Headlines

ಶಾಸಕ ಹರತಾಳು ಹಾಲಪ್ಪರವರಿಗೆ ಮಂತ್ರಿ ಪದವಿ ನೀಡುವಂತೆ ಒತ್ತಾಯ:

ರಿಪ್ಪನ್ ಪೇಟೆ: ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಎಂಎಸ್ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪರವರಿಗೆ ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರವರ ಸಂಪುಟದಲ್ಲಿ ಮಂತ್ರಿ ಪದವಿ ನೀಡಬೇಕೆಂದು ಕೆರೆಹಳ್ಳಿ ಹೋಬಳಿ-ಹುಂಚಾ ಹೋಬಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಒತ್ತಾಯಿಸಿದ್ದಾರೆ.


ಪಟ್ಟಣದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಸಕರಾದ ಹರತಾಳು ಹಾಲಪ್ಪರವರು ಸಕ್ರೀಯ ರಾಜಕಾರಣಿಗಳಾಗಿದ್ದು ಹಾಗೇಯೆ ಜಿಲ್ಲೆಯಲ್ಲಿ ಬಿಜೆಪಿ ಪಕ್ಷದ ಬೆಳವಣಿಗೆಗೆ ಹಗಲಿರುಳು ಶ್ರಮಿಸುತ್ತಿದ್ದು ಹಾಗೆಯೇ ಈ ಹಿಂದೆ ಬಿ ಎಸ್ ಯಡಿಯೂರಪ್ಪ ರವರ ಮಂತ್ರಿ ಮಂಡಲದಲ್ಲಿ ಮಂತ್ರಿಗಳಾಗಿ ಕಾರ್ಯನಿರ್ವಹಿಸಿದ ಸಂಧರ್ಭದಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದರು ಹಾಗೇಯೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಸಾಗರ ಸೊರಬ ಕ್ಷೇತ್ರದಲ್ಲಿ ಶಾಸಕರಾಗಿದ್ದ ಅವಧಿಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸುವುದರ ಮೂಲಕ ಜನರ ಪ್ರಶಂಸೆಯ ಜೊತೆಗೆ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಕಾರಣಕರ್ತರಾಗಿದ್ದರು.

 ಈ ಬಾರಿಯ ನೂತನ ಮಂತ್ರಿ ಮಂಡಲದಲ್ಲಿ ಹರತಾಳು ಹಾಲಪ್ಪರವರಿಗೆ ಮಂತ್ರಿ ಪದವಿ ನೀಡಿದರೆ ರಾಜ್ಯದ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಸಹಕಾರಿಯಾಗುವುದು ಎಂದರು.
ಸುದ್ದಿ ಗೋಷ್ಟಿಯಲ್ಲಿ ಬಿಜೆಪಿ ಮುಖಂಡರುಗಳಾದ ಸುರೇಶ್ ಸಿಂಗ್,ಸತೀಶ್ ಎನ್,ಗ್ರಾಪಂ ಸದಸ್ಯರಾದ ಸುಧೀಂದ್ರ ಪೂಜಾರಿ ಇನ್ನಿತರರು ಇದ್ದರು.




ವರದಿ : ಸಬಾಸ್ಟಿನ್ ಮ್ಯಾಥ್ಯೂಸ್‌ ರಿಪ್ಪನ್ ಪೇಟೆ





ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..





Leave a Reply

Your email address will not be published. Required fields are marked *