Breaking
12 Jan 2026, Mon

ಕೊಳಕು ಮಂಡಲ ಹಾವು ಕಚ್ಚಿ ಜೀವನದ ಅತ್ಯಂತ ಹೀನಾಯ ಸ್ಥಿತಿಯಲ್ಲಿ ಸರಗುಂದದ ಬಡ ವಿದ್ಯಾರ್ಥಿಯ ಬದುಕು:

ಆನಂದಪುರ: ಓದಿ ಜೀವನದಲ್ಲಿ ಉನ್ನತ ಹುದ್ದೆಗೇರುವ ಕನಸು ಕಂಡಿದ್ದಂತಹ ವಿದ್ಯಾರ್ಥಿಯ ಬದುಕಲ್ಲಿ ಇದೀಗ ಕತ್ತಲು ಆವರಿಸಿದಂತಾಗಿದೆ.
ಇತರ ವಿದ್ಯಾರ್ಥಿಗಳಂತೆ ಆಟ ಪಾಠ ಕಲಿಯೋಣವೆಂದರೆ ನಡೆಯಲು ಬಾರದ ಪರಿಸ್ಥಿತಿಗೆ ಈ ವಿದ್ಯಾರ್ಥಿ ಈಗ ತಲುಪಿದ್ದಾನೆ.

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಸರಗುಂದ ಗ್ರಾಮದ ವಿದ್ಯಾರ್ಥಿ ಸ್ಕಂದನ ಎಂಬ ಹತ್ತನೇ ತರಗತಿ ಓದುತ್ತಿದ್ದ ಆ ವಿದ್ಯಾರ್ಥಿ ಮನೆಯ ಕೃಷಿ ಕೆಲಸದಲ್ಲಿ ತೊಡಗಿದ್ದಾಗ ಕೊಳಕುಮಂಡಲ ಹಾವು ಕಚ್ಚಿ ಇದೀಗ ಕಾಲು ಕೊಳೆಯುವಂತಹ ಸ್ಥಿತಿ ಬಂದಿದೆ.

ಮನೆಯಲ್ಲಿ ನೋಡಿದರೆ ಆರ್ಥಿಕ ಸ್ಥಿತಿ ಹೀನಾಯವಾಗಿದ್ದು ತಂದೆ ಕಳೆದ ಹತ್ತು ವರ್ಷಗಳಿಂದ ಬಿಪಿ ಶುಗರ್ ನಿಂದ ಹಾಸಿಗೆ ಹಿಡಿದಿದ್ದಾರೆ ಇದೀಗ ಜೀವನ ನಡೆಸಲು ಮಗ ಆಸರೆಯಾಗುತ್ತಾನೆ ಎಂಬ ತಂದೆತಾಯಿಯ ಕನಸಿಗೆ ಭಗ್ನವುಂಟಾಗಿದೆ.

ಇವರ ಸಹೋದರಿಯರು ಕೂಡ ಇನ್ನೂ ವಿದ್ಯಾರ್ಥಿಗಳಾಗಿದ್ದು ಮನೆಯ ಹೆಣ್ಣುಮಗಳು ದುಡಿದು ಈ ನಾಲ್ವರನ್ನು ಸಾಕುವಂತಹ ಪರಿಸ್ಥಿತಿಗೆ ಈಗ ಈ ಕುಟುಂಬ ತಲುಪಿದೆ.
ಮನೆಯಲ್ಲಿ ಒಂದೊಂದು ರೂಪಾಯಿಗೂ ಕೂಡ ಪರಿತಪಿಸುವಂತಹ ಪರಿಸ್ಥಿತಿ ಗೆ ಈ ಕುಟುಂಬ ಈಗ ತಲುಪಿದ್ದು ಈ ಹುಡುಗನ ಚಿಕಿತ್ಸೆಗೂ ಕೂಡ ಮನೆಯಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ.

ಯಾರಾದರೂ ದಾನಿಗಳು ಸಹಾಯಕ್ಕೆ ಮುಂದಾದರೆ ಸಾಕು ಅನ್ನುವಂಥ ಪರಿಸ್ಥಿತಿಯಲ್ಲಿ ಈ ಕುಟುಂಬ ಈಗ ಪರಿತಪಿಸುತ್ತಿದೆ.
ಜನಪ್ರತಿನಿಧಿಗಳು ಹಾಗೂ ನೆರೆಹೊರೆಯವರು  ಈಗ ಈ ಕುಟುಂಬ ಆರ್ಥಿಕ ಸಹಾಯವನ್ನು ನೀಡುವಂತೆ ಅಂಗಲಾಚುತ್ತಿರುವ ದೃಶ್ಯವಂತೂ  ನಿಜಕ್ಕೂ ಮನ ಕಲಕುವಂತಿತ್ತು.


ಯಾರಾದರೂ ಈ ಕುಟುಂಬಕ್ಕೆ ಆರ್ಥಿಕ ಸಹಾಯ ಮಾಡುವವರು ಈ ಖಾತೆ ಸಂಖ್ಯೆ ಹಾಗೂ ಗೂಗಲ್ ಪೇ ಸಂಖ್ಯೆಯನ್ನು ಸಂಪರ್ಕಿಸಿ.

NAGARATHNA.B.

3151108002280

CANARA BANK ANANDAPURA.

IFSC CODE: CNRB0003151

GOOGLE PAY : 7618731747.(SUSHMITHA.B )



ವರದಿ: ಪವನ್ ಕುಮಾರ್ ಕಠಾರೆ.





ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *