ಸೊರಬ:ತಾಲ್ಲೂಕಿನಲ್ಲಿ ಇಂದು ವರುಣನ ಅಬ್ಬರ ಹೆಚ್ವಾಗಿದ್ದು ಹಲವು ಭಾಗಗಳಲ್ಲಿ ಮನೆ, ಕೃಷಿ ಭೂಮಿ ಹಾಗೂ ರಸ್ತೆಗಳು ಜಲಾವೃತಗೊಂಡಿದ್ದು ಇಡೀ ತಾಲ್ಲೂಕಿನಲ್ಲಿ ಪ್ರವಾಹವನ್ನು ಸ್ರಷ್ಟಿಸಿದೆ.
ಚಂದ್ರಗುತ್ತಿಯ ವರದಾನದಿ,ಸೊರಬದ ಗೌರಿ ಕೆರೆ,ಚನ್ನಪಟ್ಟಣ ಸೇತುವೆ,ಕಡಸೂರ್ ರಸ್ತೆ,ಕತವಾಯಿ ಸೇತುವೆ ಮುಳುಗಡೆಯಾಗಿವೆ, ಇದರಿಂದ ಸಂಪರ್ಕ ರಸ್ತಗಳು ಸಂಪೂರ್ಣವಾಗಿ ಬಂದ್ ಆಗಿ ರಸ್ತೆಗಳಮೇಲೆ ಅಪಾಯದಮಟ್ಟ ಮೀರಿ ನೀರು ಹರಿಯುತ್ತಿದ್ದು ವಾಹನಗಳು ಸಂಚರಿಸದಂತೆ ಸೊರಬ ಪೋಲೀಸ್ ಇಲಾಖೆಯವರು ರಸ್ತೆಗೆ ಅಡ್ಡವಾಗಿ ಬ್ಯಾರಿಕೇಡ್ ಅಳವಡಿಸಿದ್ದಾರೆ, ಹಾಗೂ ಯಾವುದೇ ರೀತಿಯ ಅನಾಹುತ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.
ಈ ಸಂದರ್ಭದಲ್ಲಿ ಸೊರಬ ಪಿಎಸ್ಐ ಆದ ಪ್ರಶಾಂತ್ ರವರು ಕಾನ್ ಸ್ಟೆಬಲ್ ಮಂಜುನಾಥ್, ದಪೇದಾರ್ ಕುಮಾರ್, ಹಾಗೂ ಗ್ರಾಮ ಪಂಚಾಯತ್ ಸದ್ಯಸರಾದ ಸಲೀಮ್, ಗ್ರಾಮಸ್ಥರಾದ ದಿನೇಶ್, ಜಗದೀಶ್,ಮುಖಂಡರಾದ ಪ್ರಸನ್ನ ಶೇಟ್, ಪ್ರವೀಣ್, ದೇವರಾಜ್ ಮತ್ತಿತರು ಇದ್ದರು..
ವರದಿ : ವೆಂಕಟೇಶ್ ಚಂದ್ರಗುತ್ತಿ
ಪೋ:9845783961
ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್