Categories: Blog

ಶೈಕ್ಷಣಿಕ ಸೇವೆ ಸಮಾಜದಲ್ಲಿನ ಅತ್ಯುತ್ತಮ ಸೇವೆ: ಶಾಸಕ ಹರತಾಳು ಹಾಲಪ್ಪ.

ರಿಪ್ಪನ್ ಪೇಟೆ : ಶೈಕ್ಷಣಿಕ ಸೇವೆ ಸಮಾಜದಲ್ಲಿನ ಅತ್ಯುತ್ತಮ ಸೇವೆಯಾಗಿದ್ದು. ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ,ದಾರಿದೀಪವಾಗಿ ಮುನ್ನಡೆಸಿದ ಶಿಕ್ಷಕರನ್ನು ಮತ್ತು ಉಪನ್ಯಾಸಕರನ್ನು ಸಮಾಜ ಗೌರವಿಸುತ್ತದೆ ಎಂದು ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸಿ ಇಂದು ನಿವೃತ್ತರಾದ ಪ್ರೊ. ನಳಿನ್ ಚಂದ್ರ ಉಡುಪ ಅವರಿಗೆ ಕಾಲೇಜು ಅಭಿವೃದ್ಧಿ ಸಮಿತಿಯಿಂದ  ಆಯೋಜಿಸಲಾಗಿದ್ದ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಶೈಕ್ಷಣಿಕ ಸೇವೆಯಲ್ಲಿ ತೊಡಗಿಕೊಂಡಿರುವ ಪ್ರತಿಯೊಬ್ಬರಿಗೂ ಸಹ ಸಮಾಜವು ಗೌರವಿಸುತ್ತದೆ ಮತ್ತು ಆರಾಧಿಸುತ್ತದೆ. ಸರಳತೆ ಸಜ್ಜನಿಕೆ ಮತ್ತು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ ಉಪನ್ಯಾಸಕರನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಸಹ ತನ್ನ ಜೀವಿತ ಅವಧಿಯಲ್ಲಿ ನೆನಪಿಸಿಕೊಳ್ಳುತ್ತಾನೆ. ಉತ್ತಮ ಉಪನ್ಯಾಸಕರು ಸಮಾಜದ ಶಿಲ್ಪಿಗಳಾಗಿ ಕಂಗೊಳಿಸುತ್ತಾರೆ ಎಂದರು.

ಗೌರವ ಸಮರ್ಪಣೆಯನ್ನು ಸ್ವೀಕರಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಪ್ರೊ ನಳಿನ್ ಚಂದ್ರ ಉಡುಪ ರವರು ನನ್ನ ಶೈಕ್ಷಣಿಕ ಕಾರ್ಯ ವಿದ್ಯೆಯಲ್ಲಿ ದಕ್ಷಿಣಕನ್ನಡ ಚಿಕ್ಕಮಂಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯ ಹೊಸನಗರ ಮತ್ತು ರಿಪ್ಪನ್ ಪೇಟೆ ಯಲ್ಲಿ ಉಪನ್ಯಾಸಕನಾಗಿ ಹಾಗೆಯೇ ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸುವುದರ ಮೂಲಕ ನನ್ನ ಶೈಕ್ಷಣಿಕ ಸೇವೆಯನ್ನು ಪ್ರಾಮಾಣಿಕವಾಗಿ ಮತ್ತು ನಿಷ್ಠೆಯಿಂದ ನಿರ್ವಹಿಸಿದ್ದೇನೆ. ನನ್ನಿಂದ ಕಲಿತ ನೂರಾರು ವಿದ್ಯಾರ್ಥಿಗಳು ಉತ್ತಮ ಪದವಿಯನ್ನು ಪಡೆದುಕೊಂಡು ಉನ್ನತ ಉದ್ಯೋಗವನ್ನು ಅಲಂಕರಿಸಿಕೊಂಡು ಸಮಾಜದ ಮುಖ್ಯವಾಹಿನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ
ಇದು ನನಗೆ ಸಂತಸದ ಸಂಗತಿಯಾಗಿದೆ. ಕರ್ತವ್ಯ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕಾರ್ಯವನ್ನು ನಿರ್ವಹಿಸಿರುವ ಪ್ರತಿಯೊಬ್ಬ ಉಪನ್ಯಾಸಕರನ್ನು ವಿದ್ಯಾರ್ಥಿಗಳು ಹಾಗೂ ಸಮಾಜವು ಗೌರವಿಸುತ್ತದೆ. ನನ್ನ ಉಪನ್ಯಾಸಕ ಹಾಗೂ ಪ್ರಾಚಾರ್ಯ ವೃತ್ತಿ ಜೀವನವು  ನನಗೆ ಸಂತೋಷವನ್ನು ಮತ್ತು ನೆಮ್ಮದಿಯ ಬದುಕನ್ನು ನೀಡಿದೆ ಎಂದರು.

