Headlines

“ಉಳ್ಳವರಿಗೆ ಬೆಣ್ಣೆಯೂಟ; ಹಸಿದವರಿಗೆ ಬಣ್ಣದ ಮಾತು”. ಕೇಂದ್ರ ಸರಕಾರದ ಧ್ವಿಮುಖ ನೀತಿ: ಪಿ ಚಿದಂಬರಂ

ನವದೆಹಲಿ: ಒಂದು ನೇರಾನೇರ ಸಂವಾದದ ತಿರುಳು ಇದು. ಇಂದು (೧೩ಜುಲೈ) ರಾತ್ರಿ ‘ಇಂಡಿಯಾ ಟುಡೇʼ ಎಂಬ ಇಂಗ್ಲಿಷ್‌ ಚಾನೆಲ್ಲಿನಲ್ಲಿ ರಾಜದೀಪ್‌ ಸರ್ದೇಸಾಯಿ ಮತ್ತು ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ನಡುವೆ ನಡೆದ ಸಂವಾದ ಇಲ್ಲಿದೆ. ನಮ್ಮ ಕನ್ನಡ ಚಾನೆಲ್‌ಗಳಲ್ಲಾಗಲೀ ಪತ್ರಿಕೆಗಳಲ್ಲಾಗಲೀ ಕಾಣಸಿಗದ ಸ್ಪಷ್ಟ ಚಿತ್ರಣವನ್ನು ಇಲ್ಲಿ ಕಾಣಬಹುದು. ನಾವು ಮಧ್ಯಮವರ್ಗದವರು ಎಂಥ ಇಕ್ಕಟ್ಟಿನಲ್ಲಿ ಸಿಲುಕಿದ್ದೇವೆ!  ರಾಜದೀಪ್‌ ಸರ್ದೇಸಾಯಿ: ಅಲ್ಲಾರೀ, ಕೇಂದ್ರ ಸರಕಾರ ಹೇಳುತ್ತೆ, ಪೆಟ್ರೋಲ್‌ ಬೆಲೆ ಏರಿಕೆಗೆ ತಾನೊಬ್ಬನೇ ಕಾರಣ ಅಲ್ಲ; ರಾಜ್ಯ ಸರಕಾರಗಳೂ ತೆರಿಗೆ ಹಾಕುತ್ತಿವೆ….

Read More

ಆಷಾಡ ಮಾಸದ ನಂತರ ಕುಮಾರಸ್ವಾಮಿ ರಂಗಪ್ರವೇಶ: ಸಿದ್ದವಾಗಿದೆ 150 ವಿಧಾನಸಭಾ ಕ್ಷೇತ್ರದ ನೀಲನಕ್ಷೆ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಸದ್ದಿಲ್ಲದೆ ಸಜ್ಜಾಗುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಆಷಾಢ ಮಾಸ ಕಳೆಯುತ್ತಿದ್ದಂತೆ “ರಂಗಪ್ರವೇಶ’ಕ್ಕೆ ನೀಲನಕ್ಷೆ ರೂಪಿಸುತ್ತಿದ್ದಾರೆ. ಕಳೆದ ಎರಡು ವಿಧಾನಸಭೆ ಚುನಾವಣೆಯ ಅನುಭವದ ಆಧಾರದ ಮೇಲೆ 2023ರಲ್ಲಿ 150 ಕ್ಷೇತ್ರಗಳ ಗುರಿಯೊಂದಿಗೆ ರಾಜ್ಯ ಪ್ರವಾಸ ಕೈಗೊಳ್ಳಲು ತೀರ್ಮಾನಿಸಿದ್ದಾರೆ. ಈ ಸಂದರ್ಭದಲ್ಲಿ ಮತ್ತೆ ತಮಗೆ ಜನಪ್ರಿಯತೆ ತಂದುಕೊಟ್ಟ “ಗ್ರಾಮವಾಸ್ತವ್ಯ’ ನಡೆಸುವ ಬಗ್ಗೆಯೂ ಚಿಂತನೆ ನಡೆಸಿದ್ದಾರೆ. ಹಳೇ ಮೈಸೂರು, ಉತ್ತರ ಕರ್ನಾಟಕ ಹಾಗೂ ಮಲೆನಾಡು ಭಾಗದ ಕ್ಷೇತ್ರಗಳನ್ನು ಪಟ್ಟಿ ಮಾಡಿಕೊಂಡಿದ್ದು, ಪ್ರವಾಸದ ಅನಂತರ…

