Categories: Blog

ಬಿಜೆಪಿ ಸರಕಾರದ ಭ್ರಷ್ಟಾಚಾರದ ವಿರುದ್ದ ತೀವ್ರ ಪ್ರತಿಭಟನೆ:ಹೆಚ್ ಎಸ್ ಸುಂದರೇಶ್

ಶಿವಮೊಗ್ಗ: ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಇದಕ್ಕೆ ಲಗಾಮ ಹಾಕುವವರೇ ಇಲ್ಲವಾಗಿದೆ. ಇದರ ವಿರುದ್ಧ ಕಾಂಗ್ರೆಸ್ ತನ್ನ ಪ್ರತಿಭಟನೆಯನ್ನು ತೀವ್ರಗೊಳಿಸಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಯಿಂದ ಹಿಡಿದು ಪಕ್ಷದ ಸಾಮಾನ್ಯ ಕಾರ್ಯಕರ್ತನವರೆಗೂ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಯಾವುದೇ ಹೊಸ ಯೋಜನೆಗಳು ಬಂದರೂ ಕೂಡಾ ಕಿಕ್‍ಬ್ಯಾಕ್ ಸಿದ್ಧವಾಗಿಯೇ ಇರುತ್ತದೆ. ಶೇ.20ರಷ್ಟು ಗುಣಮಟ್ಟದ ಕೆಲಸವನ್ನು ಮಾಡುತ್ತಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಬೇಕಾಬಿಟ್ಟಿ ಕೆಲಸಗಳು ನಡೆಯುತ್ತಿದೆ. ಕಳಪೆ ರಸ್ತೆಯಿಂದ ಹಿಡಿದು ವಿಮಾನ ನಿಲ್ದಾಣದವರೆಗೆ ಕಮಿಷನ್ ದಂಧೆ ನಡೆಯುತ್ತಲೇ ಇದೆ. ಇವರಿಗೆ ಹೇಳುವವರು ಕೇಳುವವರಾರೂ ಇಲ್ಲ.ಅಧಿಕಾರದ ದರ್ಪದಲ್ಲಿ ಮನಸ್ಸಿಗೆ ಬಂದಂತೆ ನಡೆಯುತ್ತಿದ್ದಾರೆ ಎಂದು ಆರೋಪಿಸಿದರು.

ಸಚಿವ ಈಶ್ವರಪ್ಪ ಸೇರಿದಂತೆ ಅಭಿವೃದ್ಧಿ ಹಾಗೂ ಜನಸಾಮಾನ್ಯರ ಕಷ್ಟದ ಕಡೆ ಕೆಲಸ ಮಾಡುವುದು ಬಿಟ್ಟು ಚುನಾವಣೆಯಲ್ಲಿ ಹೇಗೆ ಗೆಲ್ಲಬೇಕು, ಗೆದ್ದ ಇತರೆ ಪಕ್ಷದವರನ್ನು ಹೇಗೆ ತಮ್ಮತ್ತ ಆಪರೇಷನ್ ಕಮಲದ ಮೂಲಕ ಸೆಳೆದುಕೊಳ್ಳಬೇಕು ಎಂದು ಚಿಂತಿಸುತ್ತಲೇ ಇರುತ್ತಾರೆ. ಇದರ ಜತೆಗೆ ಈಗ ಪಕ್ಷದೊಳಗೆ ಉದ್ಭವಿಸಿರುವ ಭಿನ್ನಾಭಿಪ್ರಾಯಗಳಿಗೆ ತೇಪೆ ಹಚ್ಚುವುದರಲ್ಲೇ ತೊಡಗಿ ಅಭಿವೃದ್ಧಿಯನ್ನೇ ಕಡೆಗಣಿಸಿದ್ದಾರೆಂದು ಟೀಕಿಸಿದರು.

