ರಿಪ್ಪನ್ ಪೇಟೆ: ಜಿಪಂ ತಾಪಂ ಮೀಸಲಾತಿ ಘೋಷಣೆಯಾಗಿ ಎಲ್ಲಾ ಪಕ್ಷಗಳಲ್ಲೂ ಟಿಕೆಟ್ ಗಾಗಿ ಜಿದ್ದಾಜಿದ್ದಿ ನಡೆಯುತ್ತಿದೆ.
ಸಾಮಾನ್ಯ ಕೆಟಗೆರಿ ಬಂದಿರುವ ರಿಪ್ಪನ್ ಪೇಟೆ ಜಿಪಂ ಕ್ಷೇತ್ರಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಟಿಕೆಟ್ ಗಾಗಿ ಗುಪ್ತ ಸಭೆಗಳು ಚುರುಕಾಗಿ ನಡೆಯುತ್ತಿದೆ.
ಜೆಡಿಎಸ್ ನಿಂದ ಯಾವುದೇ ಚಟುವಟಿಕೆ ಬಹಿರಂಗವಾಗಿ ನಡೆಯುತ್ತಿಲ್ಲವಾದರೂ ರಿಪ್ಪನ್ ಪೇಟೆಯ ಸಾಮಾಜಿಕ ಹೋರಾಟಗಾರ,ಜಿಲ್ಲಾ ಜೆಡಿಎಸ್ ಮುಖಂಡರು ಹಾಗೂ ಗ್ರಾಪಂ ಮಾಜಿ ಸದಸ್ಯರಾದ ಆರ್ ಎನ್ ಮಂಜುನಾಥ್ ಜೆಡಿಎಸ್ ನಿಂದ ಸ್ಪರ್ಧೆಗೆ ಬಯಸಿ ತಯಾರಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಪೋಸ್ಟ್ ಮ್ಯಾನ್ ನ್ಯೂಸ್ ಆರ್ ಎನ್ ಮಂಜುನಾಥ್ ರನ್ನು ಸಂಪರ್ಕಿಸಿದಾಗ ಸ್ಪರ್ದೆಯನ್ನು ಖಚಿತಪಡಿಸಿದ ಅವರು ಈ ಬಾರಿ ರಿಪ್ಪನ್ ಪೇಟೆ ಜಿಪಂ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸುವುದು ಖಚಿತ ಈ ನಿಟ್ಟಿನಲ್ಲಿ ಈಗಾಗಲೇ ರಾಜ್ಯ ಹಾಗೂ ಜಿಲ್ಲಾ ಜೆಡಿಎಸ್ ಮುಖಂಡರ ಬಳಿ ಮಾತುಕತೆ ನಡೆಸಿದ್ದೇನೆ ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ ಎಂದರು.
ರಿಪ್ಪನ್ ಪೇಟೆ ಜಿಪಂ ಚುನಾವಣೆಯಲ್ಲಿ ಇಷ್ಟು ವರ್ಷಗಳಿಂದ ಅನಿವಾಸಿ ಅಭ್ಯರ್ಥಿಗಳೇ ಅಯ್ಕೆಯಾಗಿದ್ದಾರೆ ಹಾಗೂ ಈ ಬಾರಿಯೂ ಸ್ಪರ್ಧೆಗೆ ತಯಾರಿ ನಡೆಸುತ್ತಿದ್ದಾರೆ. ಅವರಿಂದ ರಿಪ್ಪನ್ ಪೇಟೆಯ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ನಡೆಯುವುದು ಇಲ್ಲ ಕೊನೆ ಪಕ್ಷ ಅವರನ್ನೂ ಭೇಟಿಯಾಗಲೂ ಕೋಣಂದೂರು ಶಿವಮೊಗ್ಗ ದ ಕಡೆಗೆ ಹೋಗಬೇಕು ಇಂತಹ ಸನ್ನಿವೇಶಗಳಲ್ಲಿ ಊರಿನ ಅಭಿವೃದ್ಧಿ ಆಗಬೇಕಾದರೆ ರಿಪ್ಪನ್ ಪೇಟೆಯ ಮೂಲ ಅಭ್ಯರ್ಥಿಗಳಿಗೆ ಇಲ್ಲಿನ ಮತದಾರರು ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ರವರು ಎರಡು ಬಾರಿ ಮುಖ್ಯಮಂತ್ರಿಯಾಗಿ ನಡೆಸಿದ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಜನತೆಯ ಮುಂದಿಟ್ಟು ಈ ಬಾರಿ ಪ್ರಚಾರ ನಡೆಸುತ್ತೇನೆ.ಕಾಂಗ್ರೆಸ್ ಹಾಗೂ ಬಿಜೆಪಿಯ ಒಳ ಜಗಳದಿಂದ ಜೆಡಿಎಸ್ ಗೆ ಅನುಕೂಲವಾಗಲಿದೆ ಎಂದು ಈ ಸಂಧರ್ಭದಲ್ಲಿ ಹೇಳಿದರು.
ವರದಿ: ರಾಮನಾಥ್
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್