ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಗಾಜಿನಗೋಡು ಗ್ರಾಮದ ನಿವಾಸಿ, ಹೊಸನಗರ ತಾಲೂಕು ಗಂಗಾಮತಸ್ಥ ಸಂಘದ ಮಾಜಿ ನಿರ್ದೇಶಕ ಕೊಲ್ಲಪ್ಪ ಇವರು ಕೂಲಿ ಕೆಲಸಕ್ಕೆಂದು ಮೂರು ದಿನಗಳ ಹಿಂದೆ ಹೋದವರು ಇಂದು ಗಾಜಿನಗೋಡು ಸಮೀಪ ಕುಮದ್ವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಕಳೆದ ಮೂರು ನಾಲ್ಕು ದಿನದಿಂದ ಬರುತ್ತಿರುವ ಅತಿಯಾದ ಮಳೆಗೆ ಕುಮದ್ವತಿ ನದಿ ಹರಿಯುತ್ತಿದ್ದು ಕಾಲುಜಾರಿ ಬಿದ್ದಿರಬಹುದೆಂದು ಊಹಿಸಲಾಗಿದೆ. ಗಾಜಿನ ಗೋಡು ಮತ್ತು ಹಾರಂಬಳ್ಳಿ ಮಧ್ಯೆ ಹರಿಯುತ್ತಿರುವ ನದಿ ಇದಾಗಿದ್ದು ಕೂಲಿಯೂ ಸೇರಿದಂತೆ ಬೇರೆ ಬೇರೆ ಕೆಲಸ ಕಾರ್ಯಗಳಿಗಾಗಿ ಜನರು ನದಿಯ ಆಸುಪಾಸಿನ ಗ್ರಾಮಗಳಿಗೆ ತಿರುಗಾಡುವುದು ಸರ್ವೇಸಾಮಾನ್ಯವಾದ ಸಂಗತಿಯಾಗಿದ್ದು. ಆದರೆ ಮೂರು ದಿನದ ಹಿಂದೆ ಕೂಲಿ ಕೆಲಸಕ್ಕೆಂದು ಹೋದವರು ಮನೆಗೆ ಬಾರದೆ ಇದ್ದ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದಾಗ ಶವ ಪತ್ತೆಯಾಗಿದೆ. ಮೃತರು ಪತ್ನಿ ಓರ್ವ ಸಾಕು ಮಗಳನ್ನು ಹೊಂದಿದ್ದಾರೆ.
ರಿಪ್ಪನ್ ಪೇಟೆ ಪೊಲೀಸ್ ಠಾಣೆ ಎಎಸ್ಐ ಗಣಪತಿಯವರ ನೇತೃತ್ವದಲ್ಲಿ ಶವಪರೀಕ್ಷೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್