ಕರೋನ ತಡೆಯುವಲ್ಲಿ ವಿಫಲರಾದರೂ ಡೊನೇಷನ್ ಹಾವಳಿ ತಪ್ಪಿಸಲಿಲ್ಲ. ಶಿವಮೊಗ್ಗದಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿಗಳು ಕಳಪೆಯಾದರೂ ಅಲ್ಲೂ ಕೂಡಾ ಭಾರೀ ಭ್ರಷ್ಟಾಚಾರ ನಡೆದಿದ್ದರೂ ಸಚಿವರು ಚಕಾರವೆತ್ತುತ್ತಿಲ್ಲ. ವಿಮಾನ ನಿಲ್ದಾಣಕ್ಕೆ ಬಿಜೆಪಿ ಚಿಹ್ನೆಯ ಕಮಲವನ್ನು ನೀಲಿ ನಕ್ಷೆಯಲ್ಲಿಟ್ಟರೂ ಸ್ವಾರ್ಥ ರಾಜಕಾರಣವೇ
ತುಂಬಿ ಹೋಗಿದೆ. ಬಡವರು ಬದುಕುವುದೇ ಕಷ್ಟವಾಗಿದೆ. ನೆರೆ ಪರಿಹಾರ ಇನ್ನೂ ಅರ್ಹರಿಗೆ ದೊರಕಿಲ್ಲ. ಕಾರ್ಮಿಕರಿಗೆ ಕಿಟ್ ವ್ಯವಸ್ಥಿತವಾಗಿ ಹಂಚುತ್ತಿಲ್ಲ. ಕಾರ್ಮಿಕರ ಕಾರ್ಡ್ ಕೂಡಾ ನವೀಕರಣ ಮಾಡಿಕೊಟ್ಟಿಲ್ಲ ಎಂದು ದೂರುಗಳ ಮಳೆಗರೆದರು.

ಕಾಂಗ್ರೆಸ್ ಒಂದು ತಾತ್ವಿಕ ಹೋರಾಟ ಹಮ್ಮಿಕೊಂಡಿದೆ. ನಾವು ಪ್ರತಿಭಟನೆ ಮಾಡಬಹುದಷ್ಟೇ. ಸರ್ಕಾರ ಆಡಳಿತ, ಅಧಿಕಾರ ಎಲ್ಲವೂ ಅವರ ಕೈಯಲ್ಲೇ ಇರುವಾಗ ಹಲವು ಸಂದರ್ಭಗಳಲ್ಲಿ ನಮ್ಮ ಹೋರಾಟಕ್ಕೆ ಹಿನ್ನಡೆಯಾಗಬಹುದು. ಹಾಗೆಂದು ನಾವು ಸುಮ್ಮನಿರುವುದಿಲ್ಲ ಎಂದರು.

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಪಾಲಿಕೆ ವಿಪಕ್ಷ ನಾಯಕಿ ಯಮುನಾ ರಂಗೇಗೌಡ, ಸದಸ್ಯರಾದ ಎಚ್.ಸಿ.ಯೋಗೇಶ್,ಮೇಹಕ್ ಷರೀಫ್, ಪ್ರಮುಖರಾದ ಸಿ.ಎಸ್.ಚಂದ್ರಭೂಪಾಲ, ವಿಶ್ವನಾಥ್ ಕಾಶಿ,ನಾಗರಾಜ್, ಚಂದನ್ ಎಂ. ಎನ್.ಡಿ.ಪ್ರವೀಣ್ ಸೇರಿದಂತೆ ಹಲವರಿದ್ದರು.

ವರದಿ: ರಾಮ ನಾಥ್



ಪೋಸ್ಟ್ ಮ್ಯಾನ್ ನ್ಯೂಸ್ ನ ಕಳಕಳಿ:
ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹರಡದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ A truck carrying…

7 hours ago

ತಂದೆ–ಮಗನ ಜಗಳ ಕೊಲೆಯಲ್ಲಿ ಅಂತ್ಯ; ಮೃತದೇಹ ಬಾವಿಗೆ ಎಸೆದ ಆರೋಪ

ಸಾಗರ: ಜೈಲಿನಿಂದ ಬಿಡುಗಡೆಯಾದ ತಂದೆಯನ್ನೇ ಮಗ ಕೊಲೆ ಮಾಡಿದ ಆರೋಪ; ಮೃತದೇಹ ಬಾವಿಗೆ ಎಸೆದು ಮುಚ್ಚಿಟ್ಟ ಶಂಕೆ A man…

9 hours ago

ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ – ಇಲ್ಲಿದೆ ಸಂಪೂರ್ಣ ವಿವರ!

ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ - ಇಲ್ಲಿದೆ…

1 day ago

ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಹೆದ್ದಾರಿಪುರ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ Villagers protest by planting…

1 day ago

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ A container lorry lost control and collided…

1 day ago

ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ

ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ Karnataka government bans manufacture, storage, transport,…

1 day ago