Categories: Blog

ರಿಪ್ಪನ್ ಪೇಟೆ: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಆಚರಣೆ

ರಿಪ್ಪನ್ ಪೇಟೆ. ಜು.21: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಇಂದು ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸಿದರು.

ಸರಕಾರದ ಹೊಸ ಮಾರ್ಗಸೂಚಿಯಂತೆ ರಿಪ್ಪನ್ ಪೇಟೆ ಹಾಗೂ ಕೆಂಚನಾಲ,ಗರ್ತಿಕೆರೆ,ಎಣ್ಣೆನೊಡ್ಲು,ಗಾಳಿಬೈಲು ಮಸೀದಿಗಳಲ್ಲಿ ಬಕ್ರೀದ್ ಹಬ್ಬ ಆಚರಿಸಲಾಯಿತು. ಆಯಾ ಮಸೀದಿಗಳಲ್ಲಿ ಸೇರುವ ಜನರ ಸಾಮಥ್ರ್ಯಕ್ಕೆ ಅನುಗುಣವಾಗಿ ಶೇ.50ನ್ನು ಮೀರದಂತೆ ಹಂತ ಹಂತವಾಗಿ ಸಾಮೂಹಿಕ ನಮಾಜ್ ನೆರವೇರಿತು.
ಮುಸ್ಲಿಂ ಭಾಂಧವರು ಜಗತ್ತಿನಲ್ಲಿ ವ್ಯಾಪಿಸಿರುವ ಕೊರೊನಾ ಮಹಮಾರಿ ಶೀಘ್ರ ರೋಗಮುಕ್ತವಾಗಬೇಕು,ಜಗತ್ತಿನಲ್ಲೆಡೆ ಶಾಂತಿ ಪಸರಿಸಬೇಕು ಎಲ್ಲರೂ ನೆಮ್ಮದಿಯಿಂದ ಬದುಕುವಂತಾಗಬೇಕು ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಮಾಸ್ಕ್ ಧಾರಣೆ ಕಡ್ಡಾಯವಾಗಿತ್ತು, 65 ವರ್ಷ ಪ್ರಾಯ ಮೇಲ್ಪಟ್ಟವರು ಮತ್ತು 10 ವರ್ಷಕ್ಕಿಂತ ಕೆಳಗಿನವರು ಮಸೀದಿಗೆ  ಪ್ರವೇಶವಿರಲಿಲ್ಲ,ಪರಸ್ಪರ ಆಲಿಂಗನವಿಲ್ಲದೆ ಶುಭಾಶಯ ವಿನಿಮಯಗಳಷ್ಟೇ ಕಂಡು ಬಂತು.

ಜಿಲ್ಲಾಡಳಿತದ ನಿರ್ದೇಶನದಂತೆ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡದೇ ಸ್ಥಳೀಯ ಮಸೀದಿಗಳಲ್ಲಿಯೇ ಪ್ರಾರ್ಥನೆ ನಡೆಸಿದರು.ಪ್ರತಿ ಮಸೀದಿಗಳಲ್ಲಿ 50 ರಷ್ಟು ಜನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಗುಂಪು ಸೇರಲು ಯಾವುದೇ ಅವಕಾಶವಿರಲಿಲ್ಲ.

ಬಕ್ರೀದ್ ತ್ಯಾಗ ಬಲಿದಾನದ ಸಂಕೇತ. ಭಾರತವೂ ಸೇರಿದಂತೆ ವಿಶ್ವದ್ಯಾಂತ ಮುಸ್ಲಿಮರು ಈ ಹಬ್ಬವನ್ನು ಭಕ್ತಿ ಶ್ರದ್ಧೆಯಿಂದ ಆಚರಿಸುತ್ತಾರೆ.ಪ್ರವಾದಿಗಳಲ್ಲೊಬ್ಬರಾದ ಪ್ರವಾದಿ ಇಬ್ರಾಹಿಮರು ತಮ್ಮ ಮಗನಾದ ಇಸ್ಮಾಯಿಲ್ ರನ್ನು ಸೃಷ್ಟಿಕರ್ತ ಅಲ್ಲಾಹನಿಗೆ ಬಲಿ ಕೊಡಲು ಮುಂದಾದ ದಿನವನ್ನು ಈದ್ ಉಲ್ ಅದಾ ಅರ್ಥಾತ್ ಬಕ್ರೀದ್ ಎಂದು ಆಚರಿಸಲಾಗುತ್ತಿದೆ.

ಕಳೆದೆರಡು ವರ್ಷಗಳಿಂದ ಕೊರೋನಾ ಎಲ್ಲರ ಹಬ್ಬದ ಸಂಭ್ರಮವನ್ನು ಕಸಿದುಕೊಂಡಿದೆ. ಬುಧವಾರ ಮುಂಜಾನೆಯಿಂದಲೇ ಹೊಸ ಬಟ್ಟೆ ತೊಟ್ಟು ತಮಗೆ ಸಮೀಪವಿರುವ ಮಸೀದಿಗಳಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿ ದೂರದಲ್ಲೇ ನಿಂತು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

ಈ ಸಂಧರ್ಭದಲ್ಲಿ ಎಲ್ಲಾ ಮಸೀದಿಯ   ಧರ್ಮಗುರುಗಳು ಹಾಗೂ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಅಧ್ಯಕ್ಷರಾದ ಮಹಮ್ಮದ್ ರಫ಼ಿ,ಗಾಳಿಬೈಲು ಜುಮ್ಮಾ ಮಸೀದಿ ಅಧ್ಯಕ್ಷರಾದ ಜಿ ಕೆ ಜಾವೀದ್ ಕೆಂಚನಾಲ ಜುಮ್ಮಾ ಮಸೀದಿ ಅಧ್ಯಕ್ಷರಾದ ಅಬ್ದುಲ್ ಘನೀಸಾಬ್ ಹಾಗೂ
ಮುಖಂಡರುಗಳಾದ ಅರ್ ಎ ಚಾಬುಸಾಬ್,ಮಹಮ್ಮದ್ ಷರೀಪ್ ಗಾಳಿಬೈಲ್,ಅಮೀರ್ ಹಂಜಾ, ಆಸೀಫ಼್ ಭಾಷಾಸಾಬ್,ಉಬೇದುಲ್ಲಾ ಷರೀಫ್,ಬಶೀರ್ ಅಹಮದ್ ಗರ್ತಿಕೆರೆ,ಎಂ ಹೆಚ್ ಮುಸ್ತಾಫಾ,ಖಲೀಲ್ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.




ರಿಪ್ಪನ್ ಪೇಟೆ ವರದಿ





ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..




ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…

2 hours ago

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ!

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…

11 hours ago

ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ

ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ Three people were arrested…

24 hours ago

ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ

ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ Farmer from Thirthahalli…

24 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪ್ರದೋಷ್‌ಗೆ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್‌ ಅಸ್ತು

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪ್ರದೋಷ್‌ಗೆ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್‌ ಅಸ್ತು Renukaswamy murder case takes…

24 hours ago

ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ KSRTC ಬಸ್‌ನ ಟೈರ್; ತಪ್ಪಿದ ಭಾರಿ ಅನಾಹುತ

ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ KSRTC ಬಸ್‌ನ ಟೈರ್; ತಪ್ಪಿದ ಭಾರಿ ಅನಾಹುತ KSRTC bus travelling from Udupi to…

1 day ago