Categories: Blog

ನಂದಿತಾ ಸಾವಿನ ಪ್ರಕರಣ ಸಿಬಿಐ ಗೆ ವಹಿಸಿ :ಕಾಂಗ್ರೆಸ್ ಮುಖಂಡ ಅಮ್ರಪಾಲಿ ಸುರೇಶ್

ತೀರ್ಥಹಳ್ಳಿ: ನೂತನವಾಗಿ ಗೃಹ ಸಚಿವರಾಗಿ ಆಯ್ಕೆಯಾಗಿರುವ ಆರಗ ಜ್ಞಾನೇಂದ್ರರವರು ತೀರ್ಥಹಳ್ಳಿಯ ನಂದಿತಾ ಸಾವಿನ ಪ್ರಕರಣವನ್ನು ಸಿಬಿಐ ಗೆ ವಹಿಸಿ ನ್ಯಾಯ ಕೊಡಿಸುವ ಮೂಲಕ ಸತ್ಯಾಂಶವನ್ನು ಜನರ ಮುಂದಿಡಬೇಕು ಎಂದು ತೀರ್ಥಹಳ್ಳಿ ಕಾಂಗ್ರೆಸ್ ಮುಖಂಡರಾದ ಅಮ್ರಪಾಲಿ ಸುರೇಶ್ ರವರು ಆಗ್ರಹಿಸಿದ್ದಾರೆ.

ಕರ್ನಾಟಕ ಸರ್ಕಾರದ ಅತಿಮುಖ್ಯ ಮತ್ತು ಎರಡನೇ ಮಹತ್ವದ ಖಾತೆಯನ್ನು ಅಲಂಕರಿಸಿದ್ದೀರಿ, ಅಭಿನಂದನೆಗಳು.
ತೀರ್ಥಹಳ್ಳಿಯ ನಾಗರೀಕರಿಗೆ ನಿಮ್ಮ‌ಮೇಲೆ ಅತೀವ ನಿರೀಕ್ಷೆಯಿದೆ . ತಾವು ಪಕ್ಷದಲ್ಲೂ ಅತಿ ಪ್ರಭಾವಿಗಳು,ನೇರವಾಗಿ ದೆಹಲಿಯ ಸಂಪರ್ಕ ಹೊಂದಿರುವ ನಾಯಕರು. ಕಳೆದ ಚುನಾವಣೆಯಲ್ಲಿ ಅಂದಿನ‌ ನಿಮ್ಮ‌ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಇಂದಿನ ಗೃಹ ಸಚಿವರಾದ  ಅಮಿತ್ ಷಾರವರನ್ನು‌ ತೀರ್ಥಹಳ್ಳಿಗೆ ಕರೆ ತಂದು ನಂದಿತಾಳ ಮನೆಯಲ್ಲಿ ನ್ಯಾಯ ಕೊಡಿಸುವ ಸಂಕಲ್ಪ ಕೂಡಾ ಮಾಡಿರುತ್ತೀರಿ.

ಈಗ ಇನ್ನಾದರು ಈ ನಿಟ್ಟಿನಲ್ಲಿ‌ ಕಾರ್ಯ ಪೃವೃತ್ತರಾಗಬಹುದೆಂದು ಜನ‌ ನಿರಿಕ್ಷಿಸುತ್ತಿದ್ದಾರೆ.ಆದಷ್ಟು ಬೇಗ ಈ ಪ್ರಕರಣವನ್ನು ಸಿಬಿಐ ಗೆ ವಹಿಸಿ ನಿಜಾಂಶ ಜನರ ಮುಂದಿಡಬೇಕಾಗಿದೆ ಎಂದರು.

     [ ಅಮ್ರಪಾಲಿ ಸುರೇಶ್  –  ಕಾಂಗ್ರೆಸ್‌ ಮುಖಂಡರು      ]



ಅಂದು ನಡೆದ ದೊಂಬಿ ದಾಂಧಲೆಗಳಿಂದ ಹಲವಾರು ಸಾರ್ವಜನಿಕ ಮತ್ತು ಖಾಸಗಿ ಆಸ್ತಿಪಾಸ್ತಿಗಳು ಹಾನಿಯಾಗಿ ಕೋಟ್ಯಾಂತರ ರೂಪಾಯಿ ನಷ್ಟವಾಗಿತ್ತು, ನೂರಾರು ಯುವಕರು ಕೊರ್ಟ್ ಕಟಕಟೆ ಎಂದು ಅಲೆದದ್ದನ್ನು ತಾವು ಮರೆಯಬಾರದು.

ಇನ್ನೂ ನಿಮ್ಮ‌ ಬಳಿ‌ ಹತ್ತೊಂಬತ್ತು ತಿಂಗಳ ಕಾಲಾವಧಿ‌ಇದೆ , ತಾವುಗಳು ಆ ಸಮಯವನ್ನು ಸರಿಯಾಗಿ ಬಳಸಿ ಸಾವಿಗೆ ಕಾರಣರಾದವರನ್ನು ಶಿಕ್ಷೆಗ ಒಳಪಡಿಸಬೇಕು. ಇಲ್ಲವಾದಲ್ಲಿ ಮತ್ತೆ ಬರುವ ಚುನಾವಣೆಯಲ್ಲಿ ಅನುಕಂಪ ಗಿಟ್ಟಿಸುವ ಭಾಗವಾಗಿ ಈ ಪ್ರಕರಣ ಬಳಕೆ‌ ಮಾಡುವ ಹುನ್ನಾರವಿದೆ ಎಂದು ತೀರ್ಥಹಳ್ಳಿಯ ಜನ ಭಾವಿಸುತ್ತಾರೆ.

ಶಾಂತಿ‌ ಪ್ರಿಯರು, ಸಹಬಾಳ್ವೆಯ ಬೀಡಾಗಿದ್ದ‌ ತೀರ್ಥಹಳ್ಳಿ‌ ಕ್ಷೇತ್ರದ ಕೋಮು ಸಾಮರಸ್ಯ, ಶಾಂತಿ ಕದಡಿದ ಈ ಕೋಮು ಪ್ರಕರಣಕ್ಕೆ ತಾರ್ಕಿಕ ಅಂತ್ಯ ಹಾಡದಿದ್ದಲ್ಲಿ ತಾವು ಹಾಗೂ ತಮ್ಮ‌ ಪಕ್ಷದವರೇ ಈ ಪ್ರಕರಣಕ್ಕೆ ನೇರ ಹೊಣೆಗಾರರು ಎಂದು ಜನತೆ ಭಾವಿಸಬೇಕಾಗುತ್ತದೆ.ಎಂದು ಕಾಂಗ್ರೆಸ್ ಮುಖಂಡರಾದ ಅಮ್ರಪಾಲಿ ಸುರೇಶ್ ತಿಳಿಸಿದ್ದಾರೆ.


ವರದಿ : ಪ್ರಶಾಂತ್ ಮೇಗರವಳ್ಳಿ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

5 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

6 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

6 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago