳವಣಿಗೆ ಕುರಿತು ಮಾಹಿತಿಯನ್ನೊಳಗೊಂಡ ಪತ್ರವನ್ನು ಕೊಟ್ಟರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಇಂದ್ರಜಿತ್, ಸೆಲೆಬ್ರಿಟಿಗಳ ನಡವಳಿಕೆ ಮತ್ತು ಭಾಷೆ ಮಿತಿಮೀರುತ್ತಿದೆ. ಮೈಸೂರು ಪೊಲೀಸ್ ಸ್ಟೇಷನ್ಗಳು ಸ್ಟೇಷನ್ಗಳಾಗಿ ಇಲ್ಲ. ಸೆಟಲ್ಮೆಂಟ್ ಸ್ಟೇಷನ್ ಆಗಿವೆ. ಜನ ಸಾಮಾನ್ಯರಿಗೆ ನ್ಯಾಯವೇ ಸಿಗುತ್ತಿಲ್ಲ ಎಂದರು.
ಕಾರಿನಲ್ಲಿ ಕೂತು ಮಹಿಳೆಯೊಬ್ಬರಿಗೆ ನಟ ದರ್ಶನ್ ಕಿರುಕುಳಕೊಟ್ಟಿದ್ದಾರೆ. ಅರುಣಾ ಕುಮಾರಿಗೆ ಹಿಂಸೆ ಮಾಡಿದ್ದಾರೆ. ಅಷ್ಟೇ ಅಲ್ಲ, ಮೈಸೂರಿನ ಸ್ಟಾರ್ ಹೋಟೆಲ್ ಒಂದರಲ್ಲಿ ವೇಟರ್ ಕೆಲಸ ಮಾಡುತ್ತಿರುವ ದಲಿತ ಯುವಕನ ಮೇಲೆ ದರ್ಶನ್ ಮತ್ತು ಅವರ ಸ್ನೇಹಿತರು ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ವೇಟರ್ ಕಣ್ಣಿಗೆ ಗಾಯವಾಗಿದೆ.ಮಾರನೆ ದಿನ ದಲಿತ ವೇಟರ್ ನ ಹೆಂಡತಿ ಹೊಟೇಲ್ ಗೆ ಪೊರಕೆ ಹಿಡಿದುಕೊಂಡು ಬಂದಿದ್ದಳು ನಂತರ ಅವರನ್ನು ಕರೆಸಿ ಸೆಟಲ್ಮೆಂಟ್ ಮಾಡಿದ್ದಾರೆ. ಮೈಸೂರು ಪೊಲೀಸರೇನು ಬಳೆ ತೊಟ್ಟಿದ್ದಾರಾ? ಪೊಲೀಸರ ನಡವಳಿಕೆ ದುರಂತ ಅನ್ನಿಸುತ್ತೆ ಎಂದು ಇಂದ್ರಜಿತ್ ಗಂಭೀರ ಆರೋಪ ಮಾಡಿದರು.
ವರದಿ: ರಾಮನಾಥ್
ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್