ರಿಪ್ಪನ್ ಪೇಟೆ: ಜಿಲ್ಲಾ ಪಂಚಾಯತ್ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅಭಿಮಾನಿಗಳ ಬಳಗದಿಂದ ರಿಪ್ಪನ್ ಪೇಟೆಯ ಅಮೀರ್ ಹಂಜಾ ರವರು ಕಣಕ್ಕಿಳಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ.
ಜಿಲ್ಲಾ ಪಂಚಾಯತ್ ಮೀಸಲಾತಿ ಘೋಷಣೆಯಾಗಿ ರಿಪ್ಪನ್ ಪೇಟೆ ಕ್ಷೇತ್ರದಲ್ಲಿ ಸಾಮಾನ್ಯ ಕೆಟಗೆರಿ ಬಂದಿದ್ದು ಕಾಂಗ್ರೆಸ್ ಹಾಗೂ ಬಿಜೆಪಿ ಯಲ್ಲಿ ಈಗಾಗಲೇ ಟಿಕೆಟ್ ಫ಼ೈಟ್ ನಡೆಯುತ್ತಿದೆ ಈ ನಡುವೆ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅಭಿಮಾನಿ ಬಳಗದಿಂದ ಬಂಗಾರಪ್ಪ ರವರ ಒಡನಾಡಿ ಆಗಿದ್ದ ಅಮೀರ್ ಹಂಜಾರವರು ರಿಪ್ಪನ್ ಪೇಟೆ ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಸ್ಪರ್ಧೆಗೆ ಅಣಿಯಾಗಿದ್ದಾರೆ.
ಪ್ರಸ್ತುತ ಮಧು ಬಂಗಾರಪ್ಪ ನವರ ಬೆಂಬಲಿಗ ಮುಖಂಡರಲ್ಲಿ ಮುಂಚೂಣಿಯಲ್ಲಿರುವ ಅಮೀರ್ ಹಂಜಾ ಈ ಹಿಂದೆ ಶಿವಮೊಗ್ಗ ಜಿಲ್ಲಾ ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿಯಾಗಿದ್ದರು.
ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ದೂರವಾಣಿ ಮೂಲಕ ಅಮೀರ್ ಹಂಜಾ ರವರನ್ನು ಸಂಪರ್ಕಿಸಿದಾಗ ಸ್ಪರ್ದೆಯನ್ನು ಖಚಿತಪಡಿಸಿದ ಅವರು ಜಿಪಂ ಚುನಾವಣೆಯಲ್ಲಿ ರಿಪ್ಪನ್ ಪೇಟೆಯ ಮೂಲ ಅಭ್ಯರ್ಥಿಗಳಿಗೆ ಆದ್ಯತೆ ದೊರೆಯಬೇಕು ಆವಾಗ ಮಾತ್ರ ಕ್ಷೇತ್ರದ ಸಂಪೂರ್ಣ ಅಭಿವೃದ್ಧಿ ಸಾಧ್ಯ,ನನ್ನ ಕ್ಷೇತ್ರವಾದ ರಿಪ್ಪನ್ ಪೇಟೆಯ ಸಂಪೂರ್ಣ ಅಭಿವೃದ್ಧಿಯೇ ನನ್ನ ಗುರಿ ಈ ನಿಟ್ಟಿನಲ್ಲಿ ಸ್ಪರ್ಧೆ ಮಾಡುತ್ತಿದ್ದೇನೆ ಎಂದರು.
ರಿಪ್ಪನ್ ಪೇಟೆ ಜಿಪಂ ಕ್ಷೇತ್ರದಲ್ಲಿ ಎರಡನೇ ಅತಿಹೆಚ್ಚು ಮತ ಬುಟ್ಟಿ ಹೊಂದಿರುವ ಅಲ್ಪಸಂಖ್ಯಾತರಿರುವ ಕ್ಷೇತ್ರದಲ್ಲಿ ಹಾಗೂ ಎಸ್ ಬಂಗಾರಪ್ಪ ನವರ ಅತಿ ಹೆಚ್ಚು ಅಭಿಮಾನಿಗಳಿರುವ ಕ್ಷೇತ್ರದಲ್ಲಿ ನಾನು ಎಸ್ ಬಂಗಾರಪ್ಪ ಅಭಿಮಾನಿಗಳ ಬಳಗದಿಂದ ಸ್ಪರ್ಧೆಗೆ ಇಳಿದಿರುವುದರಿಂದ ಉಳಿದ ಪಕ್ಷಗಳ ಲೆಕ್ಕಚಾರ ತಲೆಕೆಳಗಾಗುವ ಸಾಧ್ಯತೆ ಇದೆ ಎಂದು ಈ ಸಂಧರ್ಭದಲ್ಲಿ ಹೇಳಿದರು.
ವರದಿ: ರಾಮನಾಥ್ ರಿಪ್ಪನ್ ಪೇಟೆ
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್