ರಿಪ್ಪನ್ ಪೇಟೆ: ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷದಿಂದ ಗವಟೂರು ಗ್ರಾಮದ ಹಳಿಯೂರು (ಮತ್ತಿಮನೆ, ಸಂಪಳ್ಳಿ ಸಂಪರ್ಕ)ಭಾಗದ ಜನರು ಕಳೆದ 60 ವರ್ಷಗಳಿಂದ ಸೇತುವೆ ಇಲ್ಲದೆ ಮಳೆಗಾಲದ ಸಂದರ್ಭದಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರೆ.
ದಿನ ನಿತ್ಯದ ವಸ್ತುಗಳನ್ನು ಖರೀದಿಸುವರು, ಶಾಲೆಗೆ ಹೋಗುವ ಮಕ್ಕಳು, ತುರ್ತು ಸಂದರ್ಭದಲ್ಲಿ ಆಸ್ಪತ್ರೆಗೆ ಹೋಗೋಕೆ ಆಗದೇ ಪರದಾಡುತ್ತಿರುವ ಊರಿನ ಜನರು, ಕೃಷಿ ಚಟುವಟಿಕೆಗಳಿಗೆ ಬೇಕಾಗುವ ಗೊಬ್ಬರ ಇತ್ಯಾದಿ ಮೂಲಭೂತ ಸೌಕರ್ಯಗಳ ಸಮಯಕ್ಕೆ ಸರಿಯಾಗಿ ಪಡೆಯಲು ಕೃಷಿಕರು ಸೇತುವೆ ಇಲ್ಲದೆ ಸಂಕಟಪಡುತ್ತಿದ್ದಾರೆ.
ಗ್ರಾಮಸ್ಥರು ಸೇತುವೆ ರಸ್ತೆ ಇಲ್ಲದೆ ಬೇಸತ್ತು ಹೋಗಿದ್ದಾರೆ ಸ್ವತಃ ರೈತರೆ ಸಾವಿರಾರು ರೂಪಾಯಿ ಖರ್ಚು ಮಾಡಿ ಓಡಾಡಿದರು ಯಾವೊಬ್ಬ ಅಧಿಕಾರಿ, ರಾಜಕಾರಣಿಗಳ ಸೂಕ್ತ ಸ್ಪಂದನೆ ಇಲ್ಲ, ರಾಜಕಾರಣಿಗಳು ಚುನಾವಣೆ ಸಂದರ್ಭದಲ್ಲಿ ಮಾತ್ರ ಬಂದು ಆಶ್ವಾಸನೆ ನೀಡಿಹೋಗುತ್ತಾರೆ ವಿನಃ ಕಾರ್ಯರೂಪಕ್ಕೆ ಬಂದಿಲ್ಲ.
ರಾಜಕಾರಣಿ ಗಳ ಪೊಳ್ಳು ಭರವಸೆ ಇಂದ ಮುಂದಿನ ಚುನಾವಣೆಯಲ್ಲಿ ಹಳಿಯೂರು ಸುತ್ತಮುತ್ತ ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರ ಮಾಡಲಾಗುವುದು ಎಂದು ಗ್ರಾಮಸ್ಥ ಕಶ್ಯಪ್ ಆಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೇತುವೆ ಇಲ್ಲದೆ ಸಂಪಳ್ಳಿ,ಮತ್ತಿಮನೆ,ಜಂಬಲ್ಲಿ, ಕೊಳವಳ್ಳಿ, ಕಲ್ಕೊಪ್ಪ, ಹಳ್ಳಿಗಳಿಗೆ ಸಂಪರ್ಕ ಕಳೆದು ಕೊಂಡಿದೆ ಇಲ್ಲಿನ ಸುತ್ತ ಮುತ್ತಲಿನ ಜನರು ಇಲ್ಲಿಗೊಂದು ಸೇತುವೆ ಮಾಡಿ ಕೊಡಿ ಮಕ್ಕಳಿಗೆ ಶಾಲೆಗೆ ಹೋಗಲು ಆಸ್ಪತ್ರೆ ಹೋಗಲು ದಾಟಲು ಆಗುತ್ತಿಲ್ಲ ಎಂದು ಮನವಿ ಮಾಡಿದ್ದರು ಯಾರು ಗಮನ ಹರಿಸಿಲ್ಲ.
ದಯವಿಟ್ಟು ಇನ್ನಾದರೂ ಜಿಲ್ಲಾಡಳಿತ ಹಾಗು ಶಾಸಕರು ರೈತರ ನೆರವಿಗೆ ದಾವಿಸಿ ಅಲ್ಲಿ ಒಂದು ಸೇತುವೆ ನಿರ್ಮಾಣ ಮಾಡಬೇಕು, ಹಳ್ಳಿಗರ ನಿರ್ಲಕ್ಷ ಬೇಡ ನಮಗೆ ಮೂಲ ಭೂತ ಸೌಕರ್ಯ ಕೊಡಿ ಇಲ್ಲವಾದರೆ ಮುಂದೆ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡುತ್ತೇವೆ ಎಂದು ಗ್ರಾಮಸ್ಥರು ಎಚ್ಚರಿಕೆ ಕೊಟ್ಟಿದ್ದಾರೆ.
ವರದಿ: ರಾಮನಾಥ್
ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್