ಶಿವಮೊಗ್ಗ : ಗೃಹ ಮಂತ್ರಿ ಅರಗ ಜ್ಞಾನೇಂದ್ರ ಅವರು ಅಲ್ಪನಿಗೆ ಐಶ್ವರ್ಯ ಸಿಕ್ಕ ರೀತಿಯಲ್ಲಿ ಆಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಬಿ.ಕೆ ಸಂಗಮೇಶ್ ಟೀಕಿಸಿದ್ದಾರೆ.
ಗ್ಯಾಂಗ್ ರೇಪ್ನಲ್ಲಿ ಅರಗ ಜ್ಞಾನೇಂದ್ರ ಅವರ ಹೇಳಿಕೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜ್ಞಾನೇಂದ್ರ ಅವರು ಅಲ್ಪನಿಗೆ ಐಶ್ವರ್ಯ ಸಿಕ್ಕ ರೀತಿಯಲ್ಲಿ ಆಡುತ್ತಿದ್ದಾರೆ. ಪ್ರವಾಸೋದ್ಯಮ ಇಲಾಖೆ ಅವರಿಗೆ ಫಿಟ್ ಆಗಿತ್ತು. ಶಾಂತಿ ಕಾಪಾಡೋದನ್ನು ಬಿಟ್ಟು, ಅಶಾಂತಿ ಮೂಡಿಸುತ್ತಿರುವುದು ದುರಾದೃಷ್ಟಕರವಾದ ಸಂಗತಿಯಾಗಿದೆ. ಅಶಾಂತಿ ಮೂಡಿಸುವ ಗೃಹ ಸಚಿವರು ನಮ್ಮ ಜಿಲ್ಲೆಗೆ ಸಿಕ್ಕಿರುವುದು ದುರಾದೃಷ್ಟ ಎಂದರು.
ಪ್ರಚೋದನೆ ಮೂಡಿಸಲು ಈ ರೀತಿ ಹೇಳಿಕೆ ನೀಡಿದ್ದಾರೆ. ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ನಮ್ಮ ಪಕ್ಷದ ಮೇಲೆ ದೂರನ್ನು ಹೇಳುತ್ತಿದ್ದಾರೆ. ಅವರಿಗೆ ಯಾವುದೇ ರೀತಿಯ ಮಾಹಿತಿಗಳಿಲ್ಲ. ಅದಕ್ಕೆ ಈ ರೀತಿಯ ಹೇಳಿಕೆಗಳನ್ನು ನೀಡಿ ಅಶಾಂತಿಯನ್ನು ಮೂಡಿಸುತ್ತಿದ್ದಾರೆ ಎಂದು ಆರೋಪಿಸಿದರು.
ಜನರಿಗೆ ಕಾಂಗ್ರೆಸ್ ಬಗ್ಗೆ ತಪ್ಪು ಮಾಹಿತಿ ನೀಡುವ ಮೂಲಕ ತೇಜೋವಧೆ ಮಾಡಲು ಹೋಗುತ್ತಿದ್ದಾರೆ. ಆದರೆ ಜನರು ನಮ್ಮ ಪರ ಇದ್ದಾರೆ. ಮುಂದಿನ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಿರಂತರ ಸ್ಥಳೀಯ ಸುದ್ದಿಯನ್ನು ಪಡೆಯಲು ಪೋಸ್ಟ್ ಮ್ಯಾನ್ ನ್ಯೂಸ್ ನ ಫೇಸ್ಬುಕ್ ಪೇಜ್ ನ್ನು ಲೈಕ್ ಮಾಡಿ. 👇👇👇
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್