ಶಿವಮೊಗ್ಗ: ಕ್ಷುಲ್ಲಕ ಕಾರಣಕ್ಕೆ ನಗರದಲ್ಲಿ ಇಂದು ಹಾಡುಹಗಲೇ ಭೀಕರ ಕೊಲೆಯಾಗಿದೆ. ಚಾಕುವಿನಿಂದ ಇರಿದು ಈ ಕೊಲೆ ಮಾಡಲಾಗಿದ್ದು, ನಗರದ ಟ್ಯಾಂಕ್ ಮೊಹಲ್ಲಾದಲ್ಲಿ ಈ ಘಟನೆ ನಡೆದಿದೆ.
ರಾಹಿಲ್(20) ಕೊಲೆಯಾದ ಯುವಕನಾಗಿದ್ದು, ಅಜ್ಗರ್(19) ಕೊಲೆಮಾಡಿರುವ ಯುವಕನಾಗಿದ್ದಾನೆ.ನಿನ್ನೆ ಸಂಜೆ ಕೊಲೆ ಆರೋಪಿ ಅಜ್ಗರ್ ತಂದೆಯು ಟ್ಯಾಂಕ್ ಮೊಹಲ್ಲಾ ರಸ್ತೆಯಲ್ಲಿ ಸೈಕಲ್ ನಲ್ಲಿ ಬರುತ್ತಿದ್ದ ವೇಳೆ, ರಾಹಿಲ್ ನ ಬೈಕ್ ಡಿಕ್ಕಿ ಹೊಡೆದಿತ್ತು. ಈ ವಿಚಾರದಲ್ಲಿ ತನ್ನ ತಂದೆಯ ಸೈಕಲ್ ರಿಪೇರಿ ಮಾಡಿಕೊಡುವಂತೆ ಅಜ್ಗರ್ ತಿಳಿಸಿದ್ದನಂತೆ. ಈ ವೇಳೆ ಮಾತಿಗೆ ಮಾತು ಬೆಳೆದು ರಾಹಿಲ್ ನು ಅಜ್ಗರ್ ತಂದೆಗೆ ಕಪಾಳಕ್ಕೆ ಹೊಡೆದಿದ್ದು, ಸ್ಥಳಿಯರು ಜಗಳ ಬಿಡಿಸಿದ್ದರು ಎನ್ನಲಾಗಿದೆ.
ಆದರೆ, ಇಂದು ಅಜ್ಗರ್, ತನ್ನ ತಂದೆಗೆ ಹೊಡೆದಿದ್ದನ್ನು ಮನಸ್ಸಿನಲ್ಲಿ ಇಟ್ಟುಕೊಂಡು, ರಾಹಿಲ್ ಟ್ಯಾಂಕ್ ಮೊಹಲ್ಲಾ ಎರಡನೇ ತಿರುವಿನಲ್ಲಿ ನಿಂತಿರುವಾಗ ಬಂದು ಮಾತಾನಾಡಿಸುತ್ತಾ ಚಾಕುವಿನಿಂದ ಹೊಟ್ಟೆಗೆ ತಿವಿದಿದ್ದಾನೆ. ಈ ಸಂದರ್ಭದಲ್ಲಿ ರಾಹಿಲ್ ನ ಹೊಟ್ಟೆ ಭಾಗದಿಂದ ರಕ್ತ ಚೆಲ್ಲಿದ್ದು, ಸ್ಥಳೀಯರು ಅಟೋದಲ್ಲಿ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ದಾರಿ ಮಧ್ಯೆ ರಾಹಿಲ್ ಪ್ರಾಣ ಬಿಟ್ಟಿದ್ದಾನೆ.
ನಗರದ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಡಿ.ವೈ.ಎಸ್.ಪಿ. ಪ್ರಶಾಂತ್ ಮುನ್ನೋಳಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಕೊಲೆ ಆರೋಪಿ ಅಜ್ಗರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…
ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್ಪೇಟೆಯ ಅಪೇಕ್ಷಾಗೆ ರನ್ನರ್ಅಪ್ ಸಾಧನೆ Ripponpete's Apeksha K. secured second place and runner-up…
ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…
ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…
ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…