ರಿಪ್ಪನ್ ಪೇಟೆ :ಇಲ್ಲಿನ ನಾಡಕಛೇರಿ ರೈತಸ್ನೇಹಿಯಾಗಿರದೇ ಸುಲಿಗೆಕೋರರ ತಾಣವಾಗಿದೆ ಎಂದು ರಿಪ್ಪನ್ ಪೇಟೆಯ ಗ್ರಾಮಸ್ಥರು ಪಟ್ಟಣದ ನಾಡಕಛೇರಿ ಎದುರು ಇಂದು ಪ್ರತಿಭಟನೆ ನಡೆಸಿದರು.
ಗವಟೂರು ಗ್ರಾಮದ ಸರ್ವೇ ನಂಬರ್ 413 ರ 11ಈ ನಕ್ಷೆ ನಾವಿಕರಣ ಕ್ಕೆ 30000 ಸಾವಿರ ರೂಪಾಯಿಗಳನ್ನು ಲಂಚ ತೆಗೆದುಕೊಂಡ ಸರ್ವೆ ಸುಪ್ರವೈಸರ್ ಅಧಿಕಾರಿ ಮಲ್ಲಿಕಾರ್ಜುನ್ ನವೀಕರಣ ಮಾಡದೇ ಮೋಸ ಮಾಡಿದ್ದಾರೆ ಎಂದು ರೈತ ಈಶ್ವರಪ್ಪ ಆರೋಪಿಸಿದ್ದಾರೆ.
ನಾಡಕಛೇರಿ ಮುಂದೆ ಪ್ರತಿಭಟನೆ ನಡೆಸಿ ಮಾತನಾಡಿದ ಜೆಡಿಎಸ್ ಮುಖಂಡ ಆರ್ ಎನ್ ಮಂಜುನಾಥ್ ರಿಪ್ಪನ್ ಪೇಟೆ ನಾಡ ಕಚೇರಿ ರೈತರ ಸ್ನೇಹಿ ಯಾಗಿಲ್ಲ ಸುಲಿಗೆಕೋರಾರಾಗಿದ್ದಾರೆ ಬಡವರ ರಕ್ತ ಹೀರುವ ಇಂತಹ ಅಧಿಕಾರಿ ಗಳನ್ನು ಈ ಕೂಡಲೇ ಅಮಾನಾತು ಮಾಡಬೇಕೆಂದು ಒತ್ತಾಯಿಸಿದರು ಹಾಗೂ ರೈತರ ಕೆಲಸ ಗಳಿಗೆ ಅಧಿಕಾರಿಗಳು ತುರ್ತು ಸ್ಪಂದನೆ ಮಾಡಬೇಕೆಂದು ಹೇಳಿದರು..
ಸರ್ವೆ ಇಲಾಖೆ ಭ್ರಷ್ಟಾಚಾರದಿಂದ ಕೂಡಿದ್ದು ರೈತರ ಯಾವ ಕೆಲಸವೂ ಲಂಚವಿಲ್ಲದೆ ನಡೆಯುವುದಿಲ್ಲ ಸಾಮಾನ್ಯರ ಸ್ಥಿತಿ ಶೋಚನೀಯವಾಗಿದೆ, ರೈತರ ಅರ್ಜಿ ಕಸದಬುಟ್ಟಿ ಸೇರುತ್ತಿದೆ ಸರ್ವೆ ಅಧಿಕಾರಿಗಳು ಲಂಚವಿಲ್ಲದೆ ರೈತರ ಸಮಸ್ಯೆಯನ್ನು ಬಗೆಹರಿಸುವುದಿಲ್ಲ ಎಂದು ಗ್ರಾಮ ಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಆರೋಪಿಸಿದ್ದಾರೆ.
ಭ್ರಷ್ಟ ಸರ್ವೆ ಅಧಿಕಾರಿ ಮಲ್ಲಿಕಾರ್ಜುನ ರನ್ನು ಕೂಡಲೇ ಅಮಾನತು ಮಾಡಬೇಕು ಎಂದು ತಹಸೀಲ್ದಾರರಿಗೆ ಪ್ರತಿಭಟನಾಕಾರರು ಮನವಿ ಮಾಡಿದರು.
ಈ ಸಂಧರ್ಭದಲ್ಲಿ ಜಂಬಳ್ಳಿ ಗಿರೀಶ್ ಹಾಗೂ ಅನೇಕ ರೈತರು ಉಪಸ್ಥಿತರಿದ್ದರು.
ವರದಿ: ರಾಮನಾಥ್
ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್