Categories: Blog

ಮುಖ್ಯಮಂತ್ರಿಗಳಿಂದ ಸಾಗರ ತಾಲ್ಲೂಕಿನಲ್ಲಿ 459.19 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ

ಸಾಗರ:ತಾಲ್ಲೂಕಿನ ಹಲವು ಕಾಮಗಾರಿಗಳಿಗೆ ವರ್ಚ್ಯುಯಲ್ ಹೋಸ್ಟಿಂಗ್ ಮೂಲಕ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ರವರು ಚಾಲನೆ ನೀಡಿದರು.
ಅವರು ಇಲ್ಲಿನ ಗಾಂಧಿಮಂದಿರದ ಹೊರಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವರ್ಚ್ಯುಯಲ್ ಹೋಸ್ಟಿಂಗ್ ಮೂಲಕ ಈ ಕೆಳಗಿನ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಇರುವಕ್ಕಿ ಕೃಷಿ ವಿಶ್ವ ವಿದ್ಯಾಲಯ 155-00 ಕೋಟಿ ರೂಪಾಯಿಗಳು, ಜೋಗ ಅಭಿವೃದ್ಧಿ ಕಾಮಗಾರಿಗಳಿಗೆ 165-00ಕೋಟಿ, ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 206 (69) ತುಮಕೂರು ಹೊನ್ನಾವರ ರಸ್ತೆಯ ಕಿ.ಮೀ. 278 ರಿಂದ 286.40ರವರೆಗೆ ಸಾಗರ ನಗರ ವ್ಯಾಪ್ತಿಯಲ್ಲಿ 4ಪಥದ ರಸ್ತೆ ನಿರ್ಮಾಣ ಕಾಮಗಾರಿಗೆ 77.19ಕೋಟಿ.

ಶಿವಮೊಗ್ಗ ಜಿಲ್ಲೆಯ ಸಾಗರ ನಗರ ವ್ಯಾಪ್ತಿಯ ಹಾವೇರಿ-ಸಾಗರ (ರಾಜ್ಯ ಹೆದ್ದಾರಿ-62) ರಸ್ತೆ, ಸರಪಳಿ 108.95 km ರಿಂದ 109kmವರೆಗಿನ ರಸ್ತೆಯ ಭೂಸ್ವಾದೀನ ಮತ್ತು ಅಗಲೀಕರಣ ಕಾಮಗಾರಿಗೆ 60-00 ಕೋಟಿ ರೂ.

ಸಾಗರ ತಾಲ್ಲೂಕಿನ ರಾಜ್ಯ ಸರಕಾರಿ ನೌಕರರ ಸಂಘದ ನೂತನ ಸಮುದಾಯ ಭವನ ಶಂಕುಸ್ಥಾಪನೆ 1.50ಕೋಟಿ ರೂಪಾಯಿಗಳು.

ಶಿವಮೊಗ್ಗ ಜಿಲ್ಲೆಯ ಸಾಗರ ನಗರದ  ನಗರಸಭೆಯ ಗಾಂಧಿಮೈದಾನದ ಸಾಂಸ್ಕೃತಿಕ ಚಟುವಟಿಕೆಗಳಿಗೆ ಸಾರ್ವಜನಿಕ ಸಭಾಭವನ ನಿರ್ಮಾಣ ಕಾಮಗಾರಿ 50-00ಲಕ್ಷ ರೂಪಾಯಿಗಳ ಕಾಮಗಾರಿಗೆ ಚಾಲನೆ ನೀಡಿದರು.

ಈ ಸಂಧರ್ಭದಲ್ಲಿ ಪಟಗುಪ್ಪ ಸೇತುವೆಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಸಂಸದ ಬಿ.ವೈ. ರಾಘವೇಂದ್ರ  ಪ್ರಾಸ್ತಾವಿಕ ಭಾಷಣ ಮಾಡಿದರು. ಜಿಲ್ಲಾದಿಕಾರಿಗಳಾದ ಶಿವಕುಮಾರ್ ಎಲ್ಲರನ್ನು ಸ್ವಾಗತಿಸಿದರು.
ಈ ಸಂಧರ್ಭದಲ್ಲಿ 17 ನಿಮಿಷದ ಶಿವಮೊಗ್ಗ ಅಭಿವೃದ್ಧಿಯ ಕಿರುಚಿತ್ರ ತೋರಿಸಲಾಯಿತು.