Read More

ದುಬೈನಲ್ಲಿ ಸುಖವಾಗಿದ್ದ ಮಹಿಳೆ, ಸಾಯೋದಕ್ಕಂತಲೇ ತವರಿಗೆ ಬರುವಂತಾದದ್ದು ದುರಂತ:

 ಉಡುಪಿ: ಒಂಟಿ ಮಹಿಳೆಯನ್ನು ವಯರ್ ಮೂಲಕ ಕತ್ತು ಹಿಸುಕಿ ಕೊಲೆ ಮಾಡಿ ನಗದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಈ‌ ಒಂದು ಕೊಲೆ‌ ಹಲವು ಅನುಮಾನಗಳಿಗೆ ಎಡೆಮಾಡಿದೆ. ಬ್ರಹ್ಮಾವರದ ಕುಮ್ರಗೋಡುವಿನ ಫ್ಲಾಟ್ ನಲ್ಲಿ ಶವವಾದ ಮಹಿಳೆಯ ಹೆಸರು ವಿಶಾಲ ಗಾಣಿಗ(36). ಈಕೆಗೆ 7 ವರ್ಷದ ಮಗಳಿದ್ದಾರೆ. ದುಬೈನಲ್ಲಿ ಕಂಪೆನಿಯೊಂದರ ಮನೇಜರ್ ಆಗಿ ದುಡಿಯುವ ಪತಿ. ಆಸ್ತಿ-ಪಾಸ್ತಿ, ಮನೆ, ಭೂಮಿ ಯಾವುದಕ್ಕೂ ಕೊರತೆ ಇರಲಿಲ್ಲ. ಹತ್ತು ದಿನಗಳ ಹಿಂದೆ ಮಗಳು ಆರ್ವಿಯೊಂದಿಗೆ ಈಕೆ ದುಬೈನಿಂದ ತವರಿಗೆ ಬಂದಿದ್ದರು. ಮನೆಯ ಆಸ್ತಿ…

Read More

ಇಂದು ಅಥವಾ ನಾಳೆ ಭೂಮಿಗೆ ಅಪ್ಪಳಿಸಲಿದೆ ಪ್ರಬಲ ಸೌರಚಂಡಮಾರುತ:ಟಿ ವಿ,ಮೊಬೈಲ್, ಜಿಪಿಎಸ್ ಸಿಗ್ನಲ್ ಹಾನಿ ಸಾಧ್ಯತೆ.

ವಾಷಿಂಗ್ಟನ್: ಇಡೀ ಜಗತ್ತು ಕೋವಿಡ್ ಸಂಕಷ್ಟಕ್ಕೆ ಸಿಲುಕಿರುವ ನಡುವೆಯೇ ಭಾರೀ ಪ್ರಮಾಣದ ಸೂರ್ಯನ ಶಾಖದ ಅಲೆಗಳು ಸೌರ ಚಂಡಮಾರುತದ ರೂಪದಲ್ಲಿ ಬುಧವಾರ ಅಥವಾ ಗುರುವಾರ ಭೂಮಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇದಕ್ಕೂ ಮುನ್ನ ಭಾನುವಾರ ಅಥವಾ ಸೋಮವಾರ ಸೌರ ಚಂಡಮಾರುತ ಭೂಮಿಗೆ ಬಂದಪ್ಪಳಿಸುವ ಸಾಧ್ಯತೆ ಇದೆ ಎಂದು ವರದಿಯಾಗಿತ್ತು. ಆಯಸ್ಕಾಂತೀಯ ಗುಣದ ಚಂಡಮಾರುತ ಎಂದು ಕರೆಯಲ್ಪಡುವ ಇದು ಅತೀ ವೇಗದ ಸೌರ ಮಾರುತವಾಗಿದ್ದು, ಭೂಮಿಯ ಮ್ಯಾಗ್ನೆಟಿಕ್ ವಲಯದ ಮೇಲೆ ಅಪ್ಪಳಿಸುವ ನಿರೀಕ್ಷೆ ಇದೆ ಎಂದು ಹವಾಮಾನ ತಜ್ಞರು…

Read More

ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಪಾಳುಬಿದ್ದಿವೆ ಲಕ್ಷಾಂತರ ರೂಪಾಯಿ ಬೆಲೆಬಾಳುವ ಪೋಲೀಸ್ ವಸತಿಗೃಹಗಳು:

