ಸೊರಬ: ಚಂದ್ರಗುತ್ತಿಯ ಯಾತ್ರಿ ನಿವಾಸದಲ್ಲಿ ಶಾಸಕರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪ ರವರ ಅಧ್ಯಕ್ಷತೆಯಲ್ಲಿ ಚಂದ್ರಗುತ್ತಿ ಹೋಬಳಿಗೆ ಸಂಬಂಧಿಸಿದಂತೆ ಬಗರ್ ಹುಕುಂ ಸಮಿತಿ ಪ್ರಗತಿ ಪರಿಶೀಲನಾ ಸಭೆ ನಡಸಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದರು.
ವಿತರಣೆ ಮಾಡುವ ಸಂಧರ್ಭದಲ್ಲಿ ಹಕ್ಕು ಪತ್ರ ಪಡೆದ ಫಲಾನುಭವಿಗಳು ಶಾಸಕರಿಗೆ ಅಭಿನಂದನೆ ಸಲ್ಲಿಸಿದರು.
ಶಾಸಕರು ಅವರ ಅಭಿನಂದನೆಯನ್ನು ಸ್ವೀಕರಿಸಿ ನಿಮ್ಮ ಕೆಲಸ ಮಾಡಿಕೊಡುವುದೇ ನನ್ನ ಕೆಲಸ ಅದನ್ನು ನಾನು ಮಾಡಿದ್ದೇನೆ ನೀವುಗಳು ತುಂಬಾ ವರ್ಷಗಳ ಹಿಂದೆಯೇ ಹಕ್ಕು ಪತ್ರ ಹೊಂದಿರಬೇಕಾಗಿತ್ತು ತಡವಾಗಿದೆ ಎಂದರು.
ಸರ್ಕಾರದ ಯೋಜನೆಗಳು ಬಡವರಿಗೆ ಸಿಗುವಂತೆ ಮಾಡುವುದೇ ನನ್ನ ಕೆಲಸ. ಕೆಲವರಿಗೆ ನಿವೇಶನ, ಮನೆ ಇಲ್ಲದೇ ಗುಡಿಸಲುಗಳಲ್ಲಿ ವಾಸ ಮಾಡುತ್ತಿದ್ದಾರೆ. ತಾಲ್ಲೂಕಿನಲ್ಲಿ ಇದುವರಿಗೂ ಅರ್ಜಿ ಸಲ್ಲಿಸಿರುವ ಅರ್ಹ ನಿವೇಶನ ರಹಿತರಿಗೆ ನಿವೇಶನ, ಮನೆ ನಿರ್ಮಿಸುವುದಾಗಿ ತಿಳಿಸಿದರು.
ಈ ಸಂಧರ್ಭದಲ್ಲಿ ಸೊರಬ ತಹಶೀಲ್ದಾರರಾದ ಶಿವಾನಂದ್ ರಾಣೆ,ಬಗರ್ ಹುಕುಂ ಸಮಿತಿ ಸದ್ಯಸರಾದ ದೇವೇಂದ್ರಪ್ಪ, ಲಲಿತಾ ನಾರಾಯಣಪ್ಪ,ಮುಖಂಡರಾದ ಶಿವಕುಮಾರ್ ಕಡಸೂರು,
ಈಶ್ವರಪ್ಪ ಚನ್ನಪಟ್ಟಣ,ಪರಮೇಶ್ವರ್ ಮಣ್ಣತ್ತಿ,ಅಂಗಡಿ ಚಂದ್ರಪ್ಪ,
ಪ್ರಸನ್ನ ಶೇಟ್,ರಾಜು ಮಾವಿನಕೊಪ್ಪ,ರಮೇಶ್ ಮಾವಿನಕೊಪ್ಪ, ತಿರುಪತಿ ಬಾಡದಬೈಲ್,ಫಕೀರಪ್ಪ,ಬಂಗಾರಪ್ಪ ಅಂದವಳ್ಳಿ,ದ್ಯಾಮ,ದೇವರಾಜ್ ಹಾಗೂ ವಲಯ ಅರಣ್ಯಾಧಿಕಾರಿಗಳು ಸೊರಬ, ADLR ಸೊರಬ ರವರು, ಉಪ ತಹಶಿಲ್ದಾರರು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಿಗರು ಹಾಜರಿದ್ದರು.
ವರದಿ: ವೆಂಕಟೇಶ್ ಚಂದ್ರಗುತ್ತಿ ಸೊರಬ
ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್