ಇದರಲ್ಲಿ ಜೋಗ ಅಭಿವೃದ್ಧಿ 165ಕೋಟಿ, ವಿಮಾನ ನಿಲ್ದಾಣ 384ಕೋಟಿ, ಕೆರೆಗಳಿಗೆ ನೀರು ತುಂಬಿಸುವ ಯೋಜನೆ 850ಕೋಟಿ,   ಶಿವಮೊಗ್ಗದಲ್ಲಿ ನಾಲ್ಕು ರೈಲ್ವೆ ಮೇಲ್ಸೇತುವೆ ನಿರ್ಮಾಣ 43.93ಕೋಟಿ, ಸವಳಂಗ, ಕಾಶೀಪುರ, ಭದ್ರಾವತಿಯಲ್ಲಿ ಮೇಲ್ಸೇತುವೆಗೆ 89ಕೋಟಿ, ಸರಕಾರಿ ನೌಕರರ ಭವನಗಳಿಗೆ 6ಕೋಟಿ, ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ವಿವಿಗಳಿಗೆ 156ಕೋಟಿ, ಫ್ರೀಡಂ ಪಾರ್ಕ್ 5.35ಕೋಟಿ, ಬಸವೇಶ್ವರರ ಪುತ್ಥಳಿಗೆ 32ಲಕ್ಷ, ರೈಲ್ವೆ ರಿಂಗ್ ರೋಡ್ ಗೆ 20ಕೋಟಿ, ಮೆಸ್ಕಾಂ‌ಗೆ ನೂತನ ಕಟ್ಟಡಗಳು 9ಕೋಟಿ, ಸೂಡಾ ವಸತಿ ಬಡಾವಣೆ, ಸಕ್ರೆಬೈಲಿನಲ್ಲಿ ಆನೆ ಬಿಡಾರ 20ಕೋಟಿ, ಸಿಗಂದೂರು ಸೇತುವೆ 423ಕೋಟಿ, ತೀರ್ಥಹಳ್ಳಿ‌ ರಸ್ತೆಗೆ 55 ಕೋಟಿ ಅನುದಾನ ನೀಡಿರುವ ಬಗ್ಗೆ ಮಾಹಿತಿ ನೀಡಲಾಯಿತು.

ವೇದಿಕೆಯಲ್ಲಿ  ಸಾಗರ ಶಾಸಕರು ಹಾಗೂ MSIL ಅಧ್ಯಕ್ಷರಾದ ಹೆಚ್. ಹಾಲಪ್ಪ ಹರತಾಳು, ನಗರಸಭಾ ಅಧ್ಯಕ್ಷೆ ಮಧುರಾ ಶಿವಾನಂದ್,ಉಪಾಧ್ಯಕ್ಷರಾದ ವಿ. ಮಹೇಶ್, ಸ್ಥಾಯಿ ‌ಸಮಿತಿ‌ ಅಧ್ಯಕ್ಷ ಡಿ. ತುಕಾರಾಮ, ಉ ಮಾಜಿ ನಗರಸಭಾ ಅಧ್ಯಕ್ಷೆ ಎನ್. ಲಲಿತಮ್ಮ,  ಎಪಿಎಂಸಿ‌ ಅಧ್ಯಕ್ಷರಾದ ಚೇತನ್’ರಾಜ್ ಕಣ್ಣೂರು, ನೌಕರರ ಸಂಘದ ಅಧ್ಯಕ್ಷ ಜಿ. ಪರಮೇಶ್ವರ್, ಆಶ್ರಯ ಸಮಿತಿ‌ ಸದಸ್ಯರಾದ ರಾಮಣ್ಣ, ಎಸ್.ಎಂ.‌ಭಾಷಾ, ಗೀತಾ ಅಶೋಕ್, ಕಾರ್ಗಲ್-ಜೋಗ   ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಾಸಂತಿ ರಮೇಶ್, ಸದಸ್ಯರಾದ ಟಿ.ಡಿ. ಮೇಘರಾಜ್, ಬಿಜೆಪಿ ತಾಲ್ಲೂಕು ಮಂಡಲ ಅಧ್ಯಕ್ಷ ಲೋಕನಾಥ ಬಿಳಿಸಿರಿ, ನಗರ ಮಂಡಲ ಅಧ್ಯಕ್ಷ – ಕೌನ್ಸಿಲರ್ ಗಣೇಶ್ ಪ್ರಸಾದ್, ಲಿಂಗರಾಜ್,ತಹಶಿಲ್ದಾರರಾದ ಚಂದ್ರಶೇಖರನಾಯ್ಕ್, ಪೌರಾಯುಕ್ತ ಹೆಚ್.ಕೆ. ನಾಗಪ್ಪ, ಪುರುಷೋತ್ತಮ ಬಿ., ರಾಜೇಂದ್ರ ಪೈ ಹಾರಾಡಿ, ದೀಪಕ್ ಮರೂರಸಾಗರ   ಸಂತೋಷ್  ಶೇಟ್, ಶ್ರೀರಾಮ, ಪ್ರೇಮಾ ಕಿರಣ್ ಸಿಂಗ್, ಮೈತ್ರಿ ಪಾಟೀಲ್,ಹಾಗೂ ಎಲ್ಲಾ ನಗರಸಭಾ ಸದಸ್ಯರು ಮತ್ತು ಜನಪ್ರತಿನಿಧಿಗಳು  ಹಾಜರಿದ್ದರು.


ವರದಿ: ಪವನ್ ಕುಮಾರ್ ಕಠಾರೆ
    ಪೋ:9632820256


ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ – ಇಲ್ಲಿದೆ ಸಂಪೂರ್ಣ ವಿವರ!

ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ - ಇಲ್ಲಿದೆ…

2 hours ago

ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಹೆದ್ದಾರಿಪುರ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ Villagers protest by planting…

2 hours ago

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ A container lorry lost control and collided…

5 hours ago

ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ

ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ Karnataka government bans manufacture, storage, transport,…

5 hours ago

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…

1 day ago

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ!

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…

2 days ago