ಆನಂದಪುರ: ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಪೊಲೀಸ್ ಉಪಠಾಣೆಯ ಸಿಬ್ಬಂದಿಗಳಿಗಾಗಿ ಸುಮಾರು ನಲವತ್ತು ವರ್ಷಗಳ ಹಿಂದೆ ಸರ್ಕಾರ ನಿರ್ಮಿಸಿದಂತಹ ಪೊಲೀಸ್ ವಸತಿ ಗೃಹಗಳು ಇಂದು ಸಂಪೂರ್ಣವಾಗಿ ಶಿಥಿಲಗೊಂಡಿದೆ. ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಕಾಣುವಂತಹ ಕೋಟ್ಯಂತರ ರೂಪಾಯಿ ಬೆಲೆಬಾಳುವ ಜಾಗದಲ್ಲಿ ನಿರ್ಮಿಸಿರುವಂತಹ 5 ಪೊಲೀಸ್ ವಸತಿ ಗೃಹಗಳು ಇದೀಗ ಸಂಪೂರ್ಣವಾಗಿ ಪಾಳು ಬಿದ್ದಿದ್ದು ಅನೈತಿಕ ಚಟುವಟಿಕೆಯ ಮುಖ್ಯ ತಾಣವಾಗಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಇದೆ. ಮದ್ಯವ್ಯಸನಿ ಗಳಿಗಂತೂ ಇದು ಅಡ್ಡವಾಗಿದ್ದು ಯಾವುದೇ ಭಯವಿಲ್ಲದೆ ವಸತಿಗೃಹದ…

Read More

ರಿಪ್ಪನ್ ಪೇಟೆ ತಾಪಂ ಕ್ಷೇತ್ರಕ್ಕೆ ಟಿಕೆಟ್ ಗಾಗಿ ಭಾರಿ ಪೈಪೋಟಿ:

ರಿಪ್ಪನ್ ಪೇಟೆ: ಕೊರೋನಾ ಕಾರಣಕ್ಕೆ ಮುಂದಿನ ಆರು ತಿಂಗಳ ಕಾಲ ಯಾವುದೇ ಚುನಾವಣೆ ಇಲ್ಲ ಎಂದು ರಾಜ್ಯ ಸರ್ಕಾರ ಘೋಷಿಸಿದೆ.ಆದರೆ ರಾಜ್ಯ ಚುನಾವಣಾ ಆಯೋಗ ಈ ಆದೇಶ ನಮಗೆ ಅನ್ವಯಿಸದು ಎನ್ನುವ ಮೂಲಕ ಯಾವುದೇ ಸಮಯದಲ್ಲಾದರೂ ಚುನಾವಣೆ ದಿನಾಂಕ ಪ್ರಕಟಿಸುವ ಸ್ಪಷ್ಟ ಸುಳಿವು ನೀಡಿದೆ.ಹಾಗಾಗಿ ರಾಜಕೀಯ ಪಕ್ಷಗಳು ಕೂಡ ಸದ್ದಿಲ್ಲದೇ ಚುನಾವಣೆಗೆ ಸಿದ್ದತೆ ನಡೆಸಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಾಲಾಗಿದ್ದ ಪ್ರತಿಷ್ಟೆಯ ಕಣ ರಿಪ್ಪನ್ ಪೇಟೆ ತಾಲೂಕ್ ಪಂಚಾಯತ್ ಕ್ಷೇತ್ರವು ಈ ಬಾರಿ ಸಾಮಾನ್ಯ ಮಹಿಳೆ ಮೀಸಲಾತಿ…

Read More

ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ:

     ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಗಾಜಿನಗೋಡು ಗ್ರಾಮದ ನಿವಾಸಿ, ಹೊಸನಗರ ತಾಲೂಕು ಗಂಗಾಮತಸ್ಥ ಸಂಘದ ಮಾಜಿ ನಿರ್ದೇಶಕ ಕೊಲ್ಲಪ್ಪ ಇವರು ಕೂಲಿ ಕೆಲಸಕ್ಕೆಂದು ಮೂರು ದಿನಗಳ ಹಿಂದೆ ಹೋದವರು ಇಂದು ಗಾಜಿನಗೋಡು ಸಮೀಪ ಕುಮದ್ವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.  ಕಳೆದ ಮೂರು ನಾಲ್ಕು ದಿನದಿಂದ ಬರುತ್ತಿರುವ ಅತಿಯಾದ ಮಳೆಗೆ ಕುಮದ್ವತಿ ನದಿ ಹರಿಯುತ್ತಿದ್ದು ಕಾಲುಜಾರಿ ಬಿದ್ದಿರಬಹುದೆಂದು ಊಹಿಸಲಾಗಿದೆ. ಗಾಜಿನ ಗೋಡು ಮತ್ತು  ಹಾರಂಬಳ್ಳಿ ಮಧ್ಯೆ ಹರಿಯುತ್ತಿರುವ ನದಿ ಇದಾಗಿದ್ದು ಕೂಲಿಯೂ ಸೇರಿದಂತೆ ಬೇರೆ…

