ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು : ಮಳಲಿಮಠ ಶ್ರೀಗಳು

ರಿಪ್ಪನ್ ಪೇಟೆ : ಜಗತ್ತನ್ನೇ ತಲ್ಲಣಗೊಳಿಸಿರುವ ಕೊರೋನಾದ ನಡುವೆ ಪ್ರತಿಯೊಬ್ಬರೂ ಆರೋಗ್ಯವನ್ನು ಕಾಪಾಡುವ ಮೂಲಕ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕೆಂದು ಮಳಲಿ ಮಠದ ಡಾ.ಗುರು ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

ತೀರ್ಥಹಳ್ಳಿ ತಾಲೂಕಿನ ಅರಳಿಸುರಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎರಡನೆಯ ಹಂತದ ಕರೋನ ಲಸಿಕೆಯನ್ನು ಪಡೆದುಕೊಂಡು ಮಾಧ್ಯಮದವರಿಗೆ ಮಾತನಾಡಿದ ಅವರು ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಕೊರೋನಾ ಸೇರಿದಂತೆ ಇನ್ನಿತರ ಯಾವುದೇ ರೋಗಗಳು ಬರದಂತೆ ಮುಂಜಾಗ್ರತೆಯನ್ನು ವಹಿಸಬೇಕು. ಇಡೀ ಜಗತ್ತನ್ನೇ ತಲ್ಲಣಗೊಳಿಸಿದ ಕೊರೋನ ಒಂದನೇ ಮತ್ತು ಎರಡನೇ ಅಲೆಯು ಇಡೀ ಮಾನವ ಸಂಕುಲವನ್ನು ಸಂಕಷ್ಟಕ್ಕೀಡು ಮಾಡಿದೆ. ಇನ್ನು ಕೆಲವೇ ದಿನಗಳಲ್ಲಿ ಮೂರನೆಯದು ಅಪ್ಪಳಿಸಲಿದೆ ಎಂದು ಈಗಾಗಲೇ ತಜ್ಞರು ಶಿಫಾರಸು ಮಾಡಿದ್ದಾರೆ. ಆದ್ದರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಸಹ ಕೊರೊನಾ ಲಸಿಕೆ ಪಡೆಯುವುದರ ಮೂಲಕ ಸೋಂಕು ಹರಡದಂತೆ ಎಚ್ಚರಿಕೆ ವಹಿಸ ಬೇಕು.ಸರಕಾರ ನೀಡಿರುವ ಸಲಹೆ ಸೂಚನೆಗಳನ್ನು ತಪ್ಪದೇ ಪಾಲಿಸಬೇಕು. ಪ್ರತಿಯೊಬ್ಬರು ಆರೋಗ್ಯವೇ ಭಾಗ್ಯ ಎಂಬ ತತ್ವದಡಿಯಲ್ಲಿ  ಮುನ್ನಡೆದರೆ ಕೊರೊನಾ ಸೋಂಕಿನಿಂದ ಮುಕ್ತರಾಗಬಹುದು ಎಂದು ತಿಳಿಸಿದರು.


ವರದಿ: ಸಬಾಸ್ಟಿನ್ ಮ್ಯಾಥ್ಯೂಸ್‌
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ Ramesh H.B. has been appointed as the…

1 hour ago

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ Thousands of devotees participated in…

2 hours ago

ಹೊಸನಗರ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ನೂತನ ಪಿಎಸ್‌ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕಾರ

ಹೊಸನಗರ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ನೂತನ ಪಿಎಸ್‌ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕಾರ Hosanagara PSI…

4 hours ago

ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ – 9ನೇ ತರಗತಿ ವಿದ್ಯಾರ್ಥಿನಿ ಸಾವು

ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ - 9ನೇ ತರಗತಿ ವಿದ್ಯಾರ್ಥಿನಿ ಸಾವು A tragic incident…

5 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ನಿಯಮ ಉಲ್ಲಂಘನೆ; ಶಿವಮೊಗ್ಗದಲ್ಲಿ ಒಟ್ಟು 5 ಪ್ರಕರಣ ದಾಖಲು

ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ನಿಯಮ ಉಲ್ಲಂಘನೆ; ಶಿವಮೊಗ್ಗದಲ್ಲಿ ಒಟ್ಟು 5 ಪ್ರಕರಣ ದಾಖಲು Shivamogga police have registered…

5 hours ago

ಶಿವಮೊಗ್ಗದಲ್ಲಿ ತಡರಾತ್ರಿ ಕಿಡಿಗೇಡಿಗಳ ಕೃತ್ಯ: ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಬೆಂಕಿ

ಶಿವಮೊಗ್ಗದಲ್ಲಿ ತಡರಾತ್ರಿ ಕಿಡಿಗೇಡಿಗಳ ಕೃತ್ಯ: ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಬೆಂಕಿ Miscreants allegedly set two parked bikes on…

5 hours ago