Categories: Blog

ಡಿ ಬಾಸ್ ಅಂಡ್ ಗ್ಯಾಂಗ್ ಮಾಡಿದ ದೌರ್ಜನ್ಯಕ್ಕೆ ವೇಟರ್ ಹೆಂಡತಿ ಪೊರಕೆ ಹಿಡಿದು ನಿಂತಿದ್ದಳು : ಇಂದ್ರಜಿತ್ ಲಂಕೇಶ್ ಗಂಭೀರ ಆರೋಪ

ಬೆಂಗಳೂರು: ನಟ ದರ್ಶನ್​ರವರ ಲೋನ್ ಗೆ ಜಾಮೀನು ಕೇಸ್​ನಲ್ಲಿ ಸಿನಿಮಾ ನಿರ್ದೇಶಕ ಇಂದ್ರಜಿತ್​ ಲಂಕೇಶ್​ ಎಂಟ್ರಿಯಾಗಿದ್ದು, ಮೈಸೂರು ನಗರದಲ್ಲಿ ಪೊಲೀಸ್​ ಸ್ಟೇಷನ್​ಗಳು ಸೆಟಲ್​ಮೆಂಟ್​ ಸ್ಟೇಷನ್​ ಆಗಿದೆ. ಜನ ಸಾಮಾನ್ಯರಿಗೆ ನ್ಯಾಯವೇ ಸಿಗುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ಗುರುವಾರ ಬೆಳಗ್ಗೆ ಗೃಹ ಸಚಿವ ಬೊಮ್ಮಾಯಿ ಅವರನ್ನು ಭೇಟಿಯಾದ ಇಂದ್ರಜಿತ್​ ಲಂಕೇಶ್​, ದರ್ಶನ್ ಹೆಸರಲ್ಲಿ ವಂಚನೆ ಯತ್ನ ಪ್ರಕರಣ, ಮೈಸೂರಿನಲ್ಲಿ ನಡೆದಿರೋ ಗಲಾಟೆ, ಮೈಸೂರಿನ ಸ್ಟಾರ್ ಹೋಟೆಲ್ ಒಂದರಲ್ಲಿ ನಡೆದಿರೋ ದಲಿತನ ಮೇಲಿನ ಹಲ್ಲೆ, ಅಲ್ಲಿನ ಬೆಳವಣಿಗೆ ಕುರಿತು ಮಾಹಿತಿಯನ್ನೊಳಗೊಂಡ ಪತ್ರವನ್ನು ಕೊಟ್ಟರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಇಂದ್ರಜಿತ್​, ಸೆಲೆಬ್ರಿಟಿಗಳ ನಡವಳಿಕೆ ಮತ್ತು ಭಾಷೆ ಮಿತಿಮೀರುತ್ತಿದೆ. ಮೈಸೂರು ಪೊಲೀಸ್​ ಸ್ಟೇಷನ್​ಗಳು ಸ್ಟೇಷನ್​ಗಳಾಗಿ ಇಲ್ಲ. ಸೆಟಲ್​ಮೆಂಟ್​ ಸ್ಟೇಷನ್​ ಆಗಿವೆ. ಜನ ಸಾಮಾನ್ಯರಿಗೆ ನ್ಯಾಯವೇ ಸಿಗುತ್ತಿಲ್ಲ ಎಂದರು.
ಕಾರಿನಲ್ಲಿ ಕೂತು ಮಹಿಳೆಯೊಬ್ಬರಿಗೆ ನಟ ದರ್ಶನ್​ ಕಿರುಕುಳಕೊಟ್ಟಿದ್ದಾರೆ. ಅರುಣಾ ಕುಮಾರಿಗೆ ಹಿಂಸೆ ಮಾಡಿದ್ದಾರೆ. ಅಷ್ಟೇ ಅಲ್ಲ, ಮೈಸೂರಿನ ಸ್ಟಾರ್ ಹೋಟೆಲ್ ಒಂದರಲ್ಲಿ ವೇಟರ್​ ಕೆಲಸ ಮಾಡುತ್ತಿರುವ ದಲಿತ ಯುವಕನ ಮೇಲೆ ದರ್ಶನ್​ ಮತ್ತು ಅವರ ಸ್ನೇಹಿತರು ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ವೇಟರ್​ ಕಣ್ಣಿಗೆ ಗಾಯವಾಗಿದೆ.ಮಾರನೆ ದಿನ ದಲಿತ ವೇಟರ್ ನ ಹೆಂಡತಿ ಹೊಟೇಲ್ ಗೆ ಪೊರಕೆ ಹಿಡಿದುಕೊಂಡು ಬಂದಿದ್ದಳು ನಂತರ ಅವರನ್ನು ಕರೆಸಿ ಸೆಟಲ್​ಮೆಂಟ್​ ಮಾಡಿದ್ದಾರೆ. ಮೈಸೂರು ಪೊಲೀಸರೇನು ಬಳೆ ತೊಟ್ಟಿದ್ದಾರಾ? ಪೊಲೀಸರ ನಡವಳಿಕೆ ದುರಂತ ಅನ್ನಿಸುತ್ತೆ ಎಂದು ಇಂದ್ರಜಿತ್​ ಗಂಭೀರ ಆರೋಪ ಮಾಡಿದರು.
ವರದಿ: ರಾಮನಾಥ್
ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…

3 hours ago

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ!

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…

12 hours ago

ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ

ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ Three people were arrested…

1 day ago

ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ

ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ Farmer from Thirthahalli…

1 day ago

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪ್ರದೋಷ್‌ಗೆ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್‌ ಅಸ್ತು

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪ್ರದೋಷ್‌ಗೆ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್‌ ಅಸ್ತು Renukaswamy murder case takes…

1 day ago

ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ KSRTC ಬಸ್‌ನ ಟೈರ್; ತಪ್ಪಿದ ಭಾರಿ ಅನಾಹುತ

ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ KSRTC ಬಸ್‌ನ ಟೈರ್; ತಪ್ಪಿದ ಭಾರಿ ಅನಾಹುತ KSRTC bus travelling from Udupi to…

1 day ago