Read More

SSLC ವಿಧ್ಯಾರ್ಥಿಗಳಿಗೆ ಪರೀಕ್ಷೆಯ ದಿನ ಉಚಿತ ಬಸ್ ವ್ಯವಸ್ಥೆ: ಕೆ ಎಸ್ ಆರ್ ಟಿ ಸಿ & ಬಿಎಂಟಿಸಿ ಯಿಂದ ಅದೇಶ

ಬೆಂಗಳೂರು: ಇದೇ ತಿಂಗಳ 19 ಹಾಗೂ 22 ರಂದು ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಇದೇ ಜುಲೈ 19 ಹಾಗೂ 22 ರಂದು ಪರೀಕ್ಷೆ ನಡೆಯಲಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣ ಮಾಡಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಬಿಎಂಟಿಸಿ ಅನುಮತಿ ನೀಡಿದ್ದು ಈ ಬಗ್ಗೆ ಎರಡು ನಿಗಮಗಳು ಆದೇಶ ಹೊರಡಿಸಿವೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಕ್ಕಳು ತಮ್ಮ ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹೋಗಲು ಮತ್ತು…

Read More

ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಶಿವಮೊಗ್ಗ ಜಿಲ್ಲಾ ಪ್ರವಾಸ:

ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜುಲೈ 15ರಿಂದ ಎರಡು ದಿನಗಳ ಶಿವಮೊಗ್ಗ ಮತ್ತು ದಾವಣಗೆರೆ ಪ್ರವಾಸ ಕೈಗೊಳ್ಳಲಿದ್ದಾರೆಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಮಾಹಿತಿ ನೀಡಿದರು. ಜುಲೈ 15ರ ಬೆಳಗ್ಗೆ 11 ಗಂಟೆಗೆ ಅವರು  ನೇರವಾಗಿ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಸೂರಗೊಂಡನಕೊಪ್ಪಕ್ಕೆ ಆಗಮಿಸಿ ಅಲ್ಲಿ ಲಂಬಾಣಿ ಜನರೊಂದಿಗೆ ಕುಂದುಕೊರತೆ ಕುರಿತು ಸಂವಾದ ನಡೆಸುವರು. ನಂತರ 3 ಗಂಟೆಗೆ ಶಿಕಾರಿಪುರಕ್ಕೆ ತೆರಳಿ ಅಲ್ಲೂ ಕೂಡಾ ಲಂಬಾಣಿ ಜನರ ಸಮಸ್ಯೆ ಆಲಿಸುವರು ಅದೇ ರೀತಿ…

Read More

ಬಿಜೆಪಿ ಸರಕಾರದ ಭ್ರಷ್ಟಾಚಾರದ ವಿರುದ್ದ ತೀವ್ರ ಪ್ರತಿಭಟನೆ:ಹೆಚ್ ಎಸ್ ಸುಂದರೇಶ್

ಶಿವಮೊಗ್ಗ: ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಇದಕ್ಕೆ ಲಗಾಮ ಹಾಕುವವರೇ ಇಲ್ಲವಾಗಿದೆ. ಇದರ ವಿರುದ್ಧ ಕಾಂಗ್ರೆಸ್ ತನ್ನ ಪ್ರತಿಭಟನೆಯನ್ನು ತೀವ್ರಗೊಳಿಸಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಯಿಂದ ಹಿಡಿದು ಪಕ್ಷದ ಸಾಮಾನ್ಯ ಕಾರ್ಯಕರ್ತನವರೆಗೂ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಯಾವುದೇ ಹೊಸ ಯೋಜನೆಗಳು ಬಂದರೂ ಕೂಡಾ ಕಿಕ್‍ಬ್ಯಾಕ್ ಸಿದ್ಧವಾಗಿಯೇ ಇರುತ್ತದೆ. ಶೇ.20ರಷ್ಟು ಗುಣಮಟ್ಟದ ಕೆಲಸವನ್ನು ಮಾಡುತ್ತಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಬೇಕಾಬಿಟ್ಟಿ ಕೆಲಸಗಳು ನಡೆಯುತ್ತಿದೆ. ಕಳಪೆ ರಸ್ತೆಯಿಂದ ಹಿಡಿದು…

Read More