Headlines

ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿಯಲ್ಲಿ ಸಕಾಲದ ಮಾಹಿತಿಯ ಫಲಕ ಕಾಣೆ :

ಹೊಸನಗರ: ಇಲ್ಲಿನ ಸಮೀಪದ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿಯಲ್ಲಿ ಸಾಮಾನ್ಯ ಜನರಿಗೆ ಮಾಹಿತಿ ನೀಡುವ ಸಕಾಲ ದ ಫಲಕ ಕಾಣೆಯಾಗಿದೆ.

ಸಾಮಾನ್ಯ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಕಾಲ ದ ಫಲಕ ಹಾಕುವುದು ಕಡ್ಡಾಯವಾಗಿದೆ ಆದರೆ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿಯಲ್ಲಿ ಹೊಸ ಕಟ್ಟಡಕ್ಕೆ ಕಛೇರಿ ವರ್ಗಗೊಂಡಿದ್ದು ಹಳೆ ಪಂಚಾಯಿತಿಯನ್ನು ಸ್ವಚ್ಚ ಸಂಕೀರ್ಣ ಅಡಿಯಲ್ಲಿ ಸಿದ್ದಪಡಿಸಿದ್ದಾರೆ.
ಆದರೆ ಸಾಮಾನ್ಯ ಜನರಿಗೆ ಅರಿವು ಮೂಡಿಸುವ ಸಲುವಾಗಿ ಹಾಕುವ ಸಕಾಲ ಫಲಕ ಇನ್ನೂ ಸ್ವಚ್ಚ ಸಂಕೀರ್ಣ ಕಟ್ಟಡದಲ್ಲಿ ಕೊಳೆಯುತ್ತಿದೆ.

ಈ ಬಗ್ಗೆ ಮಾದ್ಯಮ ಪ್ರತಿನಿಧಿಗಳು ಪಂಚಾಯತ್ ಅಭಿವೃದ್ದಿ ಅಧಿಕಾರಿಗಳನ್ನು ಪ್ರಶ್ನಿಸಿದರೆ ಅವರು ಕೆಂಡಾಮಂಡಲರಾಗಿ ಸರಕಾರಿ ಆದೇಶಕ್ಕೂ ತಮಗೂ ಸಂಬಂಧವಿಲ್ಲದಂತೆ ವರ್ತಿಸುತಿದ್ದಾರೆ.

.       ಸ್ವಚ್ಚ ಸಂಕೀರ್ಣ ಕಟ್ಟಡದಲ್ಲಿ ಕೊಳೆಯುತ್ತಿರುವ ಸಕಾಲ ಫಲಕ



ಒಟ್ಟಾರೆಯಾಗಿ ಸಾರ್ವಜನಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಅಳವಡಿಸುವ ಸಕಾಲ ಫಲಕವನ್ನು ಸಂಬಂಧಪಟ್ಟ ಅಧಿಕಾರಿಗಳು ಹೊಸ ಗ್ರಾಮ ಪಂಚಾಯತಿಯಲ್ಲಿ ಅಳವಡಿಸಿ ಸಾಮಾನ್ಯ ಜನರಿಗೆ ಅನುಕೂಲ ಮಾಡಿಕೊಡಬೇಕು ಎನ್ನುವುದು ಗ್ರಾಮಸ್ಥರ ಆಗ್ರಹ.



ವರದಿ: ದೇವರಾಜ್ ರಿಪ್ಪನ್ ಪೇಟೆ

About The Author

Leave a Reply

Your email address will not be published. Required fields are marked *

Exit mobile version