ರಿಪ್ಪನ್ ಪೇಟೆ: ಇಂದು ಗವಟೂರು ಮೂರನೆ ವಾರ್ಡಿನ ಸದಸ್ಯರಾದ ಬಿ ಆಸಿಫ಼್ ನೇತ್ರತ್ವದಲ್ಲಿ ಗವಟೂರು ಗ್ರಾಮದ ಶ್ರೀರಾಮನಗರ,ನೆಹರು ಬಡಾವಣೆ ಮತ್ತು ಮಸೀದಿ ಕಾಲೋನಿಯ ಸುಮಾರು 200 ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸುವ ಮೂಲಕ ಕೋವಿಡ್ ನಿಂದ ಕಂಗೆಟ್ಟಿದ್ದ ಕುಟುಂಬಗಳಿಗೆ ಧೈರ್ಯ ತುಂಬಿದರು.
ರಿಪ್ಪನ್ ಪೇಟೆ ಗ್ರಾಮಪಂಚಾಯಿತ್ ವತಿಯಿಂದ ಒಂದು ವಾರ್ಡ್ ಗೆ 70 ಕಿಟ್ ಗಳನ್ನು ನೀಡಿದ್ದರೂ ಎಲ್ಲಾ ಸಂತ್ರಸ್ತರಿಗೆ ಕಿಟ್ ತಲುಪಿಸಲು ಸಾಧ್ಯವಾಗದೇ ಇದ್ದದನ್ನು ಮನಗಂಡ ಗವಟೂರು ಮೂರನೇ ವಾರ್ಡಿನ ಸದಸ್ಯರಾದ ಬಿ ಆಸಿಫ಼್ ವೈಯಕ್ತಿಕ ಹಾಗೂ ಸ್ನೇಹಿತರ ಸಹಕಾರದೊಂದಿಗೆ ಸುಮಾರು 200 ಹೆಚ್ಚುವರಿ ಕಿಟ್ ಗಳನ್ನು ಎಲ್ಲಾ ವರ್ಗದ ಸಂತ್ರಸ್ತ ಕುಟುಂಬಗಳಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಸಂಧರ್ಭದಲ್ಲಿ ಮಾತನಾಡಿದ ಆಸಿಫ಼್ ಈ ಒಂದು ಸಂಕಷ್ಟದ ಸಮಯದಲ್ಲಿ ಪರಸ್ಪರ ಒಬ್ಬರು ಇನ್ನೊಬ್ಬರಿಗೆ ಸಹಾಯ ಮಾಡುವುದರಿಂದ ನೊಂದ ಕುಟುಂಬಗಳಲ್ಲಿ ಧೈರ್ಯ ಹೆಚ್ಚುತ್ತದೆ.ನೊಂದ ಕುಟುಂಬಗಳ ಜೊತೆ ಕಷ್ಟ ಸುಖಗಳಲ್ಲಿ,ಎಲ್ಲಾ ಸಂಧರ್ಭಗಳಲ್ಲಿ ಜೊತೆ ಇರುತ್ತೇನೆ ಎಂದೂ ಭರವಸೆ ನೀಡಿದರು.
ಕಿಟ್ ಪಡೆದ ಸಂತ್ರಸ್ತರು ಆಸೀಫ಼್ ರವರ ಭರವಸೆಯ ನುಡಿಗಳಿಗೆ ಮೆಚ್ಚಿ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.
ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ವೇದಾವತಿ ಪರಮೇಶ್,ಸಾರಾಭಿ ಹೈದರ್ ಮತ್ತು ಪ್ರಕಾಶ್ ಪಾಲೇಕರ್ ಉಪಸ್ತಿತರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್