ಆನೇಕಲ್: ‘ರೇಪ್ ಆಗಿದ್ದು ಅಲ್ಲಿ, ಕಾಂಗ್ರೆಸ್ನವರು ನನ್ನನ್ನು ಅತ್ಯಾಚಾರ ಮಾಡುತ್ತಿದ್ದಾರೆ’ ಎಂಬ ಮಾತನ್ನು ಹಿಂಪಡೆಯುವುದಾಗಿ ಸೆಂಟ್ರಲ್ ಜೈಲಿನ ಬಳಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ನನಗೆ ಬಹಳ ಆತಂಕ ಆಗಿತ್ತು, ಆತಂಕದಲ್ಲಿ ಈ ಮಾತು ಹೇಳಿದ್ದೆ. ನಾನು ನೀಡಿದ್ದ ಹೇಳಿಕೆ ಹಿಂಪಡೆಯುತ್ತೇನೆ. ಸಂತ್ರಸ್ತೆಯನ್ನು ನನ್ನ ಮಗಳ ಸ್ಥಾನದಲ್ಲಿ ನೋಡುವೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.
ತಮ್ಮ ಈ ಮಾತು ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಗೃಹ ಇಲಾಖೆ ಸಚಿವ ಆರಗ ಜ್ಞಾನೇಂದ್ರ, ಕಾಂಗ್ರೆಸ್ನವರು ಗೃಹ ಸಚಿವರ ಮೇಲೆ ರೇಪ್ ಮಾಡ್ತಿದ್ದಾರೆ ಎಂದು ಅವರ ಮನಸ್ಸಿಗೆ ನೋವು ಮಾಡುವುದಕ್ಕೆ ಈ ಮಾತು ಹೇಳಿಲ್ಲ. ತಮಾಷೆ ರೀತಿಯಲ್ಲಿ ಮಾತಾಡಿದ್ದೇನೆ ಎಂದು ತಿದ್ದಿಕೊಂಡಿದ್ದರು.
ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ರೇಪ್ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ನವರು ರಾಜಕೀಯ ಲಾಭ ಗಳಿಸಲು ಯತ್ನಿಸುತ್ತಿದ್ದಾರೆ. ಅತ್ಯಾಚಾರ ಆಗಿದ್ದು ಅಲ್ಲಿ, ಆದರೆ ಕಾಂಗ್ರೆಸ್ನವರು ನನ್ನನ್ನು ರೇಪ್ ಮಾಡ್ತಿದ್ದಾರೆ’ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅಲ್ಲಿ ಆಗಿರುವುದು ಅಮಾನುಷವಾದ ಕೆಲಸ. ಅದನ್ನು ಮಾನವೀಯ ದೃಷ್ಟಿಯಿಂದ ನೋಡಿ, ಡಿಟೆಕ್ಟ್ ಮಾಡಿ ಅನ್ನಬೇಕು. ಕಾಂಗ್ರೆಸ್ನವರು ಹಾಗೆ ಮಾಡದೇ ನನ್ನ ಮೇಲೆ ಹರಿಹಾಯುತ್ತಿದ್ದಾರೆ. ಈ ಪ್ರಕರಣದಲ್ಲೂ ರಾಜಕೀಯ ಮಾಡಲು ಹೋಗಬಾರದು ಎಂದು ಅವರು ಕಿಡಿಕಾರಿದ್ದರು.
ಆ ಯುವಕ, ಯುವತಿ ಸಂಜೆ 7.30ರ ವೇಳೆಗೆ ನಿರ್ಜನ ಪ್ರದೇಶಕ್ಕೆ ಹೋಗಬಾರದಿತ್ತು. ಆದರೆ ಹೋಗಬೇಡಿ ಅಂತಾ ತಡೆಯೋದಕ್ಕೂ ಆಗೋದಿಲ್ಲ. ಸದ್ಯಕ್ಕೆ ಯುವಕ,ಯುವತಿ ಶಾಕ್ನಲ್ಲಿ ಇದ್ದಾರೆ. ಅವರ ಸಂಪೂರ್ಣ ಸ್ಟೇಟ್ ಮೆಂಟ್ ಪಡೆಯಲು ಆಗಿಲ್ಲ. ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಎಂದು ಸಹ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದರು.
ತಮ್ಮ ಈ ಮಾತು ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಗೃಹ ಇಲಾಖೆ ಸಚಿವ ಆರಗ ಜ್ಞಾನೇಂದ್ರ, ಕಾಂಗ್ರೆಸ್ನವರು ಗೃಹ ಸಚಿವರ ಮೇಲೆ ರೇಪ್ ಮಾಡ್ತಿದ್ದಾರೆ ಎಂದು ಅವರ ಮನಸ್ಸಿಗೆ ನೋವು ಮಾಡುವುದಕ್ಕೆ ಈ ಮಾತು ಹೇಳಿಲ್ಲ. ತಮಾಷೆ ರೀತಿಯಲ್ಲಿ ಮಾತಾಡಿದ್ದೇನೆ ಎಂದು ತಿದ್ದಿಕೊಂಡಿದ್ದರು. ಘಟನೆಗೆ ಯಾರು ಕಾರಣ ಅವರನ್ನ ಹಿಡಿಯುತ್ತೇವೆ. 12 ಗಂಟೆಯಲ್ಲಿ FIR ಆಗಿದೆ. ಆರೋಪಿಗಳನ್ನ ಬಂಧಿಸುತ್ತೇವೆ ಎಂದು ಹೇಳಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್