ರಿಪ್ಪನ್ ಪೇಟೆ: ಬ್ಲಾಕ್ ಕಾಂಗ್ರೆಸ್ ಘಟಕದ ವತಿಯಿಂದ ಬುಧವಾರ ಬೆಳಗ್ಗೆ 10:00 ಗಂಟೆ ಗೆ ಸರಿಯಾಗಿ ಬಿಜೆಪಿ ಪಕ್ಷದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಪ್ರತಿಭಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಿಪ್ಪನ್ ಪೇಟೆ ಕಾಂಗ್ರೆಸ್ ಮುಖಂಡ ಹಾಗೂ ಗ್ರಾಪಂ ಸದಸ್ಯರಾದ ಆಸೀಪ್ ಬಾಷಾಸಾಬ್ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮಕ್ಕಳು ಹಾಗೂ ಬಾಣಂತಿಯರಿಗೆ ಹಂಚುವ ಮೊಟ್ಟೆಯಲ್ಲಿ ಭಾರಿ ಹಗರಣ ನಡೆಸಿರುವ ಶಶಿಕಲಾ ಜೊಲ್ಲೆ ತಮ್ಮ ಸಚಿವೆ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಅವರ ವಿರುದ್ಧ ಪ್ರತಿಭಟನೆ ಮತ್ತು ಸರ್ಕಾರಕ್ಕೆ ಮನವಿ ನೀಡಲಾಗುವುದು,ಈ ಪ್ರತಿಭಟನೆಯು ರಿಪ್ಪನ್ ಪೇಟೆ ವಿನಾಯಕ ವೃತ್ತ ದಿಂದ ನಾಡಕಛೇರಿಯವರೆಗೂ ಹಮ್ಮಿಕೊಳ್ಳಲಾಗಿದೆ.
ಈ ಪ್ರತಿಭಟನೆ ಯಲ್ಲಿ ಮಾಜಿ ಶಾಸಕರದ ಸನ್ಮಾನ್ಯ ಗೋಪಾಲ ಕೃಷ್ಣ ಬೇಳೂರು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಕಲಗೋಡ ರತ್ನಕರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಹಾಲಿ ಎಪಿಎಂಸಿ ಸದಸ್ಯರಾದ ಬಂಡಿ ರಾಮಚಂದ್ರ ರವರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ವೇತಾ ಬಂಡಿ,ತಾಲೂಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ ಜಿ ನಾಗರಾಜ್, ಎಪಿಎಂಸಿ ಸದಸ್ಯರಾದ ಈಶ್ವರಪ್ಪ ಗೌಡ್ರು,ಕೆಂಚನಾಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉಬೆದುಲ್ಲಾ ಷರೀಫ್, ಅರಸಾಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉಮಾಕರ್, ರಿಪ್ಪನಪೇಟೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಹಾಲಕ್ಷ್ಮಿ ಅಣ್ಣಪ್ಪ, ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯರು ಹಾಲಿ ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರೇಶ್, ಮಧುಸೂದನ್, ಹಾಗೂ ಎಲ್ಲಾ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು,ಸದಸ್ಯರು ಇನ್ನಿತರ ಮುಖಂಡರು ಪಾಲ್ಗೊಳ್ಳುತ್ತಾರೆ ಎಂದರು.
ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್