ತೀರ್ಥಹಳ್ಳಿ: ಶಿವಮೊಗ್ಗದಿಂದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169 ತೀರ್ಥಹಳ್ಳಿಯ ಭಾರತಿಪುರ ಎಂಬಲ್ಲಿ ಅಪಾಯಕಾರಿಯಾಗಿ ಕುಸಿದಿದೆ.
ಈ ಮಾರ್ಗವಾಗಿ ಅತಿಭಾರದ ವಾಹನಗಳು ಓಡಾಡುವುದರಿಂದ ರಸ್ತೆ ಇನ್ನಷ್ಟು ಕುಸಿದು ಜೀವಹಾನಿಯಾಗಬಹುದು ಮತ್ತು ರಸ್ತೆಯ ಸಂಪರ್ಕ ಸಂಪೂರ್ಣವಾಗಿ ಕಡಿತಗೊಳ್ಳಲೂಬಹುದು.
ರಸ್ತೆಯ ಪಕ್ಕದಲ್ಲಿರುವ ತೋಟಗಳ ಮಾಲಿಕರು ತೋಟಗಳಿಗಾಗಿ ಮಣ್ಣು ತೆಗೆದ ಪರಿಣಾಮವಾಗಿ ರಸ್ತೆ ಕುಸಿತ ಕಂಡಿದೆ ಎಂಬುದು ಸ್ಥಳೀಯರ ಮಾತು.
ಹೆಚ್ಚು ಮಳೆಯಾಗುವ ಪ್ರದೇಶಗಳು ಹಾಗು ಮಲೆನಾಡಿನಲ್ಲಿ ರಸ್ತೆಯ ಪಕ್ಕದ ಗುಡ್ಡಗಳು ಮಳೆಗಾಲದಲ್ಲಿ ಕುಸಿಯುವುದು ಸಾಮಾನ್ಯ ಆದರೆ ಇಲ್ಲಿ ಮೂವತ್ತು ಪ್ರತಿಶತ ರಸ್ತೆ ಕುಸಿತಕ್ಕೊಳಗಾಗಿದೆಯಾದ್ದರಿಂದ ಆತಂಕ ಸೃಷ್ಟಿಯಾಗಿದೆ.
ಜಿಲ್ಲಾಡಳಿತ ಕೂಡಲೇ ಬಾರಿ ಗಾತ್ರದ ಸರಕು ಸಾಗಣೆ ವಾಹನಗಳಿಗೆ ತಡೆ ಹಾಕದಿದ್ದಲ್ಲಿ ಅವಗಡಗಳು ಸಂಭವುಸುವುದರಲ್ಲಿ ಸಂಶಯವಿಲ್ಲ.
ವರದಿ: ಪ್ರಶಾಂತ್ ಮೇಗರವಳ್ಳಿ:
ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್