ರಿಪ್ಪನ್ ಪೇಟೆ: ಮಲೆನಾಡಿನ ತವರೂರು ತೀರ್ಥಹಳ್ಳಿಯ ಯಶಸ್ವಿ ಶಾಸಕ ಎಂದೇ ಬಿಂಬಿತರಾಗಿರುವ ಶಾಸಕರಾದ ಆರಗ ಜ್ಞಾನೇಂದ್ರ ನಾಲ್ಕು ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿದವರು,ಸುಮಾರು ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ಆರಗ ಜ್ಞಾನೇಂದ್ರ ರವರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಹೊಸನಗರ ತಾಲೂಕು ಬಿಜೆಪಿಯ ಉಪಾಧ್ಯಕ್ಷರಾದ ಕಲ್ಲೂರು ನಾಗೇಂದ್ರಪ್ಪ ಗೌಡ ಒತ್ತಾಯಿಸಿದ್ದಾರೆ.
: ಕಲ್ಲೂರು ನಾಗೇಂದ್ರಪ್ಪ ಗೌಡ
ಹೊಸನಗರ ತಾಲೂಕು ಬಿಜೆಪಿ ಉಪಾಧ್ಯಕ್ಷರು:
ಕೊರೊನಾದಂಥ ಸಂಕಷ್ಟದ ವೇಳೆ ತಾಲೂಕಿನಲ್ಲಿ ಸುತ್ತಾಡಿ ಜನರ ಕಷ್ಟ ಆಲಿಸಿದ್ದಾರೆ. ಮಳೆ ಬಂದರೂ ಮಳೆಯಲ್ಲಿಯೇ ಜನರ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಿದ್ದಾರೆ.ವಿಧ್ಯಾರ್ಥಿ ದೆಸೆಯಿಂದ ಹಿಡಿದು ಜನಸಂಘದ ಮೂಲಕ ಬಿಜೆಪಿ ಪಕ್ಷಕ್ಕಾಗಿ 45 ವರ್ಷಗಳಿಂದ ದುಡಿದಿದ್ದಾರೆ.ಸಂಘಟನ ಚತುರರಾಗಿ ಬಹಳಷ್ಟು ಕಾರ್ಯಕರ್ತರನ್ನು ಬೆಳೆಸಿದ ಹೆಗ್ಗಳಿಕೆ ಇವರದು.ತುಂಬಾ ಸ್ನೇಹಮಯಿ ವ್ಯಕ್ತಿತ್ವದ ಆರಗ ಜ್ಞಾನೇಂದ್ರ ರವರಿಗೆ ಈ ಬಾರಿ ಕ್ಯಾಬಿನೆಟ್ ದರ್ಜೆಯ ಮಂತ್ರಿ ಸ್ಥಾನ ನೀಡಲೇಬೇಕು ಎಂದು ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರವರಿಗೆ ಮನವಿ ಮಾಡಿದರು.
ಈ ಸಂಧರ್ಭದಲ್ಲಿ ಬಿಜೆಪಿ ಮುಖಂಡರಾದ ಕಗ್ಗಲಿ ಲಿಂಗಪ್ಪ , ಜಂಬಳ್ಳಿ ಗಿರೀಶ್ ಇನ್ನಿತರರಿದ್ದರು.
:ರಿಪ್ಪನ್ ಪೇಟೆ ವರದಿ:
ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್