Categories: Blog

ತೀರ್ಥಹಳ್ಳಿ: ನಾಡಿಗಾಗಿ ತ್ಯಾಗ ಮಾಡಿದ ಶರಾವತಿ ಸಂತ್ರಸ್ತರ ರೈತರ ಬದುಕು ರೂಪಿಸಲು ಗೃಹ ಸಚಿವರಿಗೆ ಮನವಿ

ತೀರ್ಥಹಳ್ಳಿ: ತಾಲೂಕಿನಲ್ಲಿ ಪುನರ್ವಸತಿ ಪಡೆದಿರುವ ಶರಾವತಿ ಮುಳುಗಡೆ ಸಂತ್ರಸ್ತರ ಬದುಕುವ ಹಕ್ಕನ್ನು ಪುನಶ್ಚೇತನಗೊಳಿಸಲು ವಾಸದ ಮನೆಗಳಿಗೆ ಹಾಗೂ ಸಾಗುವಳಿ ಭೂಮಿಗೆ ಹಕ್ಕುಪತ್ರ ನೀಡುವ ಕಾನೂನು ಪ್ರಕ್ರಿಯೆಯನ್ನು ಚುರುಕುಗೊಳಿಸಿ ನ್ಯಾಯ ಒದಗಿಸಿಕೊಡುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರರವರಿಗೆ ಹಣಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಅರೆನಲ್ಲಿ, ಕರಕುಚ್ಚಿ, ಸಂಕ್ಲಾಪುರ, ಕೊಂಬಿನ ಕೈ ಮತ್ತು ದೆಂಬ್ಲಾಪುರ, ಕೋಣಂದೂರಿನ ಗ್ರಾಮಸ್ಥರು ಮತ್ತು ಶರಾವತಿ ಮುಳುಗಡೆ ಸಂತ್ರಸ್ತರು ಮತ್ತು ರೈತರು ಸೋಮವಾರ ಮನವಿ ನೀಡಿದರು.

ಕಳೆದ ಸುಮಾರು ಎಪ್ಪತ್ತು ವರ್ಷಗಳಿಂದ ಶರಾವತಿ ವಿದ್ಯುತ್ ಯೋಜನೆ ಮನೆ ಮತ್ತು ಸಾಗುವಳಿ ಭೂಮಿಯನ್ನು ಕಳೆದುಕೊಂಡ ಸಂತ್ರಸ್ತರು ನಾಡಿಗಾಗಿ ತ್ಯಾಗ ಮಾಡಿ ಶಿವಮೊಗ್ಗ ಜಿಲ್ಲಾದ್ಯಂತ ಅದರಲ್ಲೂ ತಾಲೂಕಿನ ಹಣಗೆರೆ ಸುತ್ತಮುತ್ತ ಹಾಗೂ ಕೋಣಂದೂರು ದೆಮ್ಲಾಪುರ ಕೆಲವು ಗ್ರಾಮಗಳಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಗಳೆಂದು ವಿಂಗಡಿಸದೇ ಪುರರ್ವಸತಿಯಾಗಿರುತ್ತೇವೆ‌ ಸದರಿ ಭೂಮಿಗಳಲ್ಲಿ ಕಳೆದ ಏಳು ದಶಕಗಳಿಂದ ವಾಸವಿದ್ದು ಜಮೀನುಗಳಲ್ಲಿ ಸಾಗುವಳಿ ಮಾಡಿಕೊಂಡು ಸ್ವಾಧೀನ ಅನುಭವ  ಹೊಂದಿರುತ್ತೇವೆ.
ನಮಗೆ ಕಳೆದ ಸುಮಾರು ಎಪ್ಪತ್ತು ವರ್ಷಗಳಿಂದ ಕಾನೂನಿನ ಪ್ರಕ್ರಿಯೆಯನ್ನು ತಾರ್ಕಿಕವಾಗಿ ಮುಕ್ತಾಯಗೊಳಿಸಿ ಅಧಿಕೃತವಾಗಿ ಜಿಲ್ಲಾಢಳಿತದ ತಹಶೀಲ್ದಾರ್ ಮೂಲಕ ಹಕ್ಕು ಪತ್ರಗಳು ಸಿಕ್ಕಿರುವುದಿಲ್ಲ. ಆದರೆ ಈ ಪ್ರಕ್ರಿಯೆ ನಿಕಟಪೂರ್ವ ಗೌರವಾನ್ವಿತ ಮುಖ್ಯಮಂತ್ರಿಗಳು ವಿಶೇಷ ಕೋಶವೊಂದನ್ನು ರಚಿಸಿ ಅಧಿಕಾರಿಗಳನ್ನು ನೇಮಕಗೊಳಿಸಿ ಈ ಸಮಸ್ಯೆ ನ್ಯಾಯ ಒದಗೊಸಲು  ಪ್ರಯತ್ನಿಸಿರುವುದು ಶರಾವತಿ ಮುಳುಗಡೆ ಸಂತ್ರಸ್ತರ ಜೀವನದಲ್ಲಿ ಆಶಾಕಿರಿಣ ಮೂಡಿಸಿದೆ. ಈ ಪ್ರಕ್ರಿಯೆಗೆ ವಿಶೇಷ ಪ್ರಯತ್ನ ಮಾಡಿರುವ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೆ ಎಸ್ ಈಶ್ವರಪ್ಪ, ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ, ಅಶೋಕ್ ನಾಯ್ಕ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪನವರ ಹೆಸರನ್ನು ಸುವರ್ಣಾಕ್ಷರದಲ್ಲಿ ಬರೆದಿಡುತ್ತೇವೆ.

