Categories: Blog

ದುಬೈನಲ್ಲಿ ಸುಖವಾಗಿದ್ದ ಮಹಿಳೆ, ಸಾಯೋದಕ್ಕಂತಲೇ ತವರಿಗೆ ಬರುವಂತಾದದ್ದು ದುರಂತ:

ಉಡುಪಿ: ಒಂಟಿ ಮಹಿಳೆಯನ್ನು ವಯರ್ ಮೂಲಕ ಕತ್ತು ಹಿಸುಕಿ ಕೊಲೆ ಮಾಡಿ ನಗದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಈ‌ ಒಂದು ಕೊಲೆ‌ ಹಲವು ಅನುಮಾನಗಳಿಗೆ ಎಡೆಮಾಡಿದೆ. ಬ್ರಹ್ಮಾವರದ ಕುಮ್ರಗೋಡುವಿನ ಫ್ಲಾಟ್ ನಲ್ಲಿ ಶವವಾದ ಮಹಿಳೆಯ ಹೆಸರು ವಿಶಾಲ ಗಾಣಿಗ(36). ಈಕೆಗೆ 7 ವರ್ಷದ ಮಗಳಿದ್ದಾರೆ. ದುಬೈನಲ್ಲಿ ಕಂಪೆನಿಯೊಂದರ ಮನೇಜರ್ ಆಗಿ ದುಡಿಯುವ ಪತಿ. ಆಸ್ತಿ-ಪಾಸ್ತಿ, ಮನೆ, ಭೂಮಿ ಯಾವುದಕ್ಕೂ ಕೊರತೆ ಇರಲಿಲ್ಲ. ಹತ್ತು ದಿನಗಳ ಹಿಂದೆ ಮಗಳು ಆರ್ವಿಯೊಂದಿಗೆ ಈಕೆ ದುಬೈನಿಂದ ತವರಿಗೆ ಬಂದಿದ್ದರು. ಮನೆಯ ಆಸ್ತಿ ವ್ಯವಹಾರ ಸಂಬಂಧ ಸಹಿ ಹಾಕುವ ಸಲುವಾಗಿ ತವರಿಗೆ ವಾಪಾಸಾಗಿದ್ದು, ವ್ಯವಹಾರಗಳೆಲ್ಲಾ ಮುಗಿದಾಗಿತ್ತು.

ತಂದೆ, ತಾಯಿ ಮತ್ತು ಮಗಳ ಜೊತೆ ಬ್ರಹ್ಮಾವರದ ಫ್ಲಾಟ್ ನಲ್ಲೇ ವಾಸವಾಗಿದ್ದು ಸೋಮವಾರ ಬೆಳಿಗ್ಗೆ ಜೊತೆಗಿದ್ದ ಮೂವರನ್ನೂ ಕುಂದಾಪುರದ ಗುಜ್ಜಾಡಿಯಲ್ಲಿರುವ ಮನೆಗೆ ಬಿಟ್ಟಿದ್ದಾರೆ. ಬ್ಯಾಂಕ್  ಕೆಲಸ ಇದೆ ಜೊತೆಗೆ ಫ್ಲಾಟ್ ನಲ್ಲಿರುವ ಕೆಲವು ವಸ್ತು ತರಬೇಕಿದೆ ಎಂದು ಮತ್ತೆ ಅದೇ ರಿಕ್ಷಾದಲ್ಲಿ ಬ್ಯಾಂಕ್ ಹೋಗಿ ಹಣ ಹಾಗೂ ಲಾಕರ್ ನಲ್ಲಿರುವ ಚಿನ್ನಾಭರಣ ತೆಗೆದುಕೊಂಡು ಬ್ರಹ್ಮಾವರಕ್ಕೆ ವಾಪಾಸಾಗಿದ್ದರು. ಒಂದೇ ಆಟೋದಲ್ಲಿ ಒಟ್ಟು 75 ಕಿಮೀ ದೂರ ಪ್ರಯಾಣಿಸಿದ್ದರು. ಬ್ರಹ್ಮಾವರಕ್ಕೆ ಬಂದವರು ಬ್ಯಾಂಕ್ ಗೂ ಹೋಗಿದ್ದರು. ಇದಾದ ನಂತರ ಯಾರ ಸಂಪರ್ಕಕ್ಕೂ ಸಿಗಲಿಲ್ಲ. ಗಾಬರಿಗೊಂಡ ತಂದೆ ರಾತ್ರಿ ಮನೆಗೆ ಬಂದು ನೋಡಿದಾಗ, ಕೇಬಲ್ ನಿಂದ ಕತ್ತು ಹಿಸುಕಲ್ಪಟ್ಟ ಸತ್ತ ಸ್ಥಿತಿಯಲ್ಲಿ ವಿಶಾಲ ಅವರ ಶವ ಪತ್ತೆಯಾಗಿದೆ.
ಮೈಮೇಲಿದ್ದ ಚಿನ್ನಾಭರಣ ಕಾಣೆಯಾಗಿದೆ.  ಮನೆಗೆ ನುಗ್ಗಿದ ಆ‌ ವ್ಯಕ್ತಿ ಚಿನ್ನಾಭರಣ ದೋಚುವ ಸಲುವಾಗಿಯೇ ಈಕೆಯನ್ನು ಸಾಯಿಸಿದ್ದಾರೆ ಅನಿಸುತ್ತಿದೆ. ಆದರೆ ಕೆಲವೊಂದು ಘಟನಾವಳಿಗಳು ಸಂಶಯಕ್ಕೂ ಕಾರಣವಾಗಿದೆ. ಸುಮಾರು ಎರಡು ಲಕ್ಷ ಮೌಲ್ಯದ ಚಿನ್ನಾಭರಣ ಕಾಣೆಯಾಗಿದೆ. ಮೇಲ್ನೋಟಕ್ಕೆ ಚಿನ್ನಕ್ಕಾಗಿಯೇ ಕೊಲೆ ನಡೆದಿದೆ ಎಂಬ ಸಂಶಯ ಇದೆ. ಇತ್ತೀಚೆಗಷ್ಟೇ ಆಸ್ತಿ ವ್ಯವಹಾರ ಮುಗಿದಿತ್ತು. ಈಕೆಯ ಬಳಿ ಸಾಕಷ್ಟು ಹಣ, ಆಭರಣ ಇರಬಹುದು ಎಂಬ ಮಾಹಿತಿ ಇದ್ದವರಿಂದಲೇ ಕೊಲೆ ನಡೆದಿದೆ ಅನ್ನೋದು ಸ್ಪಷ್ಟ.

