Headlines

ನಿಧನ ವಾರ್ತೆ: ಕೆರೆಹಳ್ಳಿ ಗ್ರಾಮದ ಕೃಷಿಕ ಅಶೋಕ್ ಇನ್ನಿಲ್ಲ

ರಿಪ್ಪನ್ ಪೇಟೆ : ಇಲ್ಲಿಯ ಕೆರೆಹಳ್ಳಿ ಗ್ರಾಮದ ನಿವಾಸಿ ಕೃಷಿಕ ಅಶೋಕ್ (39) ವರ್ಷ ಇವರು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ನೆನ್ನೆ ದಿನ ಹೃದಯಾಘಾತಕ್ಕೆ ಒಳಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲಿಸಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. 

ಇವರಿಗೆ ಪತ್ನಿ ಮತ್ತು ಇಬ್ಬರು ಪುತ್ರಿಯರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಟಿ.ಸುಂದರೇಶ್ ಸೇರಿದಂತೆ ಐವರು ಸಹೋದರರು ಹಾಗೂ ಓರ್ವ ಸಹೋದರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. 

ಇವರ ನಿಧನಕ್ಕೆ ರಾಮೇಶ್ವರ ದೇವಸ್ಥಾನದ ಕಾರ್ಯದರ್ಶಿ ಹಾಗೂ ಮರಾಠ ಸಮಾಜದ ಮುಖಂಡ ದೇವರಾಜ ಸಿಂಧೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

About The Author

Leave a Reply

Your email address will not be published. Required fields are marked *