ಕಾಲೇಜಿನ ಪ್ರಭಾರ ಪ್ರಾಚಾರ್ಯ ಪ್ರೊ.ಚಂದ್ರಶೇಖರ್. ಪ್ರಾಸ್ತವಿಕವಾಗಿ ಮಾತನಾಡಿದರು.ಕನ್ನಡ ವಿಭಾಗದ ಡಾ. ರತ್ನಾಕರ್ ಕುನಗೋಡು ಕಾರ್ಯಕ್ರಮವನ್ನು ನಿರೂಪಿಸಿದರು.

ಕಾರ್ಯಕ್ರಮದಲ್ಲಿ ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುಳಾ ಕೇತಾರ್ಜಿ ರಾವ್,ಕಾಲೇಜ್ ಅಭಿವೃದ್ಧಿ ಸಮಿತಿಯ ಸದಸ್ಯರುಗಳಾದ ಮೆಣಸೆ ಆನಂದ, ಆರ್ ಟಿಗೋಪಾಲ್.
ಎ ಟಿ ನಾಗರತ್ನ. ಎಂಬಿ ಮಂಜುನಾಥ್.ಕೇರ್ತಜಿ ರಾವ್. ಉಪನ್ಯಾಸಕರುಗಳಾದ ಡಾ. ಶ್ರೀಪತಿ ಹಳಗುಂದ. ಶಂಕರ್. ಕಿರಣ್. ದೇವರಾಜ್ ಶೋಭಾ ಪಾಟೀಲ್. ಕುಮಾರಸ್ವಾಮಿ. ಗ್ರಂಥಾಲಯ ಮುಖ್ಯಸ್ಥ ಡಾ. ರಜನೀಶ್. ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಡಾ.ನರೇಂದ್ರ ಕುಳಗಟ್ಟೆ ಸೇರಿದಂತೆ ಕಾಲೇಜಿನ ಎಲ್ಲ ವಿಭಾಗದ ಮುಖ್ಯಸ್ಥರು ಹಾಗೂ ಉಪನ್ಯಾಸಕರು, ಸಿಬ್ಬಂದಿವರ್ಗದವರು ಭಾಗವಹಿಸಿದ್ದರು.


ವರದಿ: ಸಬಾಸ್ಟಿನ್ ಮ್ಯಾಥ್ಯೂಸ್‌ ರಿಪ್ಪನ್ ಪೇಟೆ



ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..






ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ Ramesh H.B. has been appointed as the…

1 hour ago

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ Thousands of devotees participated in…

2 hours ago

ಹೊಸನಗರ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ನೂತನ ಪಿಎಸ್‌ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕಾರ

ಹೊಸನಗರ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ನೂತನ ಪಿಎಸ್‌ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕಾರ Hosanagara PSI…

4 hours ago

ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ – 9ನೇ ತರಗತಿ ವಿದ್ಯಾರ್ಥಿನಿ ಸಾವು

ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ - 9ನೇ ತರಗತಿ ವಿದ್ಯಾರ್ಥಿನಿ ಸಾವು A tragic incident…

5 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ನಿಯಮ ಉಲ್ಲಂಘನೆ; ಶಿವಮೊಗ್ಗದಲ್ಲಿ ಒಟ್ಟು 5 ಪ್ರಕರಣ ದಾಖಲು

ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ನಿಯಮ ಉಲ್ಲಂಘನೆ; ಶಿವಮೊಗ್ಗದಲ್ಲಿ ಒಟ್ಟು 5 ಪ್ರಕರಣ ದಾಖಲು Shivamogga police have registered…

5 hours ago

ಶಿವಮೊಗ್ಗದಲ್ಲಿ ತಡರಾತ್ರಿ ಕಿಡಿಗೇಡಿಗಳ ಕೃತ್ಯ: ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಬೆಂಕಿ

ಶಿವಮೊಗ್ಗದಲ್ಲಿ ತಡರಾತ್ರಿ ಕಿಡಿಗೇಡಿಗಳ ಕೃತ್ಯ: ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಬೆಂಕಿ Miscreants allegedly set two parked bikes on…

5 hours ago