ಒಟ್ಟು 75 ಕಿಮೀ ಅಟೋದಲ್ಲಿ ಪ್ರಯಾಣದ ವೇಳೆ ವ್ಯವಹಾರದ ಬಗ್ಗೆ ಈಕೆ ಕುಟುಂಬದವರೊಂದಿಗೆ ಸಾಕಷ್ಟು ಚರ್ಚೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ರಿಕ್ಷಾ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಜೊತೆಗೆ ಗ್ಯಾಸ್ ಏಜೆನ್ಸಿಯವನೊಬ್ಬ ಈಕೆಗೆ ಕರೆ ಮಾಡಿ ಮಾತನಾಡಿದ್ದ. ಆತನ ವಿಚಾರಣೆಯೂ ನಡೆಯಲಿದೆ. ಕೇವಲ ಬ್ಯಾಂಕ್ ವ್ಯವಹಾರದ ಉದ್ದೇಶದಿಂದ ಬಂದಿದ್ದರೇ ಅಥವಾ ಈ ವೇಳೆ ಬೇರೆ ಯಾರನ್ನಾದರೂ ಭೇಟಿಯಾಗಿದ್ದರೆ ಅನ್ನೋ ಸಂಶಯವೂ ಇದೆ.

ತನಿಖೆಗೆ ನಾಲ್ಕು ತಂಡ ರಚಿಸಲಾಗಿದೆ. ಚಿನ್ನಾಭರಣ ದರೋಡೆ ಮಾತ್ರವಲ್ಲದೆ, ಇತರ ಕಾರಣಗಳ ಬಗೆಗೂ ವಿಚಾರಣೆ ನಡೆಯುತ್ತಿದೆ. ಎಲ್ಲಾ ಸರಿಯಾಗಿದ್ದರೆ ಇಂದು ಮಗಳ ಹುಟ್ಟುಹಬ್ಬ ನಡೆಯಬೇಕಿತ್ತು. ಸಾಯುವ ಕೆಲವೇ ಗಂಟೆಗಳ ಮೊದಲು ಗಂಡನಿಗೆ ಮೆಸೇಜ್ ಮಾಡಿ ಮಗಳ ಹೆಸರಲ್ಲಿ ಕೇಕ್ ಬುಕ್ ಮಾಡಿರೋದಾಗಿಯೂ ವಿಶಾಲ ಹೇಳಿದ್ರು. ಕೇಕ್ ಕಟ್ ಮಾಡುವ ಹೊತ್ತಲ್ಲಿ ಈಕೆಯ ಪೋಸ್ಟ್ ಮರ್ಟಂ ನಡೆಯುತ್ತಿದೆ. ದುಬೈ ನಲ್ಲಿ ಸುಖವಾಗಿದ್ದ ಮಹಿಳೆ, ಸಾಯೋದಕ್ಕಂತಲೇ ತವರಿಗೆ ಬರುವಂತಾದದ್ದು ದುರಂತವೇ ಸರಿ.


ವರದಿ:®®

ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…

42 minutes ago

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ!

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…

10 hours ago

ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ

ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ Three people were arrested…

23 hours ago

ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ

ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ Farmer from Thirthahalli…

23 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪ್ರದೋಷ್‌ಗೆ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್‌ ಅಸ್ತು

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪ್ರದೋಷ್‌ಗೆ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್‌ ಅಸ್ತು Renukaswamy murder case takes…

23 hours ago

ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ KSRTC ಬಸ್‌ನ ಟೈರ್; ತಪ್ಪಿದ ಭಾರಿ ಅನಾಹುತ

ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ KSRTC ಬಸ್‌ನ ಟೈರ್; ತಪ್ಪಿದ ಭಾರಿ ಅನಾಹುತ KSRTC bus travelling from Udupi to…

23 hours ago