ಯಡಿಯೂರಪ್ಪನವರು ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿ ವಿಶೇಷ ಕೋಶವನ್ನು ಸ್ಥಾಪಿಸಿದ ಮೇಲೆ ತಾವು ತಹಶೀಲ್ದಾರ್, ಅರಣ್ಯ ಇಲಾಖೆ ಅಧಿಕಾರಿಗಳು ಭೂ ದಾಖಲೆಗಳ ಇಲಾಖಾಧಿಕಾರಿಗಳು, ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಚುನಾಯಿತ ಪ್ರತಿನಿಧಿಗಳನ್ನೊಳಗೊಂಡ ಹಲವಾರು ಸಭೆಗಳನ್ನು ಮುಳುಗಡೆ ಸಂತ್ರಸ್ತರು ಇರುವ ಪ್ರದೇಶದಲ್ಲೇ ಆಯೋಜಿಸಿ ಗ್ರಾಮಸ್ಥರೊಂದಿಗೆ ಸಂವಾದ ನಡೆಸಿ ಕಾನೂನಾತ್ಮಕ ಸಮಾಧಾನಕರವಾಗಿ ಇತ್ಯರ್ಥ ಪಡಿಸಿಕೊಳ್ಳುವುದಕ್ಕಾಗಿ ಪ್ರಯತ್ನಿಸಿರುವುದು ಸಂತ್ರಸ್ತರಿಗೆ ಸಂತೋಷ ತರುವ ವಿಚಾರವಾಗಿದೆ ಈಗಾಗಲೇ ಸಂಬಂಧಪಟ್ಟ ಅನೇಕ ಅಧಿಕಾರಿಗಳು ಒಂದೆರಡು ತಿಂಗಳುಗಳ ಕಾಲ ಸ್ಥಳದಲ್ಲೇ ಠಿಕಾಣಿ ಹೂಡಿ ಜಂಟಿ ಸರ್ವೆ ನಡೆಸಿರುವುದು ಕಳೆದ ಹಲವಾರು ದಶಕಗಳ ಕಾಲ ನಡೆಯದ ಕೆಲಸ ಈ ಆಗುತ್ತಿದೆ‌ ಎನ್ನುವ ಸಮಾಧಾನ ನಮ್ಮಲ್ಲಿ ಮೂಡಿಸಿತ್ತು. ಈ ಎಲ್ಲಾ ಪ್ರಕ್ರಿಯೆಗೆ ತಾವು ಬೆಂಗಾಲಾಗಿರುವುದು ನಮಗೆ ಆನೆ ಬಲ ಬಂದಿತ್ತು.

ಆದರೆ ಕೆಲವರು ಕರ್ನಾಟಕದ ಉಚ್ಛ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿ ಶರಾವತಿ ಮುಳುಗಡೆ ಸಂತ್ರಸ್ತರ ಅಳಲನ್ನು ಹೇಳಿಕೊಳ್ಳಲು ಅವಕಾಶ ನೀಡದೇ ಸರ್ಕಾರದ ಆದಿ ಸೂಚನೆಗೆ ಕೊಡಲಿ ಪೆಟ್ಟು ಕೊಡಿಸಿರುವುದು ನಮಗೆ ಆಘಾತ ನೀಡಿರುತ್ತದೆ. ನಾವೀಗ ದಾರಿ ಕಾಣದೆ ಕಂಗಾಲಾಗಿರುತ್ತೇವೆ  ಮುಂದಿನ ಬದುಕು ಹೇಗೆ ಎಂಬ ಚಿಂತೆ ನಮ್ಮನ್ನು ಕಾಡುತ್ತಿದೆ. ಇದಕ್ಕೆ ತಾವು ಪರಿಹಾರ ರೂಪಿಸಿ ಕೊಡಬೇಕೆಂದು ಶರಾವತಿ ಮುಳುಗಡೆ ರೈತರ ನೆರವಿಗೆ ಬರಬೇಕು ಎಂದು ನೂರಾರು ಸಂಖ್ಯೆಯಲ್ಲಿ ಸಂತ್ರಸ್ತರು ಗೃಹ ಸಚಿವ ಆರಗ ಜ್ಞಾನೇಂದ್ರ ರವರಲ್ಲಿ ಮನವಿ ಮಾಡಿದ್ದಾರೆ.




ವರದಿ : ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

4 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

4